Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...