Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...