Homeಮುಖಪುಟಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಜವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಕಲ್ಲು ತೂರಾಟ, ಧ್ವಂಸ ಮತ್ತು ಉದ್ವಿಗ್ನತೆಗೆ ಕಾರಣವಾಯಿತು.

ಪೊಲೀಸರ ಪ್ರಕಾರ, ದಲತ ಕುಟುಂಬದ ಮದುವೆ ಮೆರವಣಿಗೆಯು ಪ್ರಬಲ ಜಾತಿ ಸಮುದಾಯದ ಪ್ರದೇಶದ ಮೂಲಕ ಹಾದುಹೋಗುವಾಗ ರಾತ್ರಿ 9.15 ರ ಸುಮಾರಿಗೆ ಘರ್ಷಣೆ ಸಂಭವಿಸಿದೆ. ಜಾತಿ ಆಧಾರಿತ ಮತ್ತು ಆಕ್ಷೇಪಾರ್ಹವೆಂದು ಗ್ರಹಿಸಲಾದ ಹಾಡನ್ನು ಹಾಕಲಾಗಿತ್ತು, ಈ ಹಾಡಿನ ಬಗ್ಗೆ ಕೆಲವರಿಂದ ಆಕ್ಷೇಪಣೆಗೆ ಕಾರಣವಾಯಿತು. ಶೀಘ್ರದಲ್ಲೇ ಪರಿಸ್ಥಿತಿ ಹಿಂಸಾಚಾರಕ್ಕೆ ಕಾರಣವಾಯಿತು. ಎರಡೂ ಜಾತಿಯ ಜನರು ಕೋಲು ಮತ್ತು ಕಲ್ಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘರ್ಷಣೆಯ ವೀಡಿಯೊಗಳು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಡಿಜೆ ಮೂಲಕ ಪ್ರಚೋದನಕಾರಿ ಹಾಡನ್ನು ಹಾಕಿದ ನಂತರ ಸಂಘರ್ಷ ಪ್ರಾರಂಭವಾಯಿತು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸ್ ನಗರ ಮೃಗಾಂಕ್ ಶೇಖರ್ ಪಾಠಕ್ ಹೇಳಿದ್ದಾರೆ.

“ಬರಾತ್‌ನ ಸದಸ್ಯರೊಬ್ಬರು ಜಾತಿ ಆಧಾರಿತ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಹಾಡನ್ನು ಹಾಕಿದಾಗ, ಅಲ್ಲಿದ್ದ ಇತರೆ ಜನರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕೆ ತಲುಪಿ, ಎರಡೂ ಕಡೆಯವರನ್ನು ಸಮಾಧಾನಪಡಿಸಿ, ಮೆರವಣಿಗೆಗೆ ಭದ್ರತೆ ಒದಗಿಸಿದರು” ಎಂದು ಪಾಠಕ್ ಹೇಳಿದರು.

ಬರಾತ್‌ನನ್ನು ಮದುವೆ ಸ್ಥಳಕ್ಕೆ ಸುರಕ್ಷಿತವಾಗಿ ಕರೆದೊಯ್ಯಲಾಯಿತು, ಗ್ರಾಮದಲ್ಲಿ ಶಾಂತಿ ನೆಲೆಸಿದೆ. ಪ್ರಕರಣ ದಾಖಲಿಸಲಾಗಿದ್ದು, ಕಠಿಣ ಕ್ರಮಕ್ಕಾಗಿ ಕೃತ್ಯದಲ್ಲಿ ಭಾಗಿಯಾದವರನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸಬ್ ಇನ್ಸ್‌ಪೆಕ್ಟರ್ ಘನಶ್ಯಾಮ್ ಸಿಂಗ್, “ಮೆರವಣಿಗೆಯಲ್ಲಿ ಹಾಕಿದ್ದ ಹಾಡು ಆಕ್ಷೇಪಾರ್ಹ ಎಂದಯ ಕೆಲವರು ವಾದಿಸಿದ್ದಾರೆ. ಕೆಲವು ಅಪರಿಚಿತ ವ್ಯಕ್ತಿಗಳು ಪರಸ್ಪರ ದಾಳಿ ಮಾಡಿದರು, ಪರಸ್ಪರ ನಿಂದಿಸಿದರು, ಕೋಲುಗಳನ್ನು ಬಳಸಿದರು. ಹತ್ತಿರದ ಮನೆಗಳನ್ನು ಸಹ ಧ್ವಂಸಗೊಳಿಸಲಾಯಿತು. ಈ ಘಟನೆಯು ಭೀತಿಯನ್ನು ಸೃಷ್ಟಿಸಿತು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಿತು” ಎಂದು ಅವರು ಹೇಳಿದರು.

ಪೊಲೀಸರು ತನಿಖೆಗಾಗಿ ವೀಡಿಯೊ ದೃಶ್ಯಾವಳಿ ಮತ್ತು ಆಡಿಯೊ ಟ್ರ್ಯಾಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಭಾರತೀಯ ನ್ಯಾಯ ಸಂಹಿತಾದ ಹಲವಾರು ವಿಭಾಗಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ, ಇದರಲ್ಲಿ ಗಲಭೆ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ, ಕ್ರಿಮಿನಲ್ ಬಲಪ್ರಯೋಗ ಮತ್ತು ಕಿಡಿಗೇಡಿತನ ಸೇರಿದಂತೆ ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ನಿಬಂಧನೆಗಳು ಸೇರಿವೆ.

ಉದ್ದೇಶಿತ ದಾಳಿ ಎಂದ ವದುವಿನ ಕುಟುಂಬ

ಮೆರವಣಿಗೆಯ ಮೇಲೆ ಪ್ರಚೋದನೆಯಿಲ್ಲದೆ ದಾಳಿ ಮಾಡಲಾಗಿದೆ ಎಂದು ವಧುವಿನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಹರಿತವಾದ ಆಯುಧಗಳನ್ನು ಹೊಂದಿದ್ದ ದುಷ್ಕರ್ಮಿಗಳು ಬರಾತ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಧುವಿನ ಸಹೋದರ ಅನೀಸ್ ಕುಮಾರ್ ಹೇಳಿದ್ದಾರೆ. ಪೊಲೀಸರ ಹಸ್ತಕ್ಷೇಪದ ನಂತರವೇ ಮದುವೆ ಮುಂದುವರಿಯಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ಮತ್ತೊಂದು ವೈರಲ್ ವೀಡಿಯೊದಲ್ಲಿ, ಮೆರವಣಿಗೆಯಲ್ಲಿ ಭಾಗವಹಿಸಿದ ಒಬ್ಬರು ಠಾಕೂರ್ ಸಮುದಾಯದ ಸದಸ್ಯರು ದಲಿತ ವಿವಾಹ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದಾಳಿಯು ಹೆಚ್ಚುತ್ತಿರುವ ಜಾತಿ ಉದ್ವಿಗ್ನತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಭೀಮ್ ಸೇನೆಯ ಮುಖ್ಯಸ್ಥ ಚಂದ್ರ ಶೇಖರ್ ಆಜಾದ್ ಈ ಘಟನೆಯನ್ನು ಖಂಡಿಸಿದ್ದಾರೆ. ಮೆರವಣಿಗೆಯ ಮೇಲೆ ಕೋಲುಗಳು ಮತ್ತು ಇತರ ಆಯುಧಗಳಿಂದ ದಾಳಿ ಮಾಡಲಾಗಿದೆ, ಜಾತಿವಾದಿ ನಿಂದನೆಗಳನ್ನು ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಗ್ರಾಮದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ಘರ್ಷಣೆಯಲ್ಲಿ ಭಾಗಿಯಾದವರನ್ನು ಗುರುತಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...