Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...