Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...