Homeಸಿನಿಮಾಕ್ರೀಡೆ22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

- Advertisement -
- Advertisement -

ಟೆನಿಸ್ ಲೋಕದಲ್ಲಿ ರೋಜರ್ ಫೆಡರರ್, ರಫೇಲ್ ನಡಾಲ್‌ನಷ್ಟೇ ಸಾಕಷ್ಟು ಜನಪ್ರಿಯತೆ ಮತ್ತು ಯಶಸ್ಸನ್ನು ಹೊಂದಿರುವ ಮತ್ತೋರ್ವ ದಿಗ್ಗಜ ಸರ್ಬಿಯಾದ ನೋವಾಕ್ ಜೊಕೊವಿಕ್. ಆದರೆ, ಇದೇ ಜೊಕೊವಿಕ್‌ರನ್ನು ಕೊರೊನಾ ಲಸಿಕೆ ಪಡೆದಿಲ್ಲ ಎಂಬ ಕಾರಣಕ್ಕೆ ಕಳೆದ ವರ್ಷ ಆಸ್ಟ್ರೇಲಿಯಾ ಓಪನ್ ಟೂರ್ನಿಯಿಂದಲೇ ಹೊರಗಿಡಲಾಗಿತ್ತು. ಬೇರೆ ಕೆಲವು ಕಾರಣಗಳಿಂದಲೂ, ಕಳೆದ ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಬಹುತೇಕ ಹೊರಗೇ ಉಳಿದಿದ್ದ ಜೊಕೊವಿಕ್ ಇದೀಗ ಆಸ್ಟ್ರೇಲಿಯಾ ಓಪನ್ 2023 ಪ್ರಶಸ್ತಿಗೆ ಮುತ್ತಿಡುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಇದರ ಜೊತೆಗೆ 22 ಗ್ರಾಂಡ್‌ಸ್ಲ್ಯಾಮ್‌ಗಳನ್ನು ಗೆಲ್ಲುವ ಮೂಲಕ ರಫೇಲ್ ನಡಾಲ್ ಸಾಧನೆಯನ್ನು ಸರಿಗಟ್ಟಿದ್ದಾರೆ.

ಕಳೆದ 10 ವರ್ಷಗಳಿಂದ ಟೆನಿಸ್ ಅಂಗಳದಲ್ಲಿ ನೋವಾಕ್ ಜೊಕೊವಿಕ್‌ಗೆ ಕಠಿಣ ಪ್ರತಿಸ್ಪರ್ಧೆ ಒಡ್ಡುತ್ತಿರುವ ಸ್ಟೆಫಾನೊಸ್ ಸಿಟ್ಸಿಪಾಸ್ ಈ ವರ್ಷ ತನ್ನ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಡಲಿದ್ದಾರೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಅಲ್ಲದೆ, ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಅಂತರ ಕಾಯ್ದುಕೊಂಡಿದ್ದ ಜೊಕೊವಿಕ್ ಮತ್ತೆ ಫಾರ್ಮ್‌ಗೆ ಬಂದು ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾಗಿತ್ತು. ಆದರೆ, ಕಳೆದ ಭಾನುವಾರ ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಎಲ್ಲ ವಿಮರ್ಶಕರಿಗೆ ಉತ್ತರ ನೀಡಿದ್ದಾರೆ.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಂತಿಮ ಹಣಾಹಣಿಯಲ್ಲಿ ಸ್ಟೆಫಾನೊಸ್ ಸಿಟ್ಸಿಪಾಸ್ ಅವರನ್ನು ಜೊಕೊವಿಕ್ 6-3, 7-6 (4), 7-6 (5) ಸೆಟ್‌ಗಳಿಂದ ಸೋಲಿಸಿದರು. ಇದರೊಂದಿಗೆ 10ನೇ ಬಾರಿ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. 22ನೇ ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶೇಷ ದಾಖಲೆಯನ್ನೂ ನಿರ್ಮಿಸಿದ್ದಾರೆ.

ಮೂರೇ ಸೆಟ್‌ನಲ್ಲಿ ಪಂದ್ಯ ಮುಗಿಸಿದ ಜೊಕೊವಿಕ್

ಫೈನಲ್ ಪಂದ್ಯದ ಮೊದಲ ಸೆಟ್‌ಅನ್ನು 6-3 ಅಂತರದಿಂದ ಸುಲಭವಾಗಿ ಗೆದ್ದ ನೋವಾಕ್‌ಗೆ 2ನೇ ಸುತ್ತಿನಲ್ಲಿ ಕಠಿಣ ಪೈಪೋಟಿ ಎದುರಾಯಿತು. ಅದರಲ್ಲೂ ರಿವರ್ಸ್ ಸರ್ವ್ ಮೂಲಕ ಸ್ಟೆಫಾನೊಸ್ ಸಿಟ್ಸಿಪಾಸ್ 2ನೇ ಸುತ್ತಿನಲ್ಲಿ ಹಿಡಿತ ಸಾಧಿಸಿದರು. ಪರಿಣಾಮ 7-6 ಅಂತರದಿಂದ ಕಷ್ಟ ಪಟ್ಟು ಜೊಕೊವಿಕ್ 2ನೇ ಸೆಟ್‌ಅನ್ನು ಗೆದ್ದುಕೊಂಡರು. ಇನ್ನು ಮೂರನೇ ಸೆಟ್‌ನಲ್ಲೂ ಇಬ್ಬರೂ ಪರಸ್ಪರ ಭರ್ಜರಿ ಪೈಪೋಟಿಯಿಂದ ಆಡಿದರು. ಆದರೆ ಮೂರನೇ ಸೆಟ್‌ನಲ್ಲಿ ತಮ್ಮ ಅನುಭವವನ್ನೆಲ್ಲಾ ಧಾರೆಯೆರೆದು ಆಡಿದ ನೋವಾಕ್ ಜೊಕೊವಿಕ್ ಸ್ಟೆಫಾನೋಸ್ ಸಿಟ್ಸಿಪಾಸ್ ಅವರನ್ನು 7-6 ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಹಿಳಾ ಕ್ರಿಕೆಟ್ ನಡೆದು ಬಂದ ಹಾದಿ

ಈ ಮೂಲಕ 5 ಸೆಟ್ ಪಂದ್ಯವನ್ನು ಕೇವಲ ಮೂರೇ ಸೆಟ್‌ನಲ್ಲಿ ಮುಗಿಸುವ ಮೂಲಕ ಜೊಕೊವಿಕ್ ತಮ್ಮ ಎಲ್ಲ ವಿಮರ್ಶಕರ ಹುಬ್ಬೇರುವಂತೆ ಮಾಡಿದರು. ಅಲ್ಲದೆ, 2023ರ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡರು. ಸದ್ಯ ಖ್ಯಾತ ಟೆನಿಸ್ ಆಟಗಾರರಾದ ಜೊಕೊವಿಕ್ ಮತ್ತು ರಾಫೆಲ್ ನಡಾಲ್ ತಲಾ 22 ಗ್ರಾಂಡ್‌ಸ್ಲ್ಯಾಮ್‌ಗಳಲ್ಲಿ ಸಮಬಲ ಸಾಧಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ಫ್ರೆಂಚ್ ಓಪನ್ ಆರಂಭವಾಗಲಿದ್ದು, ಇವರಿಬ್ಬರಲ್ಲಿ ಯಾರು 23ನೇ ಬಾರಿ ಕಿರೀಟ ಮುಡಿಗೇರಿಸಲಿದ್ದಾರೆ ಎಂಬುದೇ ಕುತೂಹಲ.

ಟೆನಿಸ್ ಅಂಗಳದ ವಿಶ್ವ ದಾಖಲೆ

ಟೆನಿಸ್ ಅಂಗಳದಲ್ಲಿ ಅತೀ ಹೆಚ್ಚು ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶ್ವ ದಾಖಲೆ ಸೆರೆನಾ ವಿಲಿಯಮ್ಸ್ ಹೆಸರಿನಲ್ಲಿದೆ. ಅಮೆರಿಕದ ಟೆನಿಸ್ ಆಟಗಾರ್ತಿ ಒಟ್ಟು 23 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇನ್ನು ಪುರುಷರ ವಿಭಾಗದಲ್ಲಿ ಇದೀಗ ನೋವಾಕ್ ಜೊಕೊವಿಕ್ ಹಾಗೂ ರಾಫೆಲ್ ನಡಾಲ್ 22 ಬಾರಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾಗಿರುವ ರೋಜರ್ ಫೆಡರರ್ 20 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇದೀಗ ಸೆರೆನಾ ವಿಲಿಯಮ್ಸ್ ಬರೆದಿರುವ ವಿಶ್ವ ದಾಖಲೆಯನ್ನು ಸರಿಗಟ್ಟಲು ಜೊಕೊವಿಕ್ ಹಾಗೂ ನಡಾಲ್‌ಗೆ ಉತ್ತಮ ಅವಕಾಶವಿದೆ. ಈ ದಾಖಲೆ ಫ್ರೆಂಚ್ ಓಪನ್ ಮೂಲಕ ಮೂಡಿ ಬರಲಿದೆಯಾ ಕಾದು ನೋಡಬೇಕಿದೆ.

ಮಹಿಳಾ ಸಿಂಗಲ್ಸ್‌ನಲ್ಲಿ ಮೊದಲ ಗ್ರಾಂಡ್‌ಸ್ಲ್ಯಾಮ್‌ಗೆ ಮುತ್ತಿಟ್ಟ ಸಬಲೆಂಕಾ

ಬೆಲರೂಸ್‌ನ ಅರಿನಾ ಸಬಲೆಂಕಾ ಮಹಿಳಾ ಸಿಂಗಲ್ಸ್‌ನಲ್ಲಿ ಕಜಕಿಸ್ತಾನದ ಎಲೆನಾ ರಿಬಾಕಿನಾ ವಿರುದ್ಧ ಗೆಲುವು ಸಾಧಿಸುವ ಮೂಲಕ ತಮ್ಮ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಬೆಲರೂಸ್‌ನ ಅರಿನಾ ಸಬಲೆಂಕಾ

ರೋಚಕವಾಗಿದ್ದ ಅಂತಿಮ ಹಣಾಹಣಿಯಲ್ಲಿ ರಿಬಾಕಿನಾ ವಿರುದ್ಧ ಸಬಲೆಂಕಾ 6-4, 6-3, 6-4 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ. ಸಬೆಲೆಂಕಾ ಗ್ರಾಂಡ್‌ಸ್ಲ್ಯಾಮ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವುದು ಇದೇ ಮೊದಲು. ಮೊದಲ ಪ್ರಯತ್ನದಲ್ಲೇ ಪ್ರಶಸ್ತಿಗೆ ಮುತ್ತಿಕ್ಕುವ ಮೂಲಕ ಮಹಿಳಾ ಸಿಂಗಲ್ಸ್‌ನಲ್ಲಿ ಹೊಸ ತಾರೆಯಾಗಿ ಅವರು ಹೊರಹೊಮ್ಮಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದ ಕಾರಣದಿಂದಾಗಿ ಆಸ್ಟ್ರೇಲಿಯಾ ಓಪನ್‌ನಲ್ಲಿ ರಷ್ಯಾ ಮತ್ತು ಬೆಲರೂಸ್ ಆಟಗಾರರಿಗೆ ಯಾವುದೇ ರಾಷ್ಟ್ರೀಯ ಮಾನ್ಯತೆ ನೀಡಿರಲಿಲ್ಲ. ಹೀಗಾಗಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ತಟಸ್ಥ ಆಟಗಾರ್ತಿ ಎಂಬ ವಿಶೇಷ ದಾಖಲೆಯೂ ಇದೀಗ ಅರಿನಾ ಸಬಲೆಂಕಾ ಪಾಲಾಗಿದೆ.

ಸಾನಿಯಾ ಮಿರ್ಜಾಗೆ ನಿರಾಸೆ

ಆಸ್ಟ್ರೇಲಿಯಾ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ, ರೋಹನ್ ಬೋಪಣ್ಣ ಜೋಡಿ ಸ್ಪರ್ಧಿಸಿತ್ತು. ಅಲ್ಲದೆ, ಅಜೇಯ ಓಟದ ಮೂಲಕ ಈ ಜೋಡಿ ಫೈನಲ್ ಪ್ರವೇಶಿಸಿತ್ತು. ಇಬ್ಬರೂ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿರುವ ಕಾರಣ ಈ ವರ್ಷ ಪ್ರಶಸ್ತಿ ಗ್ಯಾರಂಟಿ ಎಂದೇ ಭಾವಿಸಲಾಗಿತ್ತು.

ಆದರೆ, ಈ ಜೋಡಿ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿಯ ವಿರುದ್ಧ 7-6, 6-2 ಅಂತರದಲ್ಲಿ ಸೋಲೊಪ್ಪುವ ಮೂಲಕ ನಿರಾಸೆ ಅನುಭವಿಸಿದೆ.

ಮೊದಲ ಸೆಟ್‌ನಲ್ಲಿ ಸಾನಿಯಾ-ಬೋಪ್ಪಣ್ಣ ಜೋಡಿ ಪ್ರಬಲ ಪೈಪೋಟಿ ಒಡ್ಡಿತ್ತು. ಹೀಗಾಗಿ ಮೊದಲ ಸೆಟ್ 6-6 ಅಂತರದಲ್ಲಿ ಸಮಬಲವಾಗಿತ್ತು. ಆದರೆ, ಟೈಬ್ರೇಕರ್‌ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿ ಗೆಲುವು ಸಾಧಿಸಿತು. ಇನ್ನು ಎರಡನೇ ಸೆಟ್‌ನಲ್ಲಿ ಸಾನಿಯಾ-ಬೋಪಣ್ಣ ಜೋಡಿ ಗೆಲ್ಲುವ ಉತ್ಸಾಹವನ್ನೂ ತೋರಿಸದೆ ನೀರಸ ಪ್ರದರ್ಶನ ನೀಡುವ ಮೂಲಕ ನಿರಾಸೆ ಅನುಭವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...