Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...