Homeಅಂತರಾಷ್ಟ್ರೀಯಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

ಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

- Advertisement -
- Advertisement -

ಗಾಝಾ ಪಟ್ಟಿಯ ಮೇಲೆ ಇಸ್ರೇಲ್‌ ನಿರಂತರ ದಾಳಿ ಮಾಡುತ್ತಿದೆ. ಯುದ್ಧ ಘೋಷಣೆ ಬಳಿಕ ಪ್ಯಾಲೆಸ್ತೀನ್‌ನಲ್ಲಿ 17,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧವನ್ನು ಮುಂದುವರಿಸಿದೆ. ಈ ಮಧ್ಯೆ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆ ಮಂಡಿಸಿದೆ. ಆದರೆ ನಿರ್ಣಯವನ್ನು ಬೆಂಬಲಿಸಲು ಅಮೆರಿಕ ನಿರಾಕರಿಸಿದ್ದು, ಪ್ರಸ್ತಾವಣೆಗೆ ವಿಟೊ ಅಧಿಕಾರ ಬಳಸಿ ತಡೆ ನೀಡಿದೆ.

ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಬ್ರಿಟನ್ ಮತದಾನದಿಂದ ದೂರ ಉಳಿದಿದೆ. ಪ್ಯಾಲೆಸ್ತೀನ್‌ ಹಾಗೂ ಇಸ್ರೇಲ್ ಜನರು ಶಾಂತಿಯುತವಾಗಿ ಬದುಕಬೇಕು. ಆದರೆ ದೀರ್ಘಕಾಲದ ಶಾಂತಿಯನ್ನು ಹಮಾಸ್ ಬಯಸುವುದಿಲ್ಲ. ಹಾಗಾಗಿ ಶಾಂತಿಯನ್ನು ಅಮೆರಿಕ ಬಯಸಿದರೂ ತಕ್ಷಣದ ಕದನ ವಿರಾಮ ನಿರ್ಣಯವನ್ನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ 17,487 ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಝಾದ ವಿಶಾಲ ಪ್ರದೇಶಗಳು ಪಾಳುಭೂಮಿಯಾಗಿ ಮಾರ್ಪಟ್ಟಿವೆ. ಸುಮಾರು 80 ಪ್ರತಿಶತ ಜನಸಂಖ್ಯೆಯು ಸ್ಥಳಾಂತರಗೊಂಡಿದ್ದು, ಆಹಾರ, ಇಂಧನ, ನೀರು ಮತ್ತು ಔಷಧಿಗಳ ಭೀಕರ ಕೊರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಸಾಂಕ್ರಾಮಿ ರೋಗದ ಭೀತಿ ಎದುರಾಗಿದೆ ಎಂದು UN ಹೇಳಿದೆ.

ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರು ತುರ್ತು ಭದ್ರತಾ ಮಂಡಳಿಯ ಸಭೆಯನ್ನು ಕರೆದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಗೆ ಒತ್ತಾಯಿಸಿದ್ದು, ಹಮಾಸ್ ನಡೆಸಿದ ಕ್ರೌರ್ಯಕ್ಕೆ ಪ್ಯಾಲೆಸ್ತೀನ್‌ ಜನರ ಸಾಮೂಹಿಕ ಶಿಕ್ಷೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ಗೆ ಯುದ್ಧಕ್ಕೆ ಬಿಲಿಯನ್‌ಗಟ್ಟಲೆ ಡಾಲರ್‌ಗಳ ಮಿಲಿಟರಿ ಸಹಾಯವನ್ನು ಪೂರೈಸುವ ಯುಎಸ್, ನಿರ್ಣಯವನ್ನು ತಿರಸ್ಕರಿಸಿದೆ. ಭದ್ರತಾ ಮಂಡಳಿಯ 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಒಂದಾಗಿರುವ ಅಮೆರಿಕ, ಹಮಾಸ್ ದಾಳಿಯ ವಿರುದ್ಧ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ವಾದಿಸಿ ನಿರ್ಣಯವನ್ನು ತಿರಸ್ಕರಿಸಿದೆ. ಮತದಾನದಿಂದ ಬ್ರಿಟನ್ ದೂರ ಉಳಿದಿದ್ದು, ಫ್ರಾನ್ಸ್‌ ಸೇರಿ ಕೆಲವು ಯುಎಸ್ ಮಿತ್ರರಾಷ್ಟ್ರಗಳು ಕದನ ವಿರಾಮಕ್ಕೆ ಮತ ಹಾಕಿದೆ.

ಕೌನ್ಸಿಲ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ್ನು ಪ್ರತಿನಿಧಿಸುತ್ತಿದ್ದ ರಾಬರ್ಟ್ ಎ.ವುಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಬೇಷರತ್ತಾದ ಮತ್ತು ತಕ್ಷಣದ ಕದನ ವಿರಾಮದ ನಿರ್ಣಯವು ಅವಾಸ್ತವಿಕ ಮಾತ್ರವಲ್ಲ ಅಪಾಯಕಾರಿಯಾಗಿದೆ.  ಹಮಾಸ್ ಇದು ಮರುಸಂಘಟಿಸಲು ಸಾಧ್ಯವಾಗುತ್ತದೆ ಮತ್ತು ಅ.7ರಂದು ಮಾಡಿದ್ದನ್ನು ಪುನರಾವರ್ತಿಸುತ್ತದೆ  ಎಂದು ಹೇಳಿದ್ದಾರೆ.

ಎರಡು ತಿಂಗಳ ಯುದ್ಧದ ನಂತರ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಆಹಾರ, ಔಷಧಿ ಮತ್ತು ಅಡುಗೆ ಅನಿಲದಂತಹ ಅಗತ್ಯ ವಸ್ತುಗಳನ್ನು ತಲುಪಿಸಲು ವಿಫಲವಾಗುತ್ತಿದೆ. ನಾಗರಿಕರ ಸುವ್ಯವಸ್ಥೆ ಹದಗೆಡುತ್ತಿದೆ. ಯುಎನ್ ವಾಹನಗಳಿಗೆ ಕಲ್ಲೆಸೆಯಲಾಗುತ್ತಿದೆ. ಆಹಾರ ಸಾಮಾಗ್ರಿಗಳನ್ನು ಲೂಟಿ ಮಾಡಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಶ್ವಸಂಸ್ಥೆಯ ಪರಿಹಾರ ಸಂಸ್ಥೆಯ ನಿರ್ದೇಶಕ ಥಾಮಸ್ ವೈಟ್ ಹೇಳಿದ್ದಾರೆ.

ದಕ್ಷಿಣ ಗಾಝಾದ ಅತಿದೊಡ್ಡ ನಗರವಾದ ಖಾನ್ ಯೂನಿಸ್ ಮತ್ತು ಉತ್ತರ ಗಾಝಾದ ಮೇಲೆ ದಾಳಿ ನಡೆಯುತ್ತಿವೆ. ಇಸ್ರೇಲ್‌ ಪಡೆಗಳು ಗಾಝಾ ನಗರದ ಶಾಜೈ ನೆರೆಹೊರೆಯ ಮೇಲೆ ಮತ್ತು ನಗರದ ಉತ್ತರಕ್ಕೆ ಜನನಿಬಿಡ ಪ್ರದೇಶವಾದ ಜಬಾಲಿಯಾ ಮೇಲೆ ದಾಳಿ ನಡೆಸುತ್ತಿದೆ. ಅಲ್ಲಿ ಹಮಾಸ್ ಕಾರ್ಯಕರ್ತರಿದ್ದಾರೆ ಎಂದು ಇಸ್ರೇಲ್‌ ಆರೋಪಿಸಿದೆ.

ಇದನ್ನು ಓದಿ: ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...