Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

ಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವ ಮೂಲಕ ಪ್ರಜಾತಾಂತ್ರಿಕ ಮೌಲ್ಯಗಳು ಮತ್ತು ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜನಬೆಂಬಲ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಹೀಗೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತರಕು ಮತ್ತು ಸಾಹಿತಿಗಳು, ಸುಪ್ರೀಂ ಕೋರ್ಟ್ ಹಠಕ್ಕೆ ಬಿದ್ದಂತೆ ಎರಡು ಟ್ವೀಟ್ ಗಳನ್ನೇ ನೆಪ ಮಾಡಿಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ, ಹೋರಾಟಗಾರ ಸಿ.ಯತಿರಾಜು, ‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿರುವ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಮಹೇಕ್ ಮಹೇಶ್ವರಿ ಎಂಬ ವಕೀಲರು ಅರ್ಜಿ ಸಲ್ಲಿಸಿದ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ’ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ನೆಪಮಾಡಿಕೊಂಡು ಕಾರ್ಮಿಕ ಕಾಯ್ದೆಗಳನ್ನು ಸಡಿಲಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಎಪಿಎಂಸಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತಂದು ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಇದೊಂದು ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಇದೇ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನ್ಯಾಯಮೂರ್ತಿಗಳು ಕೂಡ ವಿಮರ್ಶೆಗೆ ಅತೀತರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಾಹರ್  ‘ಸುಪ್ರೀಂಕೋರ್ಟ್ ನಲ್ಲಿ ಸಮಸ್ಯೆಗಳು ಪರಿಹರಿಸಲು ಕ್ರಮ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಿದರೆ, ಸಮಸ್ಯೆ ಏನೆಂದೂ ಕೇಳುವ ಗೋಜಿಗೆ ಹೋಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಪಿಐಎಲ್ ಗಳನ್ನು ತಿರಸ್ಕರಿಸಲಾಗಿದೆ. ಹಾಗಾದರೆ ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಈಗಿನ ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ನ್ಯಾಯಾಂಗವೂ ಅದೇ ಹಾದಿಯಲ್ಲಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ‘ಕೊಲೆಗಡುಕರು, ಬಂಡವಾಳಗಾರರು ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಾಲಯ ಕರ್ತವ್ಯವನ್ನು ಮರೆತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕೆಂದು ತೀರ್ಪು ನೀಡಿದೆ. ಪಾಲನೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುವ ಬಂಡವಾಳಗಾರರು ಮತ್ತು ಆಡಳಿತಗಾರರ ಪರವಾಗಿ ನ್ಯಾಯಾಂಗ ಕೆಲಸ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಮಾತನಾಡಿ ಸರ್ಕಾರಿ ನೌಕರು, ನ್ಯಾಯಾಧೀಶರು, ಪೊಲೀಸರಿಗೆ ನೀತಿ ಸಂಹಿತೆ ಇರುತ್ತದೆ. ಅದರಂತೆ ನ್ಯಾಯಾಧೀಶರು ರಾಜಕೀಯ, ಸಾಮಾಜಿಕ ಮತ್ತು ಹಣಕಾಸು ಸಂಬಂಧಿತ ವಿಷಯಗಳ ಜೊತೆ ಹೆಚ್ಚು ಬೆರೆಯುವ ಹಾಗಿಲ್ಲ. ಅದರಂತೆ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ಮಾಲಿಕತ್ವದ ಬೈಕ್ ಮೇಲೆ ಕುಳಿತಿರುವುದು ನ್ಯಾಯದಾನ ಮಾಡುವ ಸಂದರ್ಭದಲ್ಲಿ ಪಕ್ಷಪಾತಕ್ಕೆ ಅವಕಾಶವಾಗುತ್ತದೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ ಎಂದರು.

ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಎಐಟಿಯುಸಿ ಪ್ರಧಾನಕಾರ್ಯದರ್ಶಿ ಗಿರೀಶ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಿಕೆಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಎಐಯುಟಿಯುಸಿ ಮಂಜುಳ, ನಾವು ಭಾರತೀಯರು ಸಂಘಟನೆಯ ತಾಜುದ್ದೀನ್ ಷರೀಫ್ ಮಾತನಾಡಿ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪ್ರಾಂತ ರೈತ ಸಂಘದ ಸಂಚಾಲಕ ಸಿಅಜ್ಜಪ್ಪ, ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಕಲ್ಯಾಣಿ, ಎಐಡಿಎಸ್‍ಓ ಅಶ್ವಿನಿ, ಆವಿಷ್ಕಾರದ ಮುತ್ತುರಾಜು, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ರೈತ ಮುಖಂಡ ರವೀಶ್, ಸಾಹಿತಿ ಮಿರ್ಜಾ ಬಷೀರ್, ಕಾರ್ಮಿಕ ಮುಖಂಡ ಸಂದೀಪ್ಮೊ, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇದನ್ನೂ ಓದಿ: ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...