Homeಮುಖಪುಟಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಜವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಕಲ್ಲು ತೂರಾಟ, ಧ್ವಂಸ ಮತ್ತು ಉದ್ವಿಗ್ನತೆಗೆ ಕಾರಣವಾಯಿತು.

ಪೊಲೀಸರ ಪ್ರಕಾರ, ದಲತ ಕುಟುಂಬದ ಮದುವೆ ಮೆರವಣಿಗೆಯು ಪ್ರಬಲ ಜಾತಿ ಸಮುದಾಯದ ಪ್ರದೇಶದ ಮೂಲಕ ಹಾದುಹೋಗುವಾಗ ರಾತ್ರಿ 9.15 ರ ಸುಮಾರಿಗೆ ಘರ್ಷಣೆ ಸಂಭವಿಸಿದೆ. ಜಾತಿ ಆಧಾರಿತ ಮತ್ತು ಆಕ್ಷೇಪಾರ್ಹವೆಂದು ಗ್ರಹಿಸಲಾದ ಹಾಡನ್ನು ಹಾಕಲಾಗಿತ್ತು, ಈ ಹಾಡಿನ ಬಗ್ಗೆ ಕೆಲವರಿಂದ ಆಕ್ಷೇಪಣೆಗೆ ಕಾರಣವಾಯಿತು. ಶೀಘ್ರದಲ್ಲೇ ಪರಿಸ್ಥಿತಿ ಹಿಂಸಾಚಾರಕ್ಕೆ ಕಾರಣವಾಯಿತು. ಎರಡೂ ಜಾತಿಯ ಜನರು ಕೋಲು ಮತ್ತು ಕಲ್ಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘರ್ಷಣೆಯ ವೀಡಿಯೊಗಳು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಡಿಜೆ ಮೂಲಕ ಪ್ರಚೋದನಕಾರಿ ಹಾಡನ್ನು ಹಾಕಿದ ನಂತರ ಸಂಘರ್ಷ ಪ್ರಾರಂಭವಾಯಿತು ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸ್ ನಗರ ಮೃಗಾಂಕ್ ಶೇಖರ್ ಪಾಠಕ್ ಹೇಳಿದ್ದಾರೆ.

“ಬರಾತ್‌ನ ಸದಸ್ಯರೊಬ್ಬರು ಜಾತಿ ಆಧಾರಿತ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಹಾಡನ್ನು ಹಾಕಿದಾಗ, ಅಲ್ಲಿದ್ದ ಇತರೆ ಜನರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕೆ ತಲುಪಿ, ಎರಡೂ ಕಡೆಯವರನ್ನು ಸಮಾಧಾನಪಡಿಸಿ, ಮೆರವಣಿಗೆಗೆ ಭದ್ರತೆ ಒದಗಿಸಿದರು” ಎಂದು ಪಾಠಕ್ ಹೇಳಿದರು.

ಬರಾತ್‌ನನ್ನು ಮದುವೆ ಸ್ಥಳಕ್ಕೆ ಸುರಕ್ಷಿತವಾಗಿ ಕರೆದೊಯ್ಯಲಾಯಿತು, ಗ್ರಾಮದಲ್ಲಿ ಶಾಂತಿ ನೆಲೆಸಿದೆ. ಪ್ರಕರಣ ದಾಖಲಿಸಲಾಗಿದ್ದು, ಕಠಿಣ ಕ್ರಮಕ್ಕಾಗಿ ಕೃತ್ಯದಲ್ಲಿ ಭಾಗಿಯಾದವರನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸಬ್ ಇನ್ಸ್‌ಪೆಕ್ಟರ್ ಘನಶ್ಯಾಮ್ ಸಿಂಗ್, “ಮೆರವಣಿಗೆಯಲ್ಲಿ ಹಾಕಿದ್ದ ಹಾಡು ಆಕ್ಷೇಪಾರ್ಹ ಎಂದಯ ಕೆಲವರು ವಾದಿಸಿದ್ದಾರೆ. ಕೆಲವು ಅಪರಿಚಿತ ವ್ಯಕ್ತಿಗಳು ಪರಸ್ಪರ ದಾಳಿ ಮಾಡಿದರು, ಪರಸ್ಪರ ನಿಂದಿಸಿದರು, ಕೋಲುಗಳನ್ನು ಬಳಸಿದರು. ಹತ್ತಿರದ ಮನೆಗಳನ್ನು ಸಹ ಧ್ವಂಸಗೊಳಿಸಲಾಯಿತು. ಈ ಘಟನೆಯು ಭೀತಿಯನ್ನು ಸೃಷ್ಟಿಸಿತು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಿತು” ಎಂದು ಅವರು ಹೇಳಿದರು.

ಪೊಲೀಸರು ತನಿಖೆಗಾಗಿ ವೀಡಿಯೊ ದೃಶ್ಯಾವಳಿ ಮತ್ತು ಆಡಿಯೊ ಟ್ರ್ಯಾಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಭಾರತೀಯ ನ್ಯಾಯ ಸಂಹಿತಾದ ಹಲವಾರು ವಿಭಾಗಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ, ಇದರಲ್ಲಿ ಗಲಭೆ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ, ಕ್ರಿಮಿನಲ್ ಬಲಪ್ರಯೋಗ ಮತ್ತು ಕಿಡಿಗೇಡಿತನ ಸೇರಿದಂತೆ ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ನಿಬಂಧನೆಗಳು ಸೇರಿವೆ.

ಉದ್ದೇಶಿತ ದಾಳಿ ಎಂದ ವದುವಿನ ಕುಟುಂಬ

ಮೆರವಣಿಗೆಯ ಮೇಲೆ ಪ್ರಚೋದನೆಯಿಲ್ಲದೆ ದಾಳಿ ಮಾಡಲಾಗಿದೆ ಎಂದು ವಧುವಿನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಹರಿತವಾದ ಆಯುಧಗಳನ್ನು ಹೊಂದಿದ್ದ ದುಷ್ಕರ್ಮಿಗಳು ಬರಾತ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಧುವಿನ ಸಹೋದರ ಅನೀಸ್ ಕುಮಾರ್ ಹೇಳಿದ್ದಾರೆ. ಪೊಲೀಸರ ಹಸ್ತಕ್ಷೇಪದ ನಂತರವೇ ಮದುವೆ ಮುಂದುವರಿಯಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ಮತ್ತೊಂದು ವೈರಲ್ ವೀಡಿಯೊದಲ್ಲಿ, ಮೆರವಣಿಗೆಯಲ್ಲಿ ಭಾಗವಹಿಸಿದ ಒಬ್ಬರು ಠಾಕೂರ್ ಸಮುದಾಯದ ಸದಸ್ಯರು ದಲಿತ ವಿವಾಹ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದಾಳಿಯು ಹೆಚ್ಚುತ್ತಿರುವ ಜಾತಿ ಉದ್ವಿಗ್ನತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಭೀಮ್ ಸೇನೆಯ ಮುಖ್ಯಸ್ಥ ಚಂದ್ರ ಶೇಖರ್ ಆಜಾದ್ ಈ ಘಟನೆಯನ್ನು ಖಂಡಿಸಿದ್ದಾರೆ. ಮೆರವಣಿಗೆಯ ಮೇಲೆ ಕೋಲುಗಳು ಮತ್ತು ಇತರ ಆಯುಧಗಳಿಂದ ದಾಳಿ ಮಾಡಲಾಗಿದೆ, ಜಾತಿವಾದಿ ನಿಂದನೆಗಳನ್ನು ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಗ್ರಾಮದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ಘರ್ಷಣೆಯಲ್ಲಿ ಭಾಗಿಯಾದವರನ್ನು ಗುರುತಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...