Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

ಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವ ಮೂಲಕ ಪ್ರಜಾತಾಂತ್ರಿಕ ಮೌಲ್ಯಗಳು ಮತ್ತು ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜನಬೆಂಬಲ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಹೀಗೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತರಕು ಮತ್ತು ಸಾಹಿತಿಗಳು, ಸುಪ್ರೀಂ ಕೋರ್ಟ್ ಹಠಕ್ಕೆ ಬಿದ್ದಂತೆ ಎರಡು ಟ್ವೀಟ್ ಗಳನ್ನೇ ನೆಪ ಮಾಡಿಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ, ಹೋರಾಟಗಾರ ಸಿ.ಯತಿರಾಜು, ‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿರುವ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಮಹೇಕ್ ಮಹೇಶ್ವರಿ ಎಂಬ ವಕೀಲರು ಅರ್ಜಿ ಸಲ್ಲಿಸಿದ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ’ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ನೆಪಮಾಡಿಕೊಂಡು ಕಾರ್ಮಿಕ ಕಾಯ್ದೆಗಳನ್ನು ಸಡಿಲಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಎಪಿಎಂಸಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತಂದು ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಇದೊಂದು ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಇದೇ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನ್ಯಾಯಮೂರ್ತಿಗಳು ಕೂಡ ವಿಮರ್ಶೆಗೆ ಅತೀತರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಾಹರ್  ‘ಸುಪ್ರೀಂಕೋರ್ಟ್ ನಲ್ಲಿ ಸಮಸ್ಯೆಗಳು ಪರಿಹರಿಸಲು ಕ್ರಮ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಿದರೆ, ಸಮಸ್ಯೆ ಏನೆಂದೂ ಕೇಳುವ ಗೋಜಿಗೆ ಹೋಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಪಿಐಎಲ್ ಗಳನ್ನು ತಿರಸ್ಕರಿಸಲಾಗಿದೆ. ಹಾಗಾದರೆ ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಈಗಿನ ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ನ್ಯಾಯಾಂಗವೂ ಅದೇ ಹಾದಿಯಲ್ಲಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ‘ಕೊಲೆಗಡುಕರು, ಬಂಡವಾಳಗಾರರು ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಾಲಯ ಕರ್ತವ್ಯವನ್ನು ಮರೆತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕೆಂದು ತೀರ್ಪು ನೀಡಿದೆ. ಪಾಲನೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುವ ಬಂಡವಾಳಗಾರರು ಮತ್ತು ಆಡಳಿತಗಾರರ ಪರವಾಗಿ ನ್ಯಾಯಾಂಗ ಕೆಲಸ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಮಾತನಾಡಿ ಸರ್ಕಾರಿ ನೌಕರು, ನ್ಯಾಯಾಧೀಶರು, ಪೊಲೀಸರಿಗೆ ನೀತಿ ಸಂಹಿತೆ ಇರುತ್ತದೆ. ಅದರಂತೆ ನ್ಯಾಯಾಧೀಶರು ರಾಜಕೀಯ, ಸಾಮಾಜಿಕ ಮತ್ತು ಹಣಕಾಸು ಸಂಬಂಧಿತ ವಿಷಯಗಳ ಜೊತೆ ಹೆಚ್ಚು ಬೆರೆಯುವ ಹಾಗಿಲ್ಲ. ಅದರಂತೆ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ಮಾಲಿಕತ್ವದ ಬೈಕ್ ಮೇಲೆ ಕುಳಿತಿರುವುದು ನ್ಯಾಯದಾನ ಮಾಡುವ ಸಂದರ್ಭದಲ್ಲಿ ಪಕ್ಷಪಾತಕ್ಕೆ ಅವಕಾಶವಾಗುತ್ತದೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ ಎಂದರು.

ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಎಐಟಿಯುಸಿ ಪ್ರಧಾನಕಾರ್ಯದರ್ಶಿ ಗಿರೀಶ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಿಕೆಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಎಐಯುಟಿಯುಸಿ ಮಂಜುಳ, ನಾವು ಭಾರತೀಯರು ಸಂಘಟನೆಯ ತಾಜುದ್ದೀನ್ ಷರೀಫ್ ಮಾತನಾಡಿ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪ್ರಾಂತ ರೈತ ಸಂಘದ ಸಂಚಾಲಕ ಸಿಅಜ್ಜಪ್ಪ, ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಕಲ್ಯಾಣಿ, ಎಐಡಿಎಸ್‍ಓ ಅಶ್ವಿನಿ, ಆವಿಷ್ಕಾರದ ಮುತ್ತುರಾಜು, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ರೈತ ಮುಖಂಡ ರವೀಶ್, ಸಾಹಿತಿ ಮಿರ್ಜಾ ಬಷೀರ್, ಕಾರ್ಮಿಕ ಮುಖಂಡ ಸಂದೀಪ್ಮೊ, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇದನ್ನೂ ಓದಿ: ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...