Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

ಪ್ರಶಾಂತ್ ಭೂಷಣ್ ಪ್ರಕರಣ ಕೈಬಿಡುವಂತೆ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡುವ ಮೂಲಕ ಪ್ರಜಾತಾಂತ್ರಿಕ ಮೌಲ್ಯಗಳು ಮತ್ತು ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜನಬೆಂಬಲ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಹೀಗೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತರಕು ಮತ್ತು ಸಾಹಿತಿಗಳು, ಸುಪ್ರೀಂ ಕೋರ್ಟ್ ಹಠಕ್ಕೆ ಬಿದ್ದಂತೆ ಎರಡು ಟ್ವೀಟ್ ಗಳನ್ನೇ ನೆಪ ಮಾಡಿಕೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದಿದ್ದಾರೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ, ಹೋರಾಟಗಾರ ಸಿ.ಯತಿರಾಜು, ‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿರುವ ಬಗ್ಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಮಹೇಕ್ ಮಹೇಶ್ವರಿ ಎಂಬ ವಕೀಲರು ಅರ್ಜಿ ಸಲ್ಲಿಸಿದ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ’ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ನೆಪಮಾಡಿಕೊಂಡು ಕಾರ್ಮಿಕ ಕಾಯ್ದೆಗಳನ್ನು ಸಡಿಲಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಎಪಿಎಂಸಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತಂದು ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಇದೊಂದು ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಇದೇ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನ್ಯಾಯಮೂರ್ತಿಗಳು ಕೂಡ ವಿಮರ್ಶೆಗೆ ಅತೀತರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಾಹರ್  ‘ಸುಪ್ರೀಂಕೋರ್ಟ್ ನಲ್ಲಿ ಸಮಸ್ಯೆಗಳು ಪರಿಹರಿಸಲು ಕ್ರಮ ವಹಿಸುವಂತೆ ಅರ್ಜಿಗಳನ್ನು ಸಲ್ಲಿಸಿದರೆ, ಸಮಸ್ಯೆ ಏನೆಂದೂ ಕೇಳುವ ಗೋಜಿಗೆ ಹೋಗುತ್ತಿಲ್ಲ. ಹಲವು ಪ್ರಕರಣಗಳಲ್ಲಿ ಪಿಐಎಲ್ ಗಳನ್ನು ತಿರಸ್ಕರಿಸಲಾಗಿದೆ. ಹಾಗಾದರೆ ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಈಗಿನ ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ನ್ಯಾಯಾಂಗವೂ ಅದೇ ಹಾದಿಯಲ್ಲಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ‘ಕೊಲೆಗಡುಕರು, ಬಂಡವಾಳಗಾರರು ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಾಲಯ ಕರ್ತವ್ಯವನ್ನು ಮರೆತಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕೆಂದು ತೀರ್ಪು ನೀಡಿದೆ. ಪಾಲನೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುವ ಬಂಡವಾಳಗಾರರು ಮತ್ತು ಆಡಳಿತಗಾರರ ಪರವಾಗಿ ನ್ಯಾಯಾಂಗ ಕೆಲಸ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಮಾತನಾಡಿ ಸರ್ಕಾರಿ ನೌಕರು, ನ್ಯಾಯಾಧೀಶರು, ಪೊಲೀಸರಿಗೆ ನೀತಿ ಸಂಹಿತೆ ಇರುತ್ತದೆ. ಅದರಂತೆ ನ್ಯಾಯಾಧೀಶರು ರಾಜಕೀಯ, ಸಾಮಾಜಿಕ ಮತ್ತು ಹಣಕಾಸು ಸಂಬಂಧಿತ ವಿಷಯಗಳ ಜೊತೆ ಹೆಚ್ಚು ಬೆರೆಯುವ ಹಾಗಿಲ್ಲ. ಅದರಂತೆ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ಮಾಲಿಕತ್ವದ ಬೈಕ್ ಮೇಲೆ ಕುಳಿತಿರುವುದು ನ್ಯಾಯದಾನ ಮಾಡುವ ಸಂದರ್ಭದಲ್ಲಿ ಪಕ್ಷಪಾತಕ್ಕೆ ಅವಕಾಶವಾಗುತ್ತದೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ ಎಂದರು.

ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಎಐಟಿಯುಸಿ ಪ್ರಧಾನಕಾರ್ಯದರ್ಶಿ ಗಿರೀಶ್, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಿಕೆಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಎಐಯುಟಿಯುಸಿ ಮಂಜುಳ, ನಾವು ಭಾರತೀಯರು ಸಂಘಟನೆಯ ತಾಜುದ್ದೀನ್ ಷರೀಫ್ ಮಾತನಾಡಿ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪ್ರಾಂತ ರೈತ ಸಂಘದ ಸಂಚಾಲಕ ಸಿಅಜ್ಜಪ್ಪ, ಎಐಎಂಎಸ್‍ಎಸ್ ಜಿಲ್ಲಾಧ್ಯಕ್ಷೆ ಕಲ್ಯಾಣಿ, ಎಐಡಿಎಸ್‍ಓ ಅಶ್ವಿನಿ, ಆವಿಷ್ಕಾರದ ಮುತ್ತುರಾಜು, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ರೈತ ಮುಖಂಡ ರವೀಶ್, ಸಾಹಿತಿ ಮಿರ್ಜಾ ಬಷೀರ್, ಕಾರ್ಮಿಕ ಮುಖಂಡ ಸಂದೀಪ್ಮೊ, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇದನ್ನೂ ಓದಿ: ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....