Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

ಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವ ಮೂಲಕ ಪ್ರಜಾತಾಂತ್ರಿಕ ಮೌಲ್ಯಗಳು ಮತ್ತು ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜನಬೆಂಬಲ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಹೀಗೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತರಕು ಮತ್ತು ಸಾಹಿತಿಗಳು, ಸುಪ್ರೀಂ ಕೋರ್ಟ್ ಹಠಕ್ಕೆ ಬಿದ್ದಂತೆ ಎರಡು ಟ್ವೀಟ್ ಗಳನ್ನೇ ನೆಪ ಮಾಡಿಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ, ಹೋರಾಟಗಾರ ಸಿ.ಯತಿರಾಜು, ‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿರುವ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಮಹೇಕ್ ಮಹೇಶ್ವರಿ ಎಂಬ ವಕೀಲರು ಅರ್ಜಿ ಸಲ್ಲಿಸಿದ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ’ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ನೆಪಮಾಡಿಕೊಂಡು ಕಾರ್ಮಿಕ ಕಾಯ್ದೆಗಳನ್ನು ಸಡಿಲಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಎಪಿಎಂಸಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತಂದು ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಇದೊಂದು ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಇದೇ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನ್ಯಾಯಮೂರ್ತಿಗಳು ಕೂಡ ವಿಮರ್ಶೆಗೆ ಅತೀತರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಾಹರ್  ‘ಸುಪ್ರೀಂಕೋರ್ಟ್ ನಲ್ಲಿ ಸಮಸ್ಯೆಗಳು ಪರಿಹರಿಸಲು ಕ್ರಮ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಿದರೆ, ಸಮಸ್ಯೆ ಏನೆಂದೂ ಕೇಳುವ ಗೋಜಿಗೆ ಹೋಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಪಿಐಎಲ್ ಗಳನ್ನು ತಿರಸ್ಕರಿಸಲಾಗಿದೆ. ಹಾಗಾದರೆ ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಈಗಿನ ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ನ್ಯಾಯಾಂಗವೂ ಅದೇ ಹಾದಿಯಲ್ಲಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ‘ಕೊಲೆಗಡುಕರು, ಬಂಡವಾಳಗಾರರು ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಾಲಯ ಕರ್ತವ್ಯವನ್ನು ಮರೆತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕೆಂದು ತೀರ್ಪು ನೀಡಿದೆ. ಪಾಲನೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುವ ಬಂಡವಾಳಗಾರರು ಮತ್ತು ಆಡಳಿತಗಾರರ ಪರವಾಗಿ ನ್ಯಾಯಾಂಗ ಕೆಲಸ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಮಾತನಾಡಿ ಸರ್ಕಾರಿ ನೌಕರು, ನ್ಯಾಯಾಧೀಶರು, ಪೊಲೀಸರಿಗೆ ನೀತಿ ಸಂಹಿತೆ ಇರುತ್ತದೆ. ಅದರಂತೆ ನ್ಯಾಯಾಧೀಶರು ರಾಜಕೀಯ, ಸಾಮಾಜಿಕ ಮತ್ತು ಹಣಕಾಸು ಸಂಬಂಧಿತ ವಿಷಯಗಳ ಜೊತೆ ಹೆಚ್ಚು ಬೆರೆಯುವ ಹಾಗಿಲ್ಲ. ಅದರಂತೆ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ಮಾಲಿಕತ್ವದ ಬೈಕ್ ಮೇಲೆ ಕುಳಿತಿರುವುದು ನ್ಯಾಯದಾನ ಮಾಡುವ ಸಂದರ್ಭದಲ್ಲಿ ಪಕ್ಷಪಾತಕ್ಕೆ ಅವಕಾಶವಾಗುತ್ತದೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ ಎಂದರು.

ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಎಐಟಿಯುಸಿ ಪ್ರಧಾನಕಾರ್ಯದರ್ಶಿ ಗಿರೀಶ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಿಕೆಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಎಐಯುಟಿಯುಸಿ ಮಂಜುಳ, ನಾವು ಭಾರತೀಯರು ಸಂಘಟನೆಯ ತಾಜುದ್ದೀನ್ ಷರೀಫ್ ಮಾತನಾಡಿ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪ್ರಾಂತ ರೈತ ಸಂಘದ ಸಂಚಾಲಕ ಸಿಅಜ್ಜಪ್ಪ, ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಕಲ್ಯಾಣಿ, ಎಐಡಿಎಸ್‍ಓ ಅಶ್ವಿನಿ, ಆವಿಷ್ಕಾರದ ಮುತ್ತುರಾಜು, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ರೈತ ಮುಖಂಡ ರವೀಶ್, ಸಾಹಿತಿ ಮಿರ್ಜಾ ಬಷೀರ್, ಕಾರ್ಮಿಕ ಮುಖಂಡ ಸಂದೀಪ್ಮೊ, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇದನ್ನೂ ಓದಿ: ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...