Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...