Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...