Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...