Homeಮುಖಪುಟಜೀವನಾಂಶ ನಿರ್ಧರಿಸಲು ಹೊಸ ಮಾರ್ಗಸೂಚಿ ಪಟ್ಟಿ ಮಾಡಿದ ಸುಪ್ರೀಂ ಕೋರ್ಟ್; ತಜ್ಞರು ಹೇಳೋದೇನು..?

ಜೀವನಾಂಶ ನಿರ್ಧರಿಸಲು ಹೊಸ ಮಾರ್ಗಸೂಚಿ ಪಟ್ಟಿ ಮಾಡಿದ ಸುಪ್ರೀಂ ಕೋರ್ಟ್; ತಜ್ಞರು ಹೇಳೋದೇನು..?

- Advertisement -
- Advertisement -

ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶದ ಮೊತ್ತವನ್ನು ನಿರ್ಧರಿಸುವ ಅಂಶಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪಟ್ಟಿ ಮಾಡಿದೆ. ಪ್ರವೀಣ್ ಕುಮಾರ್ ಜೈನ್ ಮತ್ತು ಅಂಜು ಜೈನ್ ಅವರ ವಿಚ್ಛೇದನ ಪ್ರಕ್ರಿಯೆಯಲ್ಲಿ ಒಂದಷ್ಟು ಹೊಸ ಮಾರ್ಗಸೂಚಿಗಳನ್ನು ನೀಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಪ್ರಸನ್ನ ವಿ ವರಾಳೆ ಅವರ ಪೀಠವು ಪ್ರಕರಣದ ಅಧ್ಯಕ್ಷತೆ ವಹಿಸಿ, ಪ್ರವೀಣ್ ಕುಮಾರ್ ಜೈನ್ ಅವರಿಗೆ ₹5 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ವಿಚ್ಛೇದನದ ನಂತರ ಮಹಿಳೆಗೆ ಜೀವನಾಂಶವಾಗಿ ಮೊತ್ತವನ್ನು ನಿರ್ಧರಿಸಲು ಪೀಠವು ಎಂಟು ಅಂಶಗಳ ಸೂತ್ರವನ್ನು ಹಾಕಿತು.

  • ಗಂಡ ಮತ್ತು ಹೆಂಡತಿಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ
  • ಭವಿಷ್ಯದಲ್ಲಿ ಹೆಂಡತಿ ಮತ್ತು ಮಕ್ಕಳ ಮೂಲಭೂತ ಅಗತ್ಯಗಳು
  • ಎರಡೂ ಪಕ್ಷಗಳ ಅರ್ಹತೆ ಮತ್ತು ಉದ್ಯೋಗ
  • ಆದಾಯ ಮತ್ತು ಆಸ್ತಿಗಳ ಮೂಲಗಳು
  • ಅತ್ತೆಯ ಮನೆಯಲ್ಲಿ ವಾಸಿಸುತ್ತಿರುವಾಗ ಹೆಂಡತಿಯ ಜೀವನ ಮಟ್ಟ
  • ಹೆಂಡತಿಯ ಉದ್ಯೋಗದ ಸ್ಥಿತಿ
  • ಕೆಲಸ ಮಾಡದ ಹೆಂಡತಿಗೆ ಕಾನೂನು ಹೋರಾಟಕ್ಕೆ ಸಮಂಜಸವಾದ ಮೊತ್ತ
  • ನಿರ್ವಹಣೆ ಭತ್ಯೆಯೊಂದಿಗೆ ಗಂಡನ ಆರ್ಥಿಕ ಸ್ಥಿತಿ, ಅವನ ಗಳಿಕೆ ಮತ್ತು ಇತರ ಜವಾಬ್ದಾರಿಗಳು ಹೇಗಿರುತ್ತವೆ

ಅತುಲ್ ಸುಭಾಷ್ ಎಂಬ ಬೆಂಗಳೂರಿನ ಟೆಕ್ಕಿಯ ಆತ್ಮಹತ್ಯೆಯ ನಂತರ ಜೀವನಾಂಶದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ನಡುವೆ ಈ ಹೊಸ ಮಾರ್ಗಸೂಚಿಗಳು ಬಂದಿದೆ. ಅವರು ವೈವಾಹಿಕ ಸಮಸ್ಯೆಗಳಿಂದ ಹಲವು ವರ್ಷಗಳ ಕಾಲ ಭಾವನಾತ್ಮಕ ಯಾತನೆ ಅನುಭವಿಸಿರುವ ಬಗ್ಗೆ ಆರೋಪಿಸಿದರು.

ಸುಪ್ರೀಂ ‘ಮಾರ್ಗಸೂಚಿ’ಗಳ ಬಗ್ಗೆ ವಕೀಲರು ಹೇಳೋದೇನು?

ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶ ಹಾಗೂ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಹೈಕೋರ್ಟ್‌ ವಕೀಲರಾದ ರಾಜಲಕ್ಷ್ಮಿ ಅಂಕಲಗಿ ‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದರು.

ಹಿಂದೆ ಬಹಳಷ್ಟು ಹೆಣ್ಣುಮಕ್ಕಳು ಗೃಹಿಣಿಯರಾಗಿ ಇರುತ್ತಿದ್ದರು, ಕೆಲವರು ಮದುವೆ-ಮಕ್ಕಳಾದ ಬಳಿಕ ತಮ್ಮ ಕೆಲಸ ಬಿಡುತ್ತಿದ್ದರು. ಇಂತ ಪ್ರಕರಣಗಳಲ್ಲಿ ಹೆಂಡತಿ-ಮಕ್ಕಳಿಗೆ ಜೀವನಾಂಶ ಕೊಡಬೇಕು ಅಥವಾ ಒನ್‌ಟೈಂ ಸೆಟಲ್‌ಮೆಂಟ್ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಈ ಅಂಶ ದುರ್ಬಳಕೆಯೂ ಆಗಿದೆ. ಕೆಲವೊಬ್ಬರು ವರದಕ್ಷಿಣೆ ದೂರು ದಾಖಲಿಸಿ, ಬ್ಲಾಕ್‌ಮೇಲ್ ಮಾಡುವ ಪ್ರಕರಣಗಳು ನಡೆದವು. ಆದರೆ, ಯಾರೋ ಕೆಲವೊಬ್ಬರು ಮಾಡಿದರು ಎನ್ನುವ ಕಾರಣಕ್ಕೆ, ಎಲ್ಲರೂ ಮಾಡಿದರು ಎಂದು ಸಾಮಾನ್ಯೀಕರಿಸುವುದಕ್ಕೆ ಸಾಧ್ಯವಿಲ್ಲ. ಕಾನೂನಿನ ದುರ್ಬಳಕೆ ಆಗಿದೆ ಎಂಬುದನ್ನು ಕೋರ್ಟ್ ಕೂಡ ಹೇಳುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ದುರ್ಬಳಕೆಯೂ ಆಗಿದೆ.

ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶಕ್ಕಾಗಿ ಅವೈಜ್ಞಾನಿಕವಾಗಿ ಬೇಡಿಕೆ ಇಡಲಾಗುತ್ತಿತ್ತು. ಕೆಲವೊಮ್ಮೆ ಪತಿಯ ಸಂಬಳ ಕಡಿಮೆ ಇದ್ದರೂ, ಪತ್ನಿಯ ಅಗತ್ಯವಿರುವಷ್ಟು ಹಣ ಕೊಡಬೇಕು ಎಂದು ಕೇಳುವುದಕ್ಕೆ ಶುರು ಮಾಡಿದ್ದರು. ವ್ಯಕ್ತಿಯೊಬ್ಬರಿಗೆ ಎಷ್ಟು ಅವಷ್ಯಕತೆ ಇದೆ, ಆ ಆಧಾರದಲ್ಲಿ ಜೀವನಾಂಶ ಕೊಡಬೇಕಾ..? ಅಥವಾ ಯಾವ ಆಧಾರದ ಮೇಲೆ ಪರಿಹಾರ ಕೊಡಬೇಕು ಎಂಬ ಪ್ರಶ್ನೆ ಬಂದಾಗ, ತನ್ನ ಹಿಂದಿನ ತೀರ್ಪುಗಳಲ್ಲಿ ಸುಪ್ರೀಂ ಕೋರ್ಟ್‌ ಕೆಲವು ಮಾರ್ಗಸೂಚಿಗಳನ್ನು ನೀಡಿದೆ.

ಗಂಡ-ಹೆಂಡತಿ ಜೊತೆಯಲ್ಲಿದ್ದಾಗ ಅವರು ಯಾವ ರೀತಿ ಖರ್ಚು ಮಾಡುತ್ತಿದ್ದರು? ಅವರ ಜೀವನ ಮಟ್ಟ ಹೇಗಿತ್ತೋ, ಅವರು ದೂರವಾದ ಬಳಿಕವೂ ಹೆಂಡತಿ ಮತ್ತು ಮಕ್ಕಳು ಅದೇ ರೀತಿಯ ಜೀವನ ನಡೆಸುವಷ್ಟು ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಹೇಳುತ್ತದೆ. ಅಂದರೆ, ಆಕೆ ಗಂಡನ ಮನೆಯಲ್ಲಿ ಹೇಗೆ ಜೀವನ ಮಾಡುತ್ತಿರೋ, ಅಲ್ಲಿಂದ ಹೊರಗೆ ಬಂದಾಗಲು ಕೂಡಾ ಅದೇ ರೀತಿಯ ಜೀವನಮಟ್ಟ ನಡೆಸಲು ಅನುವು ಮಾಡಿಕೊಡುತ್ತದೆ. ಇದ್ದಕ್ಕಿಂದ್ದಂತೆಯೇ ಶ್ರೀಮಂತಿಕೆಯಿಂದ ಬಡತನಕ್ಕೆ ಇಳಿದರೆ, ಮಕ್ಕಳ ಮೇಲೆ ಮಾನಸಿಕ ಪರಿಣಾಮ ಬೀರುತ್ತದೆ ಎಂಬುದನ್ನು ಕೋರ್ಟ್‌ ಗಮನಿಸಿದೆ. ಇದೆಲ್ಲಾ ಆಗಬಾರದು ಎಂಬುದು ಕೋರ್ಟ್‌ ಉದ್ದೇಶವಾಗಿದೆ.

ಆ ಬಳಿಕವೂ, ಈ ವಿಚಾರದಲ್ಲಿ ಬಹಳಷ್ಟು ವಿಷಯಗಳು ಚರ್ಚೆಗೆ ಬಂದಿವೆ. ಅಲ್ಲಿ ಕುಟುಂಬ ಸಾಲ ಮಾಡಿ ಜೀವನ ನಡೆಸುತ್ತಿತ್ತಾ..? ಅಥವಾ ನಿಜವಾಗಲೂ ಅಷ್ಟೊಂದು ಗಳಿಸುತ್ತಿದ್ದರಾ ಎಂಬ ಚರ್ಚೆಯೂ ನಡೆದಿದೆ. ಕೆಲವು ಪ್ರಕರಣಗಳಲ್ಲಿ ಇಬ್ಬರೂ ತಮ್ಮ ತಮ್ಮ ನೈಜ ಆದಾಯವನ್ನು ಮುಚ್ಚಿಡುವುದಕ್ಕೆ ಆರಂಭಿಸಿದರು. ಒಂದು ಲಕ್ಷ ರೂಪಾಯಿ ಸಂಬಳ ಬರುತ್ತಿದ್ದರೆ, ಐವತ್ತು ಸಾವಿರ ಎಂದು ಹೇಳುವುದು; ನಲವತ್ತು ಬರುತ್ತದೆ ಎಂದು ಹೇಳುವುದಕ್ಕೆ ಆರಂಭಿಸಿದರು. ನೈಜ ಮಾಹಿತಿ ಸಂಗ್ರಹಿಸಲು ವರ್ಷಗಟ್ಟಲೆ ಹಿಡಿಯುತ್ತಿತ್ತು. ಇದನ್ನೆಲ್ಲಾ ತಪ್ಪಿಸುವ ಸಲುವಾಗಿ, 2020ರಲ್ಲಿ ರಜನೀಶ್‌-ನೇಹಾ ಪ್ರಕರಣದಲ್ಲಿ ಕೋರ್ಟ್‌ ಹೊಸ ತೀರ್ಪು ನೀಡಿದೆ. ಯಾವ ಆಧಾರದಲ್ಲಿ ಜೀವಾನಾಂಶ ನಿರ್ಧರಿಸಬೇಕು ಎಂದು ಹೇಳಿದೆ.

ಜೀವನಾಂಶ ಅಥವಾ ಸೆಟಲ್‌ಮೆಂಟ್ ಕೇಳುವವರು ಇಬ್ಬರೂ ವ್ಯಕ್ತಿಗಳು ಕೋರ್ಟ್‌ ಎದುರಿಗೆ ತಮ್ಮ ಸಂಪೂರ್ಣ ಆದಾಯ ಹಾಗೂ ಆಸ್ತಿ ವಿವರದ ಅಫಿಡವಿಟ್ ನೀಡಬೇಕು. ಇಬ್ಬರೂ ತಮ್ಮತಮ್ಮ ವಿದ್ಯಾರ್ಹತೆ ಪ್ರಮಾಣಪತ್ರ, ಸ್ಯಾಲರಿ ಸ್ಲಿಪ್‌ ಹಾಗೂ ಮೂರು ವರ್ಷಗಳ ಬ್ಯಾಂಕ್ ಸ್ಟೇಟ್‌ಮೆಂಟ್ ಕೊಡಬೇಕು. ಇಬ್ಬರಿಗೂ ಯಾವುದಾದರೂ ರೋಗರುಜಿನ ಇದ್ದರೆ, ಅದರ ಮಾಹಿಯನ್ನೂ ಕೊಡಬೇಕು. ಇಬ್ಬರ ಮೇಲೆ ಎಷ್ಟು ಜನ ಅವಲಂಬಿತರಾಗಿದ್ದಾರೆ ಎಂಬ ಸಂಪೂರ್ಣ ಮಾಹಿತಿ ನೀಡಬೇಕು. ಅವಲಂಬಿತರಿಗೆ ಯಾವುದಾದರೂ ಆದಾಯವಿದ್ದರೆ, ಅದರ ಮಾಹಿತಿಯನ್ನೂ ಕೋರ್ಟ್‌ಗೆ ನೀಡಬೇಕು. ಒಟ್ಟಾರೆ, ವ್ಯಕ್ತಿಯ ಒಟ್ಟು ಆದಾಯವನ್ನು ಅಂದಾಜು ಮಾಡಲು ಬೇಕಾಗಿರುವ ಎಲ್ಲ ಮಾಹಿತಿಯನ್ನೂ ಕೋರ್ಟ್‌ಗೆ ಕೊಡಬೇಕಾಗುತ್ತದೆ.

ಕೋರ್ಟ್‌ ಇಬ್ಬರ ಮಾಹಿತಿಯನ್ನೂ ಪರಿಶೀಲಿಸಿ, ಎಷ್ಟು ಜೀವನಾಂಶ ಕೊಡಬೇಕು ಎಂದು ನಿರ್ಧರಿಸುತ್ತದೆ. ವ್ಯಕ್ತಿಯ ಸಂಬಳದಲ್ಲಿ ಶೇ.30ರಿಂದ 40ರಷ್ಟು ಹಣವನ್ನು ಜೀವನಾಂಶವಾಗಿ ಕೊಡಬೇಕಾಗುತ್ತದೆ ಎಂದು ನಿಯಮ ಮಾಡಿದೆ. ಹೀಗೆ ಕೊಡುವಾಗ, ಹೆಂಡತಿಯ ವಿದ್ಯಾರ್ಹತೆ ಹಾಗೂ ಆದಾಯವನ್ನೂ ಪರಿಶೀಲಿಸುತ್ತದೆ. ಗಂಡನಷ್ಟೇ ಹೆಂಡತಿಯೂ ಆದಾಯ ಪಡೆಯುತ್ತಿದ್ದರೆ, ಪರಿಹಾರ ಕೊಡುವ ಅಗತ್ಯವಿಲ್ಲ. ಆದರೆ, ಮಕ್ಕಳಿಗೆ ಜೀವನಾಂಶ ಕೊಡಬೇಕು. ಮಕ್ಕಳ ಪೋಷಣೆ ಸಹಜವಾಗಿ ತಂದೆಯ ಜವಾಬ್ದಾರಿ ಎಂದು ಕೋರ್ಟ್‌ ಈ ಪ್ರಕರಣದಲ್ಲಿ ಹೇಳಿತ್ತು. ಹೆಂಡತಿಗೆ ಉತ್ತಮ ಆದಾಯವಿದ್ದರೆ, ಆಕೆಯೂ ಕೂಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲು ನೀಡಬೇಕು ಎಂದು ಹೇಳಿತ್ತು.

ಖಾಸಗಿಯಾಗಿ ಹಾಗೂ ಆನ್‌ಲೈನ್ ಜಾಬ್ ಮಾಡುವ ಬಹಳಷ್ಟು ಜನರಿಗೆ ಸ್ಯಾಲರಿ ಸ್ಲಿಪ್‌ ಇರುವುದಿಲ್ಲ. ಅದನ್ನೆಲ್ಲಾ ಕೆಲವರು ಮುಚ್ಚಿಡುತ್ತಾರೆ; ಇದು ಸಾಮಾನ್ಯವಾಗಿದೆ. ಇದನ್ನೆಲ್ಲಾ ಪರಿಶೀಲಿಸಿ ತೀರ್ಪು ನೀಡಲು ಕೋರ್ಟ್‌ಗೆ ಸಾಕಷ್ಟು ಸಮಯ ಹಿಡಿಯುತ್ತದೆ. ಈ ಅವಧಿಯಲ್ಲಿ ಕಕ್ಷಿದಾರರು ಸಾಕಷ್ಟು ನೋವು ಅನುಭವಿಸುತ್ತಾರೆ. ಈಗ ನಾವು ಒಬ್ಬೇಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ. ಆ ರೀತಿ ಬಹಳಷ್ಟು ಹೆಣ್ಣುಮಕ್ಕಳಿಗೆ ಹಿಂಸೆ ನೀಡುವ ಸಾವಿರಾರು ಪುರುಷರಿದ್ದಾರೆ.

ಕೇಸ್ ನಡೆಯುವಾಗ ಸಾಕಷ್ಟು ಹೆಣ್ಣುಮಕ್ಕಳು ಪಾತ್ರೆ ತಿಕ್ಕುವ ಕೆಲಸವನ್ನೂ ಮಾಡುತ್ತಾರೆ. ಅವರ ಸ್ಥಿತಿ ಯಾರಿಗೂ ತಿಳಿಯುವುದಿಲ್ಲ. ಎರಡೂ ಕಡೆಯಿಂದಲೂ ದೌರ್ಜನ್ಯ ಇರುತ್ತದೆ. ಸಹಜವಾಗಿಯೇ ಹೆಣ್ಣು ಮಕ್ಕಳಿಗೆ ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ. ‘ಕಾನೂನೆಲ್ಲಾ ಹೆಂಗಸರ ಪರವಾಗಿವೆ, ನಮಗೆ ಏನೂ ಇಲ್ಲ ಎಂದು ಗಂಡಸರ ತಲೆಯೊಳಗೆ ಕುಳಿತಿರುವುದರಿಂದ ಅವರು ಬೇಗ ದುರ್ಬಲರಾಗುತ್ತಾ. ಸಮಾಜದಲ್ಲಿ ಜನ ಅವರ ಬಗ್ಗೆ ಮಾತನಾಡುವುದನ್ನೂ ಕೂಡ ತಡೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ, ಅವರು ಆತ್ಮಹತ್ಯೆ ಬೇಗನೆ ಮಾಡಿಕೊಳ್ಳುತ್ತಾರೆ. ಎನ್‌ಸಿಆರ್‌ಬಿ ಪ್ರಕಾರ, ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡವರೆ ಹೆಚ್ಚು. ಈ ಎಲ್ಲವನ್ನೂ ಗಮನಿಸಿದ ಸುಪ್ರೀಂಕೋರ್ಟ್‌, ನಿನ್ನೆ ಒಂದಷ್ಟು ಮಾರ್ಗಸೂಚಿಗಳನ್ನು ನೀಡಿದೆ. ಇವೆಲ್ಲಾ ಹೊಸತಲ್ಲ, ಈ ಹಿಂದೆಯೂ ಸಾಕಷ್ಟು ಮಾರ್ಗಸೂಚಿಗಳನ್ನು ನೀಡಿದೆ. ಇದು ರಜನೀಶ್‌-ನೇಹಾ ಪ್ರಕರಣದ ಮುಂದುವರಿದ ಭಾಗವಷ್ಟೆ.

ಇದನ್ನೂ ಓದಿ; ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...