Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...