Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

ಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವ ಮೂಲಕ ಪ್ರಜಾತಾಂತ್ರಿಕ ಮೌಲ್ಯಗಳು ಮತ್ತು ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜನಬೆಂಬಲ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಹೀಗೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತರಕು ಮತ್ತು ಸಾಹಿತಿಗಳು, ಸುಪ್ರೀಂ ಕೋರ್ಟ್ ಹಠಕ್ಕೆ ಬಿದ್ದಂತೆ ಎರಡು ಟ್ವೀಟ್ ಗಳನ್ನೇ ನೆಪ ಮಾಡಿಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ, ಹೋರಾಟಗಾರ ಸಿ.ಯತಿರಾಜು, ‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿರುವ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಮಹೇಕ್ ಮಹೇಶ್ವರಿ ಎಂಬ ವಕೀಲರು ಅರ್ಜಿ ಸಲ್ಲಿಸಿದ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ’ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ನೆಪಮಾಡಿಕೊಂಡು ಕಾರ್ಮಿಕ ಕಾಯ್ದೆಗಳನ್ನು ಸಡಿಲಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಎಪಿಎಂಸಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತಂದು ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಇದೊಂದು ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಇದೇ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನ್ಯಾಯಮೂರ್ತಿಗಳು ಕೂಡ ವಿಮರ್ಶೆಗೆ ಅತೀತರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಾಹರ್  ‘ಸುಪ್ರೀಂಕೋರ್ಟ್ ನಲ್ಲಿ ಸಮಸ್ಯೆಗಳು ಪರಿಹರಿಸಲು ಕ್ರಮ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಿದರೆ, ಸಮಸ್ಯೆ ಏನೆಂದೂ ಕೇಳುವ ಗೋಜಿಗೆ ಹೋಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಪಿಐಎಲ್ ಗಳನ್ನು ತಿರಸ್ಕರಿಸಲಾಗಿದೆ. ಹಾಗಾದರೆ ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಈಗಿನ ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ನ್ಯಾಯಾಂಗವೂ ಅದೇ ಹಾದಿಯಲ್ಲಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ‘ಕೊಲೆಗಡುಕರು, ಬಂಡವಾಳಗಾರರು ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಾಲಯ ಕರ್ತವ್ಯವನ್ನು ಮರೆತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕೆಂದು ತೀರ್ಪು ನೀಡಿದೆ. ಪಾಲನೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುವ ಬಂಡವಾಳಗಾರರು ಮತ್ತು ಆಡಳಿತಗಾರರ ಪರವಾಗಿ ನ್ಯಾಯಾಂಗ ಕೆಲಸ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಮಾತನಾಡಿ ಸರ್ಕಾರಿ ನೌಕರು, ನ್ಯಾಯಾಧೀಶರು, ಪೊಲೀಸರಿಗೆ ನೀತಿ ಸಂಹಿತೆ ಇರುತ್ತದೆ. ಅದರಂತೆ ನ್ಯಾಯಾಧೀಶರು ರಾಜಕೀಯ, ಸಾಮಾಜಿಕ ಮತ್ತು ಹಣಕಾಸು ಸಂಬಂಧಿತ ವಿಷಯಗಳ ಜೊತೆ ಹೆಚ್ಚು ಬೆರೆಯುವ ಹಾಗಿಲ್ಲ. ಅದರಂತೆ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ಮಾಲಿಕತ್ವದ ಬೈಕ್ ಮೇಲೆ ಕುಳಿತಿರುವುದು ನ್ಯಾಯದಾನ ಮಾಡುವ ಸಂದರ್ಭದಲ್ಲಿ ಪಕ್ಷಪಾತಕ್ಕೆ ಅವಕಾಶವಾಗುತ್ತದೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ ಎಂದರು.

ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಎಐಟಿಯುಸಿ ಪ್ರಧಾನಕಾರ್ಯದರ್ಶಿ ಗಿರೀಶ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಿಕೆಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಎಐಯುಟಿಯುಸಿ ಮಂಜುಳ, ನಾವು ಭಾರತೀಯರು ಸಂಘಟನೆಯ ತಾಜುದ್ದೀನ್ ಷರೀಫ್ ಮಾತನಾಡಿ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪ್ರಾಂತ ರೈತ ಸಂಘದ ಸಂಚಾಲಕ ಸಿಅಜ್ಜಪ್ಪ, ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಕಲ್ಯಾಣಿ, ಎಐಡಿಎಸ್‍ಓ ಅಶ್ವಿನಿ, ಆವಿಷ್ಕಾರದ ಮುತ್ತುರಾಜು, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ರೈತ ಮುಖಂಡ ರವೀಶ್, ಸಾಹಿತಿ ಮಿರ್ಜಾ ಬಷೀರ್, ಕಾರ್ಮಿಕ ಮುಖಂಡ ಸಂದೀಪ್ಮೊ, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇದನ್ನೂ ಓದಿ: ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...