Homeಮುಖಪುಟಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿದ ಕಾಂಗ್ರೆಸ್ 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ.

- Advertisement -
- Advertisement -

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೆಂದು ಆರೋಪಿಸಿದ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಂಗಲ್ ರಾಜ್ ಇದ್ದು, ಯೋಗಿ ಆದಿತ್ಯನಾಥ್ ಸರ್ಕಾರದ ಆಡಳಿತದಲ್ಲಿ ಪೊಲೀಸರು ಕೂಡ ಸುರಕ್ಷಿತವಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.

ಕಾನ್ಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಪೊಲೀಸರು ಹತರಾಗಿರುವುದನ್ನು ಉಲ್ಲೇಖಿಸಿರುವ ಲಲ್ಲು, ಗೂಂಡಾಗಳನ್ನು ಅಧಿಕಾರದಲ್ಲಿರುವವರು ಹೇಗೆ ಸಲಹುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ. ಅಲ್ಲದೇ ಇದಕ್ಕೆ ಮುಖ್ಯಮಂತ್ರಿ ಕಚೇರಿಯ ಪೋಷಣೆಯು ಇದೆ ಎಂದು ಆರೋಪಿಸಿದ್ದಾರೆ.

ಬಾರಾಬಂಕಿಯಿಂದ ಚಿತ್ರಕೂಟ್‌ವರೆಗೆ ಗಣಿಗಳಲ್ಲಿ ಕೆಲಸ ಮಾಡುವ ಹುಡುಗಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರವು ರಾಜ್ಯದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಅಪರಾಧ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಲ್ಲೆ, ಅಪಹರಣ, ಕೊಲೆ ಮತ್ತು ಅತ್ಯಾಚಾರ ಘಟನೆಗಳು ಸಾಮಾನ್ಯವಾಗಿಬಿಟ್ಟಿದೆ ಎಂದು ಲಲ್ಲು ಆರೋಪಿಸಿದ್ದಾರೆ.

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿರುವ ಲಲ್ಲು, 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

2018 ರಲ್ಲಿ 70 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ದೇಶದಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳಲ್ಲಿ ಮೂರನೇ ಒಂದು ಭಾಗದಷ್ಟು ಪ್ರಕರಣಗಳು ಉತ್ತರ ಪ್ರದೇಶ ರಾಜ್ಯವೊಂದರಿಂದಲೇ ವರದಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಪ್ರಯತ್ನ, ವರದಕ್ಷಿಣೆ ಪೀಡನೆ ಘಟನೆಗಳು ಮತ್ತು ಕೊಲೆ ಪ್ರಯತ್ನಗಳ ಪಟ್ಟಿಯಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ಆದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವಲ್ಲಿ ಹಾಗೂ ಮಾಧ್ಯಮಗಳ ಮುಖ್ಯಾಂಶಗಳಲ್ಲಿ ಸ್ಥಾನ ಪಡೆಯುವಲ್ಲಿ ನಿರತರಾಗಿದ್ದಾರೆ ಎಂದು ಲಲ್ಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...