Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...