Homeಮುಖಪುಟಜಿಲ್ಲಾ ಮ್ಯಾಜಿಸ್ಟ್ರೇಟ್ 'ಎಕ್ಸ್' ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

ಜಿಲ್ಲಾ ಮ್ಯಾಜಿಸ್ಟ್ರೇಟ್ ‘ಎಕ್ಸ್’ ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

- Advertisement -
- Advertisement -

ಉತ್ತರ ಪ್ರದೇಶದ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಸೋಹನ್ ಸಿಂಗ್ (34) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 14 ರಂದು ಆತನನ್ನು ಬಂಧಿಸಲಾಗಿದ್ದು, ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದ ಮೇಲೆ ಆತನ ಮೊಬೈಲ್ ಫೋನ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ಅನುಚಿತ/ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 13 ರಂದು, ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮನೀಶ್ ವರ್ಮಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿವಾದದ ನಂತರ ವರ್ಮಾ ಸ್ಪಷ್ಟನೆ ನೀಡಿದ್ದು, ಕೆಲವು ಸಮಾಜವಿರೋಧಿಗಳು ತಮ್ಮ ಎಕ್ಸ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

“ಇದನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಎಫ್‌ಐಆರ್ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ತಪ್ಪು ಟ್ವೀಟ್/ಕಾಮೆಂಟ್ ಕುರಿತು ಸೈಬರ್ ಸೆಲ್ ತನಿಖೆ ನಡೆಸುತ್ತಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರು ತಮ್ಮ ಸಂಭಾಷಣೆಯ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು “ಇತಿಹಾಸವನ್ನು ರಚಿಸಲಾಗಿದೆ ಮತ್ತು ಬದಲಾಯಿಸಲಾಗುವುದಿಲ್ಲ. ನರೇಂದ್ರ ಮೋದಿ ಅವರಿಗೆ ಇತಿಹಾಸವು ಹೇಗೆ ನೆನಪಿಸಿಕೊಳ್ಳುತ್ತದೆ ಎಂದು ತಿಳಿದಿದೆ ಮತ್ತು ಅದಕ್ಕಾಗಿಯೇ ಅವರು ಚಿಂತಿತರಾಗಿದ್ದಾರೆ ಎಂದು ಹೇಳಿದ್ದರು.

ಅವರ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್‌ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಕಾಮೆಂಟ್ ಮಾಡಲಾಗಿತ್ತು. ನಂತರ, ಅದನ್ನು ಅಳಿಸಲಾಗಿದೆ. “ನೀವು ನಿಮ್ಮ ಬಗ್ಗೆ ಮತ್ತು ನಿಮ್ಮ ಪಪ್ಪು ಬಗ್ಗೆ ಯೋಚಿಸಬೇಕು” ಎಂದು ಹಿಂದಿಯಲ್ಲಿ ಪ್ರತಿಕ್ರಿಯಿಸಿದ್ದರು.

ಆಕ್ಷೇಪಾರ್ಹ ಕಾಮೆಂಟ್‌ಗಳಿಂದ ಕೋಪಗೊಂಡ ಶ್ರೀನಾಟೆ, ಅಳಿಸಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. “ಅವರು ಡಿಎಂ ನೋಯ್ಡಾ, ಅವರು ಇಡೀ ಜಿಲ್ಲೆಗೆ ಜವಾಬ್ದಾರರು, ಅವರು ದೇಶದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷೆ ಮತ್ತು ಆಲೋಚನೆಗಳನ್ನು ನೋಡಬೇಕು” ಎಂದು ಹೇಳಿದರು.

“ಆಡಳಿತಾತ್ಮಕ ಸಿಬ್ಬಂದಿ ಸಂಘಿಗಳಿಂದ ತುಂಬಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈಗ ಅವರು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತು ದ್ವೇಷವನ್ನು ಹೆಚ್ಚಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ; ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...