Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...