Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....