Homeಮುಖಪುಟಜಿಲ್ಲಾ ಮ್ಯಾಜಿಸ್ಟ್ರೇಟ್ 'ಎಕ್ಸ್' ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

ಜಿಲ್ಲಾ ಮ್ಯಾಜಿಸ್ಟ್ರೇಟ್ ‘ಎಕ್ಸ್’ ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

- Advertisement -
- Advertisement -

ಉತ್ತರ ಪ್ರದೇಶದ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಸೋಹನ್ ಸಿಂಗ್ (34) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 14 ರಂದು ಆತನನ್ನು ಬಂಧಿಸಲಾಗಿದ್ದು, ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದ ಮೇಲೆ ಆತನ ಮೊಬೈಲ್ ಫೋನ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ಅನುಚಿತ/ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 13 ರಂದು, ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮನೀಶ್ ವರ್ಮಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿವಾದದ ನಂತರ ವರ್ಮಾ ಸ್ಪಷ್ಟನೆ ನೀಡಿದ್ದು, ಕೆಲವು ಸಮಾಜವಿರೋಧಿಗಳು ತಮ್ಮ ಎಕ್ಸ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

“ಇದನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಎಫ್‌ಐಆರ್ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ತಪ್ಪು ಟ್ವೀಟ್/ಕಾಮೆಂಟ್ ಕುರಿತು ಸೈಬರ್ ಸೆಲ್ ತನಿಖೆ ನಡೆಸುತ್ತಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರು ತಮ್ಮ ಸಂಭಾಷಣೆಯ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು “ಇತಿಹಾಸವನ್ನು ರಚಿಸಲಾಗಿದೆ ಮತ್ತು ಬದಲಾಯಿಸಲಾಗುವುದಿಲ್ಲ. ನರೇಂದ್ರ ಮೋದಿ ಅವರಿಗೆ ಇತಿಹಾಸವು ಹೇಗೆ ನೆನಪಿಸಿಕೊಳ್ಳುತ್ತದೆ ಎಂದು ತಿಳಿದಿದೆ ಮತ್ತು ಅದಕ್ಕಾಗಿಯೇ ಅವರು ಚಿಂತಿತರಾಗಿದ್ದಾರೆ ಎಂದು ಹೇಳಿದ್ದರು.

ಅವರ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್‌ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಕಾಮೆಂಟ್ ಮಾಡಲಾಗಿತ್ತು. ನಂತರ, ಅದನ್ನು ಅಳಿಸಲಾಗಿದೆ. “ನೀವು ನಿಮ್ಮ ಬಗ್ಗೆ ಮತ್ತು ನಿಮ್ಮ ಪಪ್ಪು ಬಗ್ಗೆ ಯೋಚಿಸಬೇಕು” ಎಂದು ಹಿಂದಿಯಲ್ಲಿ ಪ್ರತಿಕ್ರಿಯಿಸಿದ್ದರು.

ಆಕ್ಷೇಪಾರ್ಹ ಕಾಮೆಂಟ್‌ಗಳಿಂದ ಕೋಪಗೊಂಡ ಶ್ರೀನಾಟೆ, ಅಳಿಸಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. “ಅವರು ಡಿಎಂ ನೋಯ್ಡಾ, ಅವರು ಇಡೀ ಜಿಲ್ಲೆಗೆ ಜವಾಬ್ದಾರರು, ಅವರು ದೇಶದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷೆ ಮತ್ತು ಆಲೋಚನೆಗಳನ್ನು ನೋಡಬೇಕು” ಎಂದು ಹೇಳಿದರು.

“ಆಡಳಿತಾತ್ಮಕ ಸಿಬ್ಬಂದಿ ಸಂಘಿಗಳಿಂದ ತುಂಬಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈಗ ಅವರು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತು ದ್ವೇಷವನ್ನು ಹೆಚ್ಚಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ; ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...