Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...