Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...