Homeಮುಖಪುಟಜಿಲ್ಲಾ ಮ್ಯಾಜಿಸ್ಟ್ರೇಟ್ 'ಎಕ್ಸ್' ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

ಜಿಲ್ಲಾ ಮ್ಯಾಜಿಸ್ಟ್ರೇಟ್ ‘ಎಕ್ಸ್’ ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ 

- Advertisement -
- Advertisement -

ಉತ್ತರ ಪ್ರದೇಶದ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಸೋಹನ್ ಸಿಂಗ್ (34) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 14 ರಂದು ಆತನನ್ನು ಬಂಧಿಸಲಾಗಿದ್ದು, ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದ ಮೇಲೆ ಆತನ ಮೊಬೈಲ್ ಫೋನ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ಅನುಚಿತ/ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 13 ರಂದು, ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮನೀಶ್ ವರ್ಮಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿವಾದದ ನಂತರ ವರ್ಮಾ ಸ್ಪಷ್ಟನೆ ನೀಡಿದ್ದು, ಕೆಲವು ಸಮಾಜವಿರೋಧಿಗಳು ತಮ್ಮ ಎಕ್ಸ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

“ಇದನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಎಫ್‌ಐಆರ್ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ತಪ್ಪು ಟ್ವೀಟ್/ಕಾಮೆಂಟ್ ಕುರಿತು ಸೈಬರ್ ಸೆಲ್ ತನಿಖೆ ನಡೆಸುತ್ತಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರು ತಮ್ಮ ಸಂಭಾಷಣೆಯ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು “ಇತಿಹಾಸವನ್ನು ರಚಿಸಲಾಗಿದೆ ಮತ್ತು ಬದಲಾಯಿಸಲಾಗುವುದಿಲ್ಲ. ನರೇಂದ್ರ ಮೋದಿ ಅವರಿಗೆ ಇತಿಹಾಸವು ಹೇಗೆ ನೆನಪಿಸಿಕೊಳ್ಳುತ್ತದೆ ಎಂದು ತಿಳಿದಿದೆ ಮತ್ತು ಅದಕ್ಕಾಗಿಯೇ ಅವರು ಚಿಂತಿತರಾಗಿದ್ದಾರೆ ಎಂದು ಹೇಳಿದ್ದರು.

ಅವರ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್‌ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಕಾಮೆಂಟ್ ಮಾಡಲಾಗಿತ್ತು. ನಂತರ, ಅದನ್ನು ಅಳಿಸಲಾಗಿದೆ. “ನೀವು ನಿಮ್ಮ ಬಗ್ಗೆ ಮತ್ತು ನಿಮ್ಮ ಪಪ್ಪು ಬಗ್ಗೆ ಯೋಚಿಸಬೇಕು” ಎಂದು ಹಿಂದಿಯಲ್ಲಿ ಪ್ರತಿಕ್ರಿಯಿಸಿದ್ದರು.

ಆಕ್ಷೇಪಾರ್ಹ ಕಾಮೆಂಟ್‌ಗಳಿಂದ ಕೋಪಗೊಂಡ ಶ್ರೀನಾಟೆ, ಅಳಿಸಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. “ಅವರು ಡಿಎಂ ನೋಯ್ಡಾ, ಅವರು ಇಡೀ ಜಿಲ್ಲೆಗೆ ಜವಾಬ್ದಾರರು, ಅವರು ದೇಶದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷೆ ಮತ್ತು ಆಲೋಚನೆಗಳನ್ನು ನೋಡಬೇಕು” ಎಂದು ಹೇಳಿದರು.

“ಆಡಳಿತಾತ್ಮಕ ಸಿಬ್ಬಂದಿ ಸಂಘಿಗಳಿಂದ ತುಂಬಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈಗ ಅವರು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತು ದ್ವೇಷವನ್ನು ಹೆಚ್ಚಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ; ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....