Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...