Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...