HomeಚಳವಳಿJNU ವಿಸಿ ವಜಾಗೊಳಿಸಿ: ಹಿರಿಯ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಶಿ ಸಲಹೆ

JNU ವಿಸಿ ವಜಾಗೊಳಿಸಿ: ಹಿರಿಯ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಶಿ ಸಲಹೆ

- Advertisement -
- Advertisement -

ಹಿರಿಯ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಶಿ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿರುವ ಉಪಕುಲಪತಿ ಜಗದೇಶ್ ಕುಮಾರ್ ಅವರನ್ನು ವಜಾಗೊಳಿಸಲು ಸರ್ಕಾರಕ್ಕೆ ಸ್ಪಷ್ಟ ಸಲಹೆಯನ್ನು ನೀಡಿದ್ದರು ಎಂದು ತಿಳಿದುಬಂದಿದೆ.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಜೋಶಿ, ವಿಶ್ವವಿದ್ಯಾಲಯದಲ್ಲಿ ಉದ್ಭವಿಸಿರುವ ಶುಲ್ಕದ ಸಮಸ್ಯೆಯನ್ನು ಪರಿಹರಿಸಲು ನ್ಯಾಯಯುತ ಕಾರ್ಯಸೂತ್ರಕ್ಕೆ ಬರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವಾಲಯ ಮತ್ತು ಉಪಕುಲಪತಿಗೆ ಎರಡು ಬಾರಿ ಸಲಹೆ ನೀಡಿದ್ದೆ ಎಂದು ತಿಳಿಸಿದ್ದಾರೆ.

“ಸರ್ಕಾರದ ಪ್ರಸ್ತಾಪವನ್ನು ಅನುಷ್ಠಾನಗೊಳಿಸದೇ ವಿಸಿ ಅಚಲವಾಗಿರುವುದು ಆಘಾತಕಾರಿ. ಈ ವರ್ತನೆ ಶೋಚನೀಯ ಮತ್ತು ನನ್ನ ಅಭಿಪ್ರಾಯದಲ್ಲಿ ಅಂತಹ ವಿಸಿಯನ್ನು ಈ ಹುದ್ದೆಯಲ್ಲಿ ಮುಂದುವರಿಸಲು ಅನುಮತಿಸಬಾರದು” ಎಂದು ಜೋಶಿಯವರು ಗುರುವಾರ ಸಂಜೆ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ಯತ್ನಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಕೆಲವೇ ಗಂಟೆಗಳ ನಂತರ ಇವರ ಹೇಳಿಕೆ ಬಂದಿದೆ.

ಜೆಎನ್‌ಯು ವಿಸಿ ಜಗದೇಶ್ ಕುಮಾರ್ ರಾಷ್ಟ್ರವ್ಯಾಪಿ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಮುಖವಾಡ ತೊಟ್ಟ ಗೂಂಡಾಗಳು ಭಾನುವಾರ ಸಂಜೆ ವಿಶ್ವವಿದ್ಯಾಲಯ ಆವರಣಕ್ಕೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಥಳಿಸಿದ ನಂತರ ಹೆಚ್ಚಾಗಿದೆ. ಗೂಂಡಾಗಳನ್ನು ತಡೆಯಲು ವಿಸಿ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇಷ್ಟೊಂದು ನಿರ್ಲಕ್ಷ್ಯ ವಹಿಸುವ ಮೂಲಕ ವಿಸಿ ದಾಳಿಕೋರರ ಪರವಾಗಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳ ಸಂಘ ಮತ್ತು ವಿಶ್ವವಿದ್ಯಾಲಯದ ಶಿಕ್ಷಕರ ಸಂಘವು ಅವರ ನಿರ್ಗಮನಕ್ಕೆ ಒತ್ತಾಯಿಸಿದೆ.

ಕ್ಯಾಂಪಸ್‌ನಲ್ಲಿ ಭಾನುವಾರದ ಹಿಂಸಾಚಾರದ ತನಿಖೆ ನಡೆಸಲು ಉಪಕುಲಪತಿ ಸಮಿತಿಯನ್ನು ರಚಿಸಿದಾಗ, ಶಿಕ್ಷಕರ ಸಂಘವು ಈ ಕ್ರಮವನ್ನು ಶೀಘ್ರವಾಗಿ ತಿರಸ್ಕರಿಸಿದೆ. “ಮೊದಲನೆಯದಾಗಿ, ಈ ಉಪಕುಲಪತಿ ಇರುವವರೆಗೂ ನಾವು ಯಾವುದೇ ಆಂತರಿಕ ವಿಚಾರಣೆಯನ್ನು ಬಯಸುವುದಿಲ್ಲ. ಅವನು ಹೋಗಬೇಕೆಂದು ನಾವು ಬಯಸುತ್ತೇವೆ. ಅವರು ಸಂಪೂರ್ಣವಾಗಿ ಪಕ್ಷಪಾತ ಹೊಂದಿರುವಾಗ ನಾವು ಈ ವಿಷಯದಲ್ಲಿ ನ್ಯಾಯಯುತ ವಿಚಾರಣೆಯನ್ನು ಹೇಗೆ ನಿರೀಕ್ಷಿಸಬಹುದು? ನಾವು ಈ ಸಮಿತಿಯನ್ನು ತಿರಸ್ಕರಿಸುತ್ತೇವೆ, ”ಎಂದು ಜೆಎನ್‌ಯುಟಿಎ ಅಧ್ಯಕ್ಷ ಡಿಕೆ ಲೋಬಿಯಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...