Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...