Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...