Homeಸಿನಿಮಾಕ್ರೀಡೆ22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

- Advertisement -
- Advertisement -

ಟೆನಿಸ್ ಲೋಕದಲ್ಲಿ ರೋಜರ್ ಫೆಡರರ್, ರಫೇಲ್ ನಡಾಲ್‌ನಷ್ಟೇ ಸಾಕಷ್ಟು ಜನಪ್ರಿಯತೆ ಮತ್ತು ಯಶಸ್ಸನ್ನು ಹೊಂದಿರುವ ಮತ್ತೋರ್ವ ದಿಗ್ಗಜ ಸರ್ಬಿಯಾದ ನೋವಾಕ್ ಜೊಕೊವಿಕ್. ಆದರೆ, ಇದೇ ಜೊಕೊವಿಕ್‌ರನ್ನು ಕೊರೊನಾ ಲಸಿಕೆ ಪಡೆದಿಲ್ಲ ಎಂಬ ಕಾರಣಕ್ಕೆ ಕಳೆದ ವರ್ಷ ಆಸ್ಟ್ರೇಲಿಯಾ ಓಪನ್ ಟೂರ್ನಿಯಿಂದಲೇ ಹೊರಗಿಡಲಾಗಿತ್ತು. ಬೇರೆ ಕೆಲವು ಕಾರಣಗಳಿಂದಲೂ, ಕಳೆದ ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಬಹುತೇಕ ಹೊರಗೇ ಉಳಿದಿದ್ದ ಜೊಕೊವಿಕ್ ಇದೀಗ ಆಸ್ಟ್ರೇಲಿಯಾ ಓಪನ್ 2023 ಪ್ರಶಸ್ತಿಗೆ ಮುತ್ತಿಡುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಇದರ ಜೊತೆಗೆ 22 ಗ್ರಾಂಡ್‌ಸ್ಲ್ಯಾಮ್‌ಗಳನ್ನು ಗೆಲ್ಲುವ ಮೂಲಕ ರಫೇಲ್ ನಡಾಲ್ ಸಾಧನೆಯನ್ನು ಸರಿಗಟ್ಟಿದ್ದಾರೆ.

ಕಳೆದ 10 ವರ್ಷಗಳಿಂದ ಟೆನಿಸ್ ಅಂಗಳದಲ್ಲಿ ನೋವಾಕ್ ಜೊಕೊವಿಕ್‌ಗೆ ಕಠಿಣ ಪ್ರತಿಸ್ಪರ್ಧೆ ಒಡ್ಡುತ್ತಿರುವ ಸ್ಟೆಫಾನೊಸ್ ಸಿಟ್ಸಿಪಾಸ್ ಈ ವರ್ಷ ತನ್ನ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಡಲಿದ್ದಾರೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಅಲ್ಲದೆ, ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಅಂತರ ಕಾಯ್ದುಕೊಂಡಿದ್ದ ಜೊಕೊವಿಕ್ ಮತ್ತೆ ಫಾರ್ಮ್‌ಗೆ ಬಂದು ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾಗಿತ್ತು. ಆದರೆ, ಕಳೆದ ಭಾನುವಾರ ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಎಲ್ಲ ವಿಮರ್ಶಕರಿಗೆ ಉತ್ತರ ನೀಡಿದ್ದಾರೆ.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಂತಿಮ ಹಣಾಹಣಿಯಲ್ಲಿ ಸ್ಟೆಫಾನೊಸ್ ಸಿಟ್ಸಿಪಾಸ್ ಅವರನ್ನು ಜೊಕೊವಿಕ್ 6-3, 7-6 (4), 7-6 (5) ಸೆಟ್‌ಗಳಿಂದ ಸೋಲಿಸಿದರು. ಇದರೊಂದಿಗೆ 10ನೇ ಬಾರಿ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. 22ನೇ ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶೇಷ ದಾಖಲೆಯನ್ನೂ ನಿರ್ಮಿಸಿದ್ದಾರೆ.

ಮೂರೇ ಸೆಟ್‌ನಲ್ಲಿ ಪಂದ್ಯ ಮುಗಿಸಿದ ಜೊಕೊವಿಕ್

ಫೈನಲ್ ಪಂದ್ಯದ ಮೊದಲ ಸೆಟ್‌ಅನ್ನು 6-3 ಅಂತರದಿಂದ ಸುಲಭವಾಗಿ ಗೆದ್ದ ನೋವಾಕ್‌ಗೆ 2ನೇ ಸುತ್ತಿನಲ್ಲಿ ಕಠಿಣ ಪೈಪೋಟಿ ಎದುರಾಯಿತು. ಅದರಲ್ಲೂ ರಿವರ್ಸ್ ಸರ್ವ್ ಮೂಲಕ ಸ್ಟೆಫಾನೊಸ್ ಸಿಟ್ಸಿಪಾಸ್ 2ನೇ ಸುತ್ತಿನಲ್ಲಿ ಹಿಡಿತ ಸಾಧಿಸಿದರು. ಪರಿಣಾಮ 7-6 ಅಂತರದಿಂದ ಕಷ್ಟ ಪಟ್ಟು ಜೊಕೊವಿಕ್ 2ನೇ ಸೆಟ್‌ಅನ್ನು ಗೆದ್ದುಕೊಂಡರು. ಇನ್ನು ಮೂರನೇ ಸೆಟ್‌ನಲ್ಲೂ ಇಬ್ಬರೂ ಪರಸ್ಪರ ಭರ್ಜರಿ ಪೈಪೋಟಿಯಿಂದ ಆಡಿದರು. ಆದರೆ ಮೂರನೇ ಸೆಟ್‌ನಲ್ಲಿ ತಮ್ಮ ಅನುಭವವನ್ನೆಲ್ಲಾ ಧಾರೆಯೆರೆದು ಆಡಿದ ನೋವಾಕ್ ಜೊಕೊವಿಕ್ ಸ್ಟೆಫಾನೋಸ್ ಸಿಟ್ಸಿಪಾಸ್ ಅವರನ್ನು 7-6 ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಹಿಳಾ ಕ್ರಿಕೆಟ್ ನಡೆದು ಬಂದ ಹಾದಿ

ಈ ಮೂಲಕ 5 ಸೆಟ್ ಪಂದ್ಯವನ್ನು ಕೇವಲ ಮೂರೇ ಸೆಟ್‌ನಲ್ಲಿ ಮುಗಿಸುವ ಮೂಲಕ ಜೊಕೊವಿಕ್ ತಮ್ಮ ಎಲ್ಲ ವಿಮರ್ಶಕರ ಹುಬ್ಬೇರುವಂತೆ ಮಾಡಿದರು. ಅಲ್ಲದೆ, 2023ರ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡರು. ಸದ್ಯ ಖ್ಯಾತ ಟೆನಿಸ್ ಆಟಗಾರರಾದ ಜೊಕೊವಿಕ್ ಮತ್ತು ರಾಫೆಲ್ ನಡಾಲ್ ತಲಾ 22 ಗ್ರಾಂಡ್‌ಸ್ಲ್ಯಾಮ್‌ಗಳಲ್ಲಿ ಸಮಬಲ ಸಾಧಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ಫ್ರೆಂಚ್ ಓಪನ್ ಆರಂಭವಾಗಲಿದ್ದು, ಇವರಿಬ್ಬರಲ್ಲಿ ಯಾರು 23ನೇ ಬಾರಿ ಕಿರೀಟ ಮುಡಿಗೇರಿಸಲಿದ್ದಾರೆ ಎಂಬುದೇ ಕುತೂಹಲ.

ಟೆನಿಸ್ ಅಂಗಳದ ವಿಶ್ವ ದಾಖಲೆ

ಟೆನಿಸ್ ಅಂಗಳದಲ್ಲಿ ಅತೀ ಹೆಚ್ಚು ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶ್ವ ದಾಖಲೆ ಸೆರೆನಾ ವಿಲಿಯಮ್ಸ್ ಹೆಸರಿನಲ್ಲಿದೆ. ಅಮೆರಿಕದ ಟೆನಿಸ್ ಆಟಗಾರ್ತಿ ಒಟ್ಟು 23 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇನ್ನು ಪುರುಷರ ವಿಭಾಗದಲ್ಲಿ ಇದೀಗ ನೋವಾಕ್ ಜೊಕೊವಿಕ್ ಹಾಗೂ ರಾಫೆಲ್ ನಡಾಲ್ 22 ಬಾರಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾಗಿರುವ ರೋಜರ್ ಫೆಡರರ್ 20 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇದೀಗ ಸೆರೆನಾ ವಿಲಿಯಮ್ಸ್ ಬರೆದಿರುವ ವಿಶ್ವ ದಾಖಲೆಯನ್ನು ಸರಿಗಟ್ಟಲು ಜೊಕೊವಿಕ್ ಹಾಗೂ ನಡಾಲ್‌ಗೆ ಉತ್ತಮ ಅವಕಾಶವಿದೆ. ಈ ದಾಖಲೆ ಫ್ರೆಂಚ್ ಓಪನ್ ಮೂಲಕ ಮೂಡಿ ಬರಲಿದೆಯಾ ಕಾದು ನೋಡಬೇಕಿದೆ.

ಮಹಿಳಾ ಸಿಂಗಲ್ಸ್‌ನಲ್ಲಿ ಮೊದಲ ಗ್ರಾಂಡ್‌ಸ್ಲ್ಯಾಮ್‌ಗೆ ಮುತ್ತಿಟ್ಟ ಸಬಲೆಂಕಾ

ಬೆಲರೂಸ್‌ನ ಅರಿನಾ ಸಬಲೆಂಕಾ ಮಹಿಳಾ ಸಿಂಗಲ್ಸ್‌ನಲ್ಲಿ ಕಜಕಿಸ್ತಾನದ ಎಲೆನಾ ರಿಬಾಕಿನಾ ವಿರುದ್ಧ ಗೆಲುವು ಸಾಧಿಸುವ ಮೂಲಕ ತಮ್ಮ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಬೆಲರೂಸ್‌ನ ಅರಿನಾ ಸಬಲೆಂಕಾ

ರೋಚಕವಾಗಿದ್ದ ಅಂತಿಮ ಹಣಾಹಣಿಯಲ್ಲಿ ರಿಬಾಕಿನಾ ವಿರುದ್ಧ ಸಬಲೆಂಕಾ 6-4, 6-3, 6-4 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ. ಸಬೆಲೆಂಕಾ ಗ್ರಾಂಡ್‌ಸ್ಲ್ಯಾಮ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವುದು ಇದೇ ಮೊದಲು. ಮೊದಲ ಪ್ರಯತ್ನದಲ್ಲೇ ಪ್ರಶಸ್ತಿಗೆ ಮುತ್ತಿಕ್ಕುವ ಮೂಲಕ ಮಹಿಳಾ ಸಿಂಗಲ್ಸ್‌ನಲ್ಲಿ ಹೊಸ ತಾರೆಯಾಗಿ ಅವರು ಹೊರಹೊಮ್ಮಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದ ಕಾರಣದಿಂದಾಗಿ ಆಸ್ಟ್ರೇಲಿಯಾ ಓಪನ್‌ನಲ್ಲಿ ರಷ್ಯಾ ಮತ್ತು ಬೆಲರೂಸ್ ಆಟಗಾರರಿಗೆ ಯಾವುದೇ ರಾಷ್ಟ್ರೀಯ ಮಾನ್ಯತೆ ನೀಡಿರಲಿಲ್ಲ. ಹೀಗಾಗಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ತಟಸ್ಥ ಆಟಗಾರ್ತಿ ಎಂಬ ವಿಶೇಷ ದಾಖಲೆಯೂ ಇದೀಗ ಅರಿನಾ ಸಬಲೆಂಕಾ ಪಾಲಾಗಿದೆ.

ಸಾನಿಯಾ ಮಿರ್ಜಾಗೆ ನಿರಾಸೆ

ಆಸ್ಟ್ರೇಲಿಯಾ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ, ರೋಹನ್ ಬೋಪಣ್ಣ ಜೋಡಿ ಸ್ಪರ್ಧಿಸಿತ್ತು. ಅಲ್ಲದೆ, ಅಜೇಯ ಓಟದ ಮೂಲಕ ಈ ಜೋಡಿ ಫೈನಲ್ ಪ್ರವೇಶಿಸಿತ್ತು. ಇಬ್ಬರೂ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿರುವ ಕಾರಣ ಈ ವರ್ಷ ಪ್ರಶಸ್ತಿ ಗ್ಯಾರಂಟಿ ಎಂದೇ ಭಾವಿಸಲಾಗಿತ್ತು.

ಆದರೆ, ಈ ಜೋಡಿ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿಯ ವಿರುದ್ಧ 7-6, 6-2 ಅಂತರದಲ್ಲಿ ಸೋಲೊಪ್ಪುವ ಮೂಲಕ ನಿರಾಸೆ ಅನುಭವಿಸಿದೆ.

ಮೊದಲ ಸೆಟ್‌ನಲ್ಲಿ ಸಾನಿಯಾ-ಬೋಪ್ಪಣ್ಣ ಜೋಡಿ ಪ್ರಬಲ ಪೈಪೋಟಿ ಒಡ್ಡಿತ್ತು. ಹೀಗಾಗಿ ಮೊದಲ ಸೆಟ್ 6-6 ಅಂತರದಲ್ಲಿ ಸಮಬಲವಾಗಿತ್ತು. ಆದರೆ, ಟೈಬ್ರೇಕರ್‌ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿ ಗೆಲುವು ಸಾಧಿಸಿತು. ಇನ್ನು ಎರಡನೇ ಸೆಟ್‌ನಲ್ಲಿ ಸಾನಿಯಾ-ಬೋಪಣ್ಣ ಜೋಡಿ ಗೆಲ್ಲುವ ಉತ್ಸಾಹವನ್ನೂ ತೋರಿಸದೆ ನೀರಸ ಪ್ರದರ್ಶನ ನೀಡುವ ಮೂಲಕ ನಿರಾಸೆ ಅನುಭವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...