Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...