Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...