Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...