Homeನೂರರ ನೋಟಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ಈ ಬಗೆಯ ಹಣಕಾಸಿನ ದುರ್ಬಳಕೆ ಮತ್ತು ದುರಾಡಳಿತದ ಬಗೆಗೆ ಜನತೆಗೆ ಸಮಜಾಯಿಷಿ ಕೊಡುವುದು ಸರ್ಕಾರದ ಕರ್ತವ್ಯವಲ್ಲವೇ?

- Advertisement -
- Advertisement -

ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ International Day for Universal Access to Information ದಿನವನ್ನಾಗಿ ಆಚರಿಸಲಾಯಿತು. ಆದರೆ ಮೋದಿ ಸರ್ಕಾರ ಸುದ್ದಿಯನ್ನು ಮುಚ್ಚಿಡುವ ಕಾಯಕದಲ್ಲಿ ತೊಡಗಿದೆ.
ಸೆಪ್ಟೆಂಬರ್ ಮೊದಲಲ್ಲಿ ವಿರೋಧ ಪಕ್ಷದ ಸದಸ್ಯರೊಬ್ಬರು ಪಾರ್ಲಿಮೆಂಟ್‌ನಲ್ಲಿ ಪ್ರಶ್ನಿಸಿದಾಗ ಗೃಹಸಚಿವಾಲಯದ ಮಿನಿಸ್ಟರ್ ಆಫ್ ಸ್ಟೇಟ್ ನಿತ್ಯಾನಂದ ರಾಯ್ ಅವರು ‘ವಲಸೆ ಕಾರ್ಮಿಕರ ದಂಡು ನಗರಗಳನ್ನು ಬಿಟ್ಟು ಹಿಂಡುಹಿಂಡಾಗಿ ತಮ್ಮ ಊರುಗಳಿಗೆ ಹೋದರೆಂಬ ಬೋರಂಟಿ ಬಿಡಲಾಗಿದೆ ಈ ಪತ್ರಿಕಾ ವರದಿಗಳು ಶುದ್ಧ ಸುಳ್ಳು’ ಎಂದು ಉತ್ತರಿಸಿದರು. ಸರ್ಕಾರದ ಪರಿಸ್ಥಿತಿಯ ಅರಿವಿನ ಕೊರತೆಯಿಂದಾಗಿ ಈ ಮಂತ್ರಿಗಳು ಈ ಉಡಾಫೆ ಉತ್ತರ ಕೊಟ್ಟರು. ಸರ್ಕಾರದ ಉದಾಸೀನ ಭಾವನೆಯಿಂದ ಹಾಗೂ ಮಾಹಿತಿಯ ಕೊರತೆಯಿಂದ, ಆಹಾರ ದೊರೆಯದೆ ಅನೇಕರು ಹಸಿವಿನಿಂದ ಪ್ರಾಣ ಬಿಟ್ಟರು. ಸರ್ಕಾರ ಆತುರಆತುರವಾಗಿ ಕೊರೊನಾ ಹೆಸರಿನಲ್ಲಿ ದಿಢೀರನೆ ಲಾಕ್‌ಡೌನ್ ಜಾರಿಗೆ ತಂದು ವಲಸೆ ಕಾರ್ಮಿಕರ ಮೇಲೆ ನಿರ್ಬಂಧಗಳನ್ನು ಹೇರಿತು. ಊಟವಿಲ್ಲದೆ, ಕೆಲಸವಿಲ್ಲದೆ ವಲಸೆ ಕಾರ್ಮಿಕರು ಇಲ್ಲಿ ಸಾಯುವುದಕ್ಕಿಂತ ತಮ್ಮ ಊರುಗಳಿಗೆ ಹೋಗಿ ಪ್ರಾಣ ಬಿಡುವುದು ಮೇಲು ಎಂದು ಯೋಚಿಸಿದರು. ಶ್ರಮಿಕ್ ರೈಲುಗಳಲ್ಲಿ ಹೊಟ್ಟೆಗಿಲ್ಲದೆ ಸತ್ತವರು, ವಾಹನಗಳ ಸೌಕರ್ಯವಿಲ್ಲದೆ ನಡೆದುಹೋದ ಲಕ್ಷಾಂತರ ವಲಸೆ ಕಾರ್ಮಿಕರು, ಅವರು ಅನುಭವಿಸಿದ ಕಷ್ಟಗಳು ಮತ್ತು ಹೊಟ್ಟೆಗಿಲ್ಲದೆ ದಾರಿಯಲ್ಲಿ ಸತ್ತವರ ಮಾಹಿತಿ ಸರ್ಕಾರದಲ್ಲಿ ಇಲ್ಲ ಎಂದ ಮೇಲೆ ಇದು ಬೇಜವಾಬ್ದಾರಿ ಸರ್ಕಾರವಲ್ಲದೆ ಬದ್ಧತೆಯುಳ್ಳ ಸರ್ಕಾರವೇ?

ಈ ಬೇಜವಾಬ್ದಾರಿ ಮಂತ್ರಿಗಳ ಉತ್ತರ ಮಾನವನ ಹಕ್ಕುಗಳ ಮೇಲಿನ ಮತ್ತು ಪ್ರಜಾಸತ್ತೆಯ ಮೇಲಿನ ದಾಳಿ ಇದ್ದಹಾಗೆ ಕಾಣುತ್ತದೆ.

ದೇವಿಕಾ ಎಂಬ ಕೇರಳದ ದಲಿತ ವಿದ್ಯಾರ್ಥಿನಿ ತನ್ನ ಬಳಿ ಸ್ಮಾರ್ಟ್ ಫೋನ್ ಇಲ್ಲದ ಕಾರಣದಿಂದ ಆನ್‌ಲೈನ್ ಕ್ಲಾಸ್‌ಗಳಿಗೆ ಹಾಜರಾಗಲು ಆಗಲಿಲ್ಲ. ಆ ಹುಡುಗಿ ಬುದ್ಧಿವಂತಳು ಮತ್ತು ಸ್ಕಾಲರ್‌ಷಿಪ್ ಪಡೆಯುತ್ತಿದ್ದವಳು. ಆದರೆ ಬಡತನದಿಂದ ಸ್ಮಾರ್ಟ್ ಫೋನ್ ಕೊಳ್ಳಲಾರದೆಹೋದಳು. ಇದರಿಂದ ಬೇಸರಗೊಂಡ ದೇವಕಿ ಆತ್ಮಹತ್ಯೆ ಮಾಡಿಕೊಂಡಳು. ಅವಳ ತಂದೆ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಯಾಗಿದ್ದು ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸುವ ಸ್ಥಿತಿಯಲ್ಲಿ ಇರಲಿಲ್ಲ. ಮೋದಿಯವರಿಗೆ ಕಾಗದ ಬರೆದಿದ್ದರೆ ಈ ಹುಡುಗಿಗೆ ಸ್ಮಾರ್ಟ್ ಫೋನ್ ಕೊಡಿಸುತ್ತಾ ಇದ್ದರೋ ಏನೋ? ಈ ಸಮಸ್ಯೆ ದೇವಿಯದು ಮಾತ್ರವಲ್ಲ ಬಡತನದಲ್ಲಿ ತತ್ತರಿಸುತ್ತಿರುವ ಸಹಸ್ರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರದು. ಸರ್ಕಾರ ಆನ್‌ಲೈನ್ ಶಿಕ್ಷಣ ಕೊಡುವ ನಿರ್ಧಾರ ಕೈಗೊಳ್ಳುವ ಮೊದಲು ಈ ಬಡ ಜನರ ಕೈಯ್ಯಲ್ಲೆೆಲ್ಲಾ ಸ್ಮಾರ್ಟ್ ಫೋನ್ ಇದೆಯೇ ಎಂದು ಯೋಚಿಸಬೇಕಾಗಿತ್ತು. ಕಾರ್ಪೊರೇಟ್ ಸಂಸ್ಥೆಗಳನ್ನು ಸಂರಕ್ಷಿಸುವುದಕ್ಕೆ ಆದ್ಯತೆ ನೀಡುವ ಈ ಸರ್ಕಾರಕ್ಕೆ ಬಡವರ ಪ್ರಶ್ನೆ ಗೌಣ ಅಲ್ಲವೇ?

ಹಣಕಾಸಿನ ಸಂಗ್ರಹ ಮತ್ತು ವೆಚ್ಚದ ಬಗೆಗೆ ಸರ್ಕಾರ ಸಂಬಂಧಪಟ್ಟ ವಿವರಗಳನ್ನು ಕಾಲಕಾಲಕ್ಕೆ ಜನತೆಯ ಮುಂದಿಡಬೇಕು. ಸರ್ಕಾರ ಮನಸೋಇಚ್ಛೆ ಜನರ ಹಣವನ್ನು ಪೋಲು ಮಾಡುತ್ತಿದೆ. ಮೋದಿ ಅವರ ಹೊರರಾಷ್ಟ್ರೀಯ ಪ್ರಯಾಣ ವೆಚ್ಚಕ್ಕೆ ಕಡಿವಾಣವೇ ಇಲ್ಲ. ಕೋಟಿ ಕೋಟಿ ರೂಪಾಯಿಗಳನ್ನು ಅವರ ಪ್ರವಾಸಕ್ಕಾಗಿ, ಪ್ರವಾಸ ಭತ್ಯಕ್ಕಾಗಿ ಉಪಯೋಗಿಸಲಾಗುತ್ತಿದೆ.

ಪಿಎಂ ಕೇರ್ಸ್ ನಿಧಿಯ ವಿಷಯದಲ್ಲಿ ಸರ್ಕಾರ ಬಾಯಿ ಬಿಡುತ್ತಿಲ್ಲ. ಎಷ್ಟು ಹಣ ಬಂತು, ಯಾರಿಂದ ಬಂತು ಎಂಬ ವಿವರವನ್ನು ಕೊಡುವುದಕ್ಕೆ ಮೋದಿ ಸರ್ಕಾರ ಹಿಂದೇಟು ಹಾಕುತ್ತಿದೆ. ಇದು ಸರ್ಕಾರ ಪಡೆದ ನಿಧಿಯಲ್ಲ. ಮೋದಿಯವರು ಅಧ್ಯಕ್ಷತೆಯಲ್ಲಿ ಟ್ರಸ್ಟ್ ಒಂದು ಖಾಸಗಿಯಾಗಿ ಪಡೆದ ಹಣ. ಇದರ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸುವ ಅಗತ್ಯವಿಲ್ಲ ಎನ್ನುತ್ತಿದೆ ಸರ್ಕಾರ. ಪ್ರಧಾನಿ ಸ್ಥಾನದಲ್ಲಿದ್ದುಕೊಂಡು ಈ ಅಪಾರ ಧನ ಪಡೆದಿರುವಾಗ ಈ ಬಗ್ಗೆ ಪ್ರಶ್ನಿಸುವ ಹಕ್ಕು ಮಹಾಜನರಿಗಿದೆ ಎಂಬುದನ್ನು ಮೋದಿ ತಿಳಿಯಬೇಕು.

ಸಾರ್ವಜನಿಕ ಹಣವನ್ನು ಕೋವಿಡ್ ಬಂದ ಮೇಲೆ ಪ್ರಧಾನಿಗಳು ಮತ್ತು ರಾಜ್ಯದ ಮುಖ್ಯಮಂತ್ರಿಗಳು ಮನಸೋಇಚ್ಛೆ ಖರ್ಚು ಮಾಡಲು ಹೊರಟಿದ್ದಾರೆ. ಸರ್ಕಾರಗಳು ಬೇರೆ ಬೇರೆ ಬಾಬತ್ತುಗಳಿಗಾಗಿ ಎತ್ತಿಟ್ಟಿರುವ ಹಣವನ್ನು ಕೊರೊನಾ ನೆಪ ಹೇಳಿ ದುರ್ಬಳಕೆ ಮಾಡಿವೆ. ‘ಹುಚ್ಚು ಮುಂಡೆ ಮದುವೇಲಿ ಉಂಡವನೇ ಜಾಣ’ ಎಂಬ ಗಾದೆಯಂತೆ ಕೊರೊನಾ ಸಮಯದಲ್ಲಿ ಅಧಿಕಾರಿಗಳು, ಮಂತ್ರಿಗಳು ಎಲ್ಲ ಬಾಬತ್ತಿನ ಹಣವನ್ನು ದುಂದುವೆಚ್ಚ ಮಾಡಿ ಜೋಬು ತುಂಬಿಸಿಕೊಂಡಿದ್ದಾರೆ. ಇದರ ಬಗೆಗೆ ನಿಷ್ಪಕ್ಷಪಾತವಾದ ಒಂದು ತನಿಖೆಯಾಗಲಿ ಎಂದರೆ ಯಡಿಯೂರಪ್ಪನವರು ನಾವು ಸತ್ಯ ಹರಿಶ್ಚಂದ್ರರು, ಒಂದು ಕಾಸೂ ದುರುಪಯೋಗವಾಗಿಲ್ಲ ನಾವೇಕೆ ತನಿಖೆಗೆ ಒಳಪಡಿಸಬೇಕು ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪ್ರಭುತ್ವ ನಡೆಸುವವರು ಸೀತಾ ದೇವಿಯಂತೆ ತನ್ನ ಪಾವಿತ್ರ್ಯತೆ ಕಾಪಾಡಿಕೊಳ್ಳಲು ಅಗ್ನಿಪ್ರವೇಶಕ್ಕೆ ತಯಾರಿರಬೇಕು. ಆದರೆ ಈಗ ಅಧಿಕಾರ ನಡೆಸುವವರು ಗದ್ದಿಗೆಗೆ ಅಂಟಿಕೊಳ್ಳುವವರೇ ಹೊರತು ಪ್ರಜಾಪ್ರಭುತ್ವ ಎತ್ತಿ ಹಿಡಿಯುವವರಲ್ಲ. ಹಿಂದೆ ರಾಜ ಪ್ರಭುತ್ವ ಇದ್ದಾಗ The King does no wrong – ರಾಜ ತಪ್ಪು ಮಾಡುವುದೇ ಇಲ್ಲ ಎಂಬ ಮಾತು ಪ್ರತೀತಿಯಲ್ಲಿತ್ತು. ಈಗ ಹೊಸರಾಜರ ಆಳ್ವಿಕೆಯಲ್ಲಿ ನಾವಿದ್ದೇವೆ ಇವರೂ ತಪ್ಪು ಮಾಡುವವರೇ ಅಲ್ಲ. ತಪ್ಪು ಮಾಡಿದರೂ ಅದು ತಪ್ಪಲ್ಲ

ಜಿಲ್ಲಾ ಅದಿರು ಫೌಂಡೇಷನ್ ನಿಧಿಯನ್ನು ಕೊರೊನಾ ನೆಪ ಹೇಳಿ ದುರುಪಯೋಗಪಡಿಸಿಕೊಳ್ಳಲಾಗಿದೆ. ಖನಿಜ ತೆಗೆಯುವುದರಿಂದ ಅಲ್ಲಿಯ ಜನಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಅವರಿಗೆ ಶುದ್ಧ ನೀರು, ಶುದ್ಧ ಗಾಳಿ ಒದಗಿಸುವುದಕ್ಕೆ, ಗಣಿಗಾರಿಕೆಯಿಂದ ರಸ್ತೆಗಳು ಹಾಳಾಗುವುದರಿಂದ ಅವುಗಳ ದುರಸ್ತಿಗಾಗಿ ಈ ನಿಧಿಯನ್ನು ಮೀಸಲಿರಿಸಲಾಗಿತ್ತು. ಈ ಬಗೆಯ ಹಣಕಾಸಿನ ದುರ್ಬಳಕೆ ಮತ್ತು ದುರಾಡಳಿತದ ಬಗೆಗೆ ಜನತೆಗೆ ಸಮಜಾಯಿಷಿ ಕೊಡುವುದು ಸರ್ಕಾರದ ಕರ್ತವ್ಯವಲ್ಲವೇ?

ಪಾರ್ಲಿಮೆಂಟ್‌ನಲ್ಲಿ, ಅಸೆಂಬ್ಲಿಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸದೆ ಆರ್ಡಿನೆನ್ಸಗಳ ಮುಖಾಂತರ ರೈತರ, ಕಾರ್ಮಿಕರ, ಬಡಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಈ ಆರ್ಡಿನೆನ್ಸ್ಗಳನ್ನೇ ಶಾಸನವನ್ನಾಗಿ ಮಾಡುವ ಸಂದರ್ಭದಲ್ಲಾದರೂ ಆ ಬಿಲ್‌ಗಳ ಸುದೀರ್ಘ ಚರ್ಚೆಗೆ ಅವಕಾಶ ಮಾಡಿಕೊಡಬೇಕಾಗಿತ್ತು.

ರೈತರು ಮತ್ತು ಕಾರ್ಮಿಕರ ಹತ್ತಿರ ತಾವು ತರಲು ತೀರ್ಮಾನಿಸಿರುವ ಸುಗ್ರೀವಾಜ್ಞೆಗಳ ಬಗೆಗೆ ವಿಚಾರ ವಿನಿಮಯ ಮಾಡಿಕೊಳ್ಳಬೇಕಿತ್ತು. ಈ ವಿಚಾರದಲ್ಲಿ ಸರ್ಕಾರಗಳು ಸರ್ವಾಧಿಕಾರಿ ನೀತಿಯನ್ನು ಅನುಸರಿಸಿವೆ. ರಚನಾತ್ಮಕ ಟೀಕೆಗಳನ್ನು ಮಾಡುವುದು ಪ್ರಜೆಯ ಹಕ್ಕು. ಈ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸುವುದು ಸರ್ಕಾರಗಳ ಕರ್ತವ್ಯ. ಈ ಮೂಲಭೂತ ಅಧಿಕಾರವನ್ನೇ ಕಡೆಗಣಿಸಿ ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಸ್ವೇಚ್ಛೆಯಿಂದ ನಡೆದುಕೊಂಡಿರುವುದನ್ನು ಪ್ರಜೆಯಾದವನು ಲಘುವಾಗಿ ಸ್ವೀಕರಿಸಬಾರದು. ರೈತರ ಮತ್ತು ಕಾರ್ಮಿಕರ ಮೂಲಭೂತ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವನ್ನು ಪ್ರಜೆಗಳೂ ಸೇರಿದಂತೆ ರೈತರು, ಕಾರ್ಮಿಕರು ವಿರೋಧಿಸಲು ಸಂಘಟಿತ ಪ್ರಯತ್ನವನ್ನು ಮಾಡಿರುವುದು ಸ್ತುತ್ಯ ವಿಚಾರ.

ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಚೈನಾ ಮತ್ತು ಪಾಕಿಸ್ತಾನಗಳು ಆಕ್ರಮಣಕಾರಿ ನಿಲುವನ್ನು ತಾಳಿರುವುದು ಒಂದು ಗಂಭೀರ ವಿಷಯ. ಭಾರತದ ಭೂಭಾಗವನ್ನು ಆಕ್ರಮಿಸಲು ಚೈನಾ ಹೊರಟಿದೆ ಎಂದು ರಕ್ಷಣಾ ವಿಭಾಗ ಹೇಳುವುದು ಮೋದಿಯವರು ಅಂಥದೇನೂ ನಡೆದಿಲ್ಲವೆಂದು ಹೇಳುವುದು ಆ ಮೂಲಕ ಜನರನ್ನು ನಿಜಸ್ಥಿತಿ ಏನೆಂದು ತಿಳಿಯಲು ಅವಕಾಶ ನೀಡದೆ ಕತ್ತಲಲ್ಲಿ ಇಡುವುದು ಯಾವ ಘನಂದಾರಿ ಕೆಲಸ? ರಾಷ್ಟ್ರದ ಭದ್ರತೆಯ ಬಗೆಗೆ ಇಂತಹ ದ್ವಂದ್ವಗಳನ್ನು ಸರ್ಕಾರ ತಳೆಯುವುದು ಅಪಾಯಕಾರಿ ನಿಲುವು. ಪ್ರಜೆಗಳು ಈ ಬೇಜವಾಬ್ದಾರಿ ನಿಲುವನ್ನು ತಾಳಿರುವ ಮೋದಿ ಸರ್ಕಾರದ ಬಗೆಗೆ ಗಂಭೀರವಾಗಿ ವಿಚಾರ ಮಾಡುವ ಕಾಲ ಸನ್ನಿಹಿತವಾಗಿದೆ.


ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...