Homeಮುಖಪುಟಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿದ ಕಾಂಗ್ರೆಸ್ 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ.

- Advertisement -
- Advertisement -

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೆಂದು ಆರೋಪಿಸಿದ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಂಗಲ್ ರಾಜ್ ಇದ್ದು, ಯೋಗಿ ಆದಿತ್ಯನಾಥ್ ಸರ್ಕಾರದ ಆಡಳಿತದಲ್ಲಿ ಪೊಲೀಸರು ಕೂಡ ಸುರಕ್ಷಿತವಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.

ಕಾನ್ಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಪೊಲೀಸರು ಹತರಾಗಿರುವುದನ್ನು ಉಲ್ಲೇಖಿಸಿರುವ ಲಲ್ಲು, ಗೂಂಡಾಗಳನ್ನು ಅಧಿಕಾರದಲ್ಲಿರುವವರು ಹೇಗೆ ಸಲಹುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ. ಅಲ್ಲದೇ ಇದಕ್ಕೆ ಮುಖ್ಯಮಂತ್ರಿ ಕಚೇರಿಯ ಪೋಷಣೆಯು ಇದೆ ಎಂದು ಆರೋಪಿಸಿದ್ದಾರೆ.

ಬಾರಾಬಂಕಿಯಿಂದ ಚಿತ್ರಕೂಟ್‌ವರೆಗೆ ಗಣಿಗಳಲ್ಲಿ ಕೆಲಸ ಮಾಡುವ ಹುಡುಗಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರವು ರಾಜ್ಯದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಅಪರಾಧ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಲ್ಲೆ, ಅಪಹರಣ, ಕೊಲೆ ಮತ್ತು ಅತ್ಯಾಚಾರ ಘಟನೆಗಳು ಸಾಮಾನ್ಯವಾಗಿಬಿಟ್ಟಿದೆ ಎಂದು ಲಲ್ಲು ಆರೋಪಿಸಿದ್ದಾರೆ.

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿರುವ ಲಲ್ಲು, 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

2018 ರಲ್ಲಿ 70 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ದೇಶದಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳಲ್ಲಿ ಮೂರನೇ ಒಂದು ಭಾಗದಷ್ಟು ಪ್ರಕರಣಗಳು ಉತ್ತರ ಪ್ರದೇಶ ರಾಜ್ಯವೊಂದರಿಂದಲೇ ವರದಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಪ್ರಯತ್ನ, ವರದಕ್ಷಿಣೆ ಪೀಡನೆ ಘಟನೆಗಳು ಮತ್ತು ಕೊಲೆ ಪ್ರಯತ್ನಗಳ ಪಟ್ಟಿಯಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ಆದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವಲ್ಲಿ ಹಾಗೂ ಮಾಧ್ಯಮಗಳ ಮುಖ್ಯಾಂಶಗಳಲ್ಲಿ ಸ್ಥಾನ ಪಡೆಯುವಲ್ಲಿ ನಿರತರಾಗಿದ್ದಾರೆ ಎಂದು ಲಲ್ಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...