Homeಮುಖಪುಟಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ...

ಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ ಮನೆ ಮೇಲೆ ಇಡಿ ದಾಳಿ

- Advertisement -
- Advertisement -

ದೆಹಲಿ ಜಲ ಮಂಡಳಿಯಿಂದ (ಡಿಜೆಬಿ) ಹಣ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್‌ಡಿ ಗುಪ್ತಾ ಸೇರಿದಂತೆ ಇತರರ ಮೇಲೆ ದಾಳಿ ನಡೆಸಿದೆ.

ತನಿಖಾ ಸಂಸ್ಥೆಯು ಜನವರಿ 31 ರಂದು ಜಗದೀಶ್ ಕುಮಾರ್ ಅರೋರಾ (ಡಿಜೆಬಿಯ ಮಾಜಿ ಮುಖ್ಯ ಇಂಜಿನಿಯರ್) ಮತ್ತು ಉದ್ಯಮಿ ಅನಿಲ್ ಕುಮಾರ್ ಅಗರ್ವಾಲ್ ಅವರನ್ನು ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿತ್ತು.

ಡಿಜೆಬಿಯಲ್ಲಿನ ಭ್ರಷ್ಟಾಚಾರ ಹಾಗೂ ಲಂಚಕ್ಕೆ ಸಂಬಂಧಿಸಿದ ನಿಗದಿತ ಅಪರಾಧಗಳನ್ನು ಒಳಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ಆಧಾರದ ಮೇಲೆ ಇಡಿ ಪ್ರಕರಣದಲ್ಲಿ ತನಿಖೆಯನ್ನು ಪ್ರಾರಂಭಿಸಿತು.

ಜಗದೀಶ್ ಕುಮಾರ್ ಅರೋರಾ (ಅಂದಿನ ಮುಖ್ಯ ಇಂಜಿನಿಯರ್) ದೆಹಲಿ ಜಲ ಮಂಡಳಿಯಲ್ಲಿ ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ಒಟ್ಟು ₹38,02,33,080 ವೆಚ್ಚಕ್ಕೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸದಿದ್ದರೂ ಸಹ ಕೆಲವು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಎಫ್‌ಐಆರ್ ಆರೋಪಿಸಿದೆ.

‘ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ನಕಲಿ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿ ಬಿಡ್ ಪಡೆದುಕೊಂಡಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಎಲೆಕ್ಟ್ರೋಮ್ಯಾಗ್ನೆಟಿಕ್ ಫ್ಲೋ ಮೀಟರ್‌ನ ಎಸ್‌ಐಟಿಸಿ ಟೆಂಡರ್ ಮಂಜೂರಾತಿಗೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸಿಲ್ಲ ಎಂಬ ಅಂಶವನ್ನು ಜಗದೀಶ್ ಕುಮಾರ್ ಅರೋರಾ ತಿಳಿದಿದ್ದರು. ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಈ ಕೆಲಸವನ್ನು ಅನಿಲ್ ಕುಮಾರ್ ಅಗರ್‌ವಾಲ್ ಅವರ ಮಾಲೀಕತ್ವದ ಸಂಸ್ಥೆಯಾದ ಇಂಟೆಗ್ರಲ್ ಸ್ಕ್ರೂಸ್ ಲಿಮಿಟೆಡ್‌ಗೆ ಉಪ-ಗುತ್ತಿಗೆ ನೀಡಿತು. ಹಣವನ್ನು ಸ್ವೀಕರಿಸಿದ ನಂತರ, ಅನಿಲ್ ಕುಮಾರ್ ಅಗರ್ವಾಲ್ ಅವರು ಲಂಚದ ಮೊತ್ತವನ್ನು ₹ 3 ಕೋಟಿಯನ್ನು ಜಗದೀಶ್ ಕುಮಾರ್ ಅರೋರಾ ಅವರಿಗೆ ನಗದು ಮತ್ತು ಬ್ಯಾಂಕ್ ಖಾತೆಗಳ ಮೂಲಕ ವರ್ಗಾಯಿಸಿದ್ದಾರೆ’ ಎಂದು ಇಡಿ ಕಳೆದ ವಾರ ಹೇಳಿಕೆಯಲ್ಲಿ ತಿಳಿಸಿದೆ.

ಲಂಚದ ಮೊತ್ತವನ್ನು ವರ್ಗಾಯಿಸಲು ಜಗದೀಶ್ ಕುಮಾರ್ ಅರೋರಾ ಅವರ ನಿಕಟ ಸಹಚರರು ಮತ್ತು ಅವರ ಸಂಬಂಧಿಕರ ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ ಎಂದು ತನಿಖೆಗಳು ತೋರಿಸುತ್ತವೆ. ಜಗದೀಶ್ ಕುಮಾರ್ ಅರೋರಾ ಅವರ ಆಪ್ತ ಸಹ ಲಂಚವನ್ನು ನಗದು ರೂಪದಲ್ಲಿ ಸ್ವೀಕರಿಸಿದ್ದಾರೆ ಎಂದು ಅದು ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸಂಬಂಧಿಸಿದ ಇತರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು 10 ಸ್ಥಳಗಳಲ್ಲಿ ಹುಡುಕಾಟ ನಡೆಸಿದೆ.

ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಅತಿಶಿ, ಬಿಜೆಪಿ ಸರ್ಕಾರ ತನ್ನ ನಾಯಕರನ್ನು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ‘ಇಂದು ಬೆಳಿಗ್ಗೆ 10 ಗಂಟೆಗೆ ಇಡಿ ಕುರಿತು ಸ್ಫೋಟಕ ಮಾಹಿತಿಯನ್ನು ಎಕ್ಸ್‌ಪೋಸ್ ಮಾಡುತ್ತೇನೆ ಎಂದು ನಿನ್ನೆ ನಾನು ಹೇಳಿದ್ದೆ. ಅದನ್ನು ನಿಲ್ಲಿಸಲು ಮತ್ತು ಎಎಪಿಯನ್ನು ಹೆದರಿಸಲು, ಎಎಪಿ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಬೆಳಿಗ್ಗೆ 7 ರಿಂದ ಇಡಿ ದಾಳಿ ನಡೆಸುತ್ತಿದೆ. ನಮ್ಮ ನಾಯಕ ಎನ್‌ಡಿ ಗುಪ್ತಾ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಗಳ ಮೇಲೆ ದಾಳಿ ನಡೆಯುತ್ತಿದೆ. ಎಎಪಿ ನಾಯಕರ ವಿರುದ್ಧ ಇಡಿ ದಿನವಿಡೀ ದಾಳಿ ನಡೆಸಲಿದೆ ಎಂಬ ವರದಿಗಳಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಎಎಪಿಯನ್ನು ಹೆದರಿಸಲು ಪ್ರಯತ್ನಿಸುತ್ತಿದೆ’ ಎಂದು ಅವರು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ; ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...