Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...