Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...