Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...