Homeಸಿನಿಮಾಕ್ರೀಡೆ22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

22 ಗ್ರಾಂಡ್‌ಸ್ಲ್ಯಾಮ್ ದಾಖಲೆ ಸರಿಗಟ್ಟಿದ ಜೊಕೊವಿಕ್

- Advertisement -
- Advertisement -

ಟೆನಿಸ್ ಲೋಕದಲ್ಲಿ ರೋಜರ್ ಫೆಡರರ್, ರಫೇಲ್ ನಡಾಲ್‌ನಷ್ಟೇ ಸಾಕಷ್ಟು ಜನಪ್ರಿಯತೆ ಮತ್ತು ಯಶಸ್ಸನ್ನು ಹೊಂದಿರುವ ಮತ್ತೋರ್ವ ದಿಗ್ಗಜ ಸರ್ಬಿಯಾದ ನೋವಾಕ್ ಜೊಕೊವಿಕ್. ಆದರೆ, ಇದೇ ಜೊಕೊವಿಕ್‌ರನ್ನು ಕೊರೊನಾ ಲಸಿಕೆ ಪಡೆದಿಲ್ಲ ಎಂಬ ಕಾರಣಕ್ಕೆ ಕಳೆದ ವರ್ಷ ಆಸ್ಟ್ರೇಲಿಯಾ ಓಪನ್ ಟೂರ್ನಿಯಿಂದಲೇ ಹೊರಗಿಡಲಾಗಿತ್ತು. ಬೇರೆ ಕೆಲವು ಕಾರಣಗಳಿಂದಲೂ, ಕಳೆದ ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಬಹುತೇಕ ಹೊರಗೇ ಉಳಿದಿದ್ದ ಜೊಕೊವಿಕ್ ಇದೀಗ ಆಸ್ಟ್ರೇಲಿಯಾ ಓಪನ್ 2023 ಪ್ರಶಸ್ತಿಗೆ ಮುತ್ತಿಡುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಇದರ ಜೊತೆಗೆ 22 ಗ್ರಾಂಡ್‌ಸ್ಲ್ಯಾಮ್‌ಗಳನ್ನು ಗೆಲ್ಲುವ ಮೂಲಕ ರಫೇಲ್ ನಡಾಲ್ ಸಾಧನೆಯನ್ನು ಸರಿಗಟ್ಟಿದ್ದಾರೆ.

ಕಳೆದ 10 ವರ್ಷಗಳಿಂದ ಟೆನಿಸ್ ಅಂಗಳದಲ್ಲಿ ನೋವಾಕ್ ಜೊಕೊವಿಕ್‌ಗೆ ಕಠಿಣ ಪ್ರತಿಸ್ಪರ್ಧೆ ಒಡ್ಡುತ್ತಿರುವ ಸ್ಟೆಫಾನೊಸ್ ಸಿಟ್ಸಿಪಾಸ್ ಈ ವರ್ಷ ತನ್ನ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಡಲಿದ್ದಾರೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಅಲ್ಲದೆ, ಒಂದು ವರ್ಷದಿಂದ ಟೆನಿಸ್ ಅಂಗಳದಿಂದ ಅಂತರ ಕಾಯ್ದುಕೊಂಡಿದ್ದ ಜೊಕೊವಿಕ್ ಮತ್ತೆ ಫಾರ್ಮ್‌ಗೆ ಬಂದು ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾಗಿತ್ತು. ಆದರೆ, ಕಳೆದ ಭಾನುವಾರ ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಎಲ್ಲ ವಿಮರ್ಶಕರಿಗೆ ಉತ್ತರ ನೀಡಿದ್ದಾರೆ.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಂತಿಮ ಹಣಾಹಣಿಯಲ್ಲಿ ಸ್ಟೆಫಾನೊಸ್ ಸಿಟ್ಸಿಪಾಸ್ ಅವರನ್ನು ಜೊಕೊವಿಕ್ 6-3, 7-6 (4), 7-6 (5) ಸೆಟ್‌ಗಳಿಂದ ಸೋಲಿಸಿದರು. ಇದರೊಂದಿಗೆ 10ನೇ ಬಾರಿ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. 22ನೇ ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶೇಷ ದಾಖಲೆಯನ್ನೂ ನಿರ್ಮಿಸಿದ್ದಾರೆ.

ಮೂರೇ ಸೆಟ್‌ನಲ್ಲಿ ಪಂದ್ಯ ಮುಗಿಸಿದ ಜೊಕೊವಿಕ್

ಫೈನಲ್ ಪಂದ್ಯದ ಮೊದಲ ಸೆಟ್‌ಅನ್ನು 6-3 ಅಂತರದಿಂದ ಸುಲಭವಾಗಿ ಗೆದ್ದ ನೋವಾಕ್‌ಗೆ 2ನೇ ಸುತ್ತಿನಲ್ಲಿ ಕಠಿಣ ಪೈಪೋಟಿ ಎದುರಾಯಿತು. ಅದರಲ್ಲೂ ರಿವರ್ಸ್ ಸರ್ವ್ ಮೂಲಕ ಸ್ಟೆಫಾನೊಸ್ ಸಿಟ್ಸಿಪಾಸ್ 2ನೇ ಸುತ್ತಿನಲ್ಲಿ ಹಿಡಿತ ಸಾಧಿಸಿದರು. ಪರಿಣಾಮ 7-6 ಅಂತರದಿಂದ ಕಷ್ಟ ಪಟ್ಟು ಜೊಕೊವಿಕ್ 2ನೇ ಸೆಟ್‌ಅನ್ನು ಗೆದ್ದುಕೊಂಡರು. ಇನ್ನು ಮೂರನೇ ಸೆಟ್‌ನಲ್ಲೂ ಇಬ್ಬರೂ ಪರಸ್ಪರ ಭರ್ಜರಿ ಪೈಪೋಟಿಯಿಂದ ಆಡಿದರು. ಆದರೆ ಮೂರನೇ ಸೆಟ್‌ನಲ್ಲಿ ತಮ್ಮ ಅನುಭವವನ್ನೆಲ್ಲಾ ಧಾರೆಯೆರೆದು ಆಡಿದ ನೋವಾಕ್ ಜೊಕೊವಿಕ್ ಸ್ಟೆಫಾನೋಸ್ ಸಿಟ್ಸಿಪಾಸ್ ಅವರನ್ನು 7-6 ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಹಿಳಾ ಕ್ರಿಕೆಟ್ ನಡೆದು ಬಂದ ಹಾದಿ

ಈ ಮೂಲಕ 5 ಸೆಟ್ ಪಂದ್ಯವನ್ನು ಕೇವಲ ಮೂರೇ ಸೆಟ್‌ನಲ್ಲಿ ಮುಗಿಸುವ ಮೂಲಕ ಜೊಕೊವಿಕ್ ತಮ್ಮ ಎಲ್ಲ ವಿಮರ್ಶಕರ ಹುಬ್ಬೇರುವಂತೆ ಮಾಡಿದರು. ಅಲ್ಲದೆ, 2023ರ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತಮ್ಮದಾಗಿಸಿಕೊಂಡರು. ಸದ್ಯ ಖ್ಯಾತ ಟೆನಿಸ್ ಆಟಗಾರರಾದ ಜೊಕೊವಿಕ್ ಮತ್ತು ರಾಫೆಲ್ ನಡಾಲ್ ತಲಾ 22 ಗ್ರಾಂಡ್‌ಸ್ಲ್ಯಾಮ್‌ಗಳಲ್ಲಿ ಸಮಬಲ ಸಾಧಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ಫ್ರೆಂಚ್ ಓಪನ್ ಆರಂಭವಾಗಲಿದ್ದು, ಇವರಿಬ್ಬರಲ್ಲಿ ಯಾರು 23ನೇ ಬಾರಿ ಕಿರೀಟ ಮುಡಿಗೇರಿಸಲಿದ್ದಾರೆ ಎಂಬುದೇ ಕುತೂಹಲ.

ಟೆನಿಸ್ ಅಂಗಳದ ವಿಶ್ವ ದಾಖಲೆ

ಟೆನಿಸ್ ಅಂಗಳದಲ್ಲಿ ಅತೀ ಹೆಚ್ಚು ಗ್ರಾಂಡ್‌ಸ್ಲ್ಯಾಮ್ ಗೆದ್ದ ವಿಶ್ವ ದಾಖಲೆ ಸೆರೆನಾ ವಿಲಿಯಮ್ಸ್ ಹೆಸರಿನಲ್ಲಿದೆ. ಅಮೆರಿಕದ ಟೆನಿಸ್ ಆಟಗಾರ್ತಿ ಒಟ್ಟು 23 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇನ್ನು ಪುರುಷರ ವಿಭಾಗದಲ್ಲಿ ಇದೀಗ ನೋವಾಕ್ ಜೊಕೊವಿಕ್ ಹಾಗೂ ರಾಫೆಲ್ ನಡಾಲ್ 22 ಬಾರಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾಗಿರುವ ರೋಜರ್ ಫೆಡರರ್ 20 ಬಾರಿ ಗ್ರಾಂಡ್‌ಸ್ಲ್ಯಾಮ್ ಟ್ರೋಫಿಗೆ ಮುತ್ತಿಕ್ಕಿದ್ದರು. ಇದೀಗ ಸೆರೆನಾ ವಿಲಿಯಮ್ಸ್ ಬರೆದಿರುವ ವಿಶ್ವ ದಾಖಲೆಯನ್ನು ಸರಿಗಟ್ಟಲು ಜೊಕೊವಿಕ್ ಹಾಗೂ ನಡಾಲ್‌ಗೆ ಉತ್ತಮ ಅವಕಾಶವಿದೆ. ಈ ದಾಖಲೆ ಫ್ರೆಂಚ್ ಓಪನ್ ಮೂಲಕ ಮೂಡಿ ಬರಲಿದೆಯಾ ಕಾದು ನೋಡಬೇಕಿದೆ.

ಮಹಿಳಾ ಸಿಂಗಲ್ಸ್‌ನಲ್ಲಿ ಮೊದಲ ಗ್ರಾಂಡ್‌ಸ್ಲ್ಯಾಮ್‌ಗೆ ಮುತ್ತಿಟ್ಟ ಸಬಲೆಂಕಾ

ಬೆಲರೂಸ್‌ನ ಅರಿನಾ ಸಬಲೆಂಕಾ ಮಹಿಳಾ ಸಿಂಗಲ್ಸ್‌ನಲ್ಲಿ ಕಜಕಿಸ್ತಾನದ ಎಲೆನಾ ರಿಬಾಕಿನಾ ವಿರುದ್ಧ ಗೆಲುವು ಸಾಧಿಸುವ ಮೂಲಕ ತಮ್ಮ ಮೊದಲ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಬೆಲರೂಸ್‌ನ ಅರಿನಾ ಸಬಲೆಂಕಾ

ರೋಚಕವಾಗಿದ್ದ ಅಂತಿಮ ಹಣಾಹಣಿಯಲ್ಲಿ ರಿಬಾಕಿನಾ ವಿರುದ್ಧ ಸಬಲೆಂಕಾ 6-4, 6-3, 6-4 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ. ಸಬೆಲೆಂಕಾ ಗ್ರಾಂಡ್‌ಸ್ಲ್ಯಾಮ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವುದು ಇದೇ ಮೊದಲು. ಮೊದಲ ಪ್ರಯತ್ನದಲ್ಲೇ ಪ್ರಶಸ್ತಿಗೆ ಮುತ್ತಿಕ್ಕುವ ಮೂಲಕ ಮಹಿಳಾ ಸಿಂಗಲ್ಸ್‌ನಲ್ಲಿ ಹೊಸ ತಾರೆಯಾಗಿ ಅವರು ಹೊರಹೊಮ್ಮಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದ ಕಾರಣದಿಂದಾಗಿ ಆಸ್ಟ್ರೇಲಿಯಾ ಓಪನ್‌ನಲ್ಲಿ ರಷ್ಯಾ ಮತ್ತು ಬೆಲರೂಸ್ ಆಟಗಾರರಿಗೆ ಯಾವುದೇ ರಾಷ್ಟ್ರೀಯ ಮಾನ್ಯತೆ ನೀಡಿರಲಿಲ್ಲ. ಹೀಗಾಗಿ ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ತಟಸ್ಥ ಆಟಗಾರ್ತಿ ಎಂಬ ವಿಶೇಷ ದಾಖಲೆಯೂ ಇದೀಗ ಅರಿನಾ ಸಬಲೆಂಕಾ ಪಾಲಾಗಿದೆ.

ಸಾನಿಯಾ ಮಿರ್ಜಾಗೆ ನಿರಾಸೆ

ಆಸ್ಟ್ರೇಲಿಯಾ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ, ರೋಹನ್ ಬೋಪಣ್ಣ ಜೋಡಿ ಸ್ಪರ್ಧಿಸಿತ್ತು. ಅಲ್ಲದೆ, ಅಜೇಯ ಓಟದ ಮೂಲಕ ಈ ಜೋಡಿ ಫೈನಲ್ ಪ್ರವೇಶಿಸಿತ್ತು. ಇಬ್ಬರೂ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಫಾರ್ಮ್‌ನಲ್ಲಿರುವ ಕಾರಣ ಈ ವರ್ಷ ಪ್ರಶಸ್ತಿ ಗ್ಯಾರಂಟಿ ಎಂದೇ ಭಾವಿಸಲಾಗಿತ್ತು.

ಆದರೆ, ಈ ಜೋಡಿ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿಯ ವಿರುದ್ಧ 7-6, 6-2 ಅಂತರದಲ್ಲಿ ಸೋಲೊಪ್ಪುವ ಮೂಲಕ ನಿರಾಸೆ ಅನುಭವಿಸಿದೆ.

ಮೊದಲ ಸೆಟ್‌ನಲ್ಲಿ ಸಾನಿಯಾ-ಬೋಪ್ಪಣ್ಣ ಜೋಡಿ ಪ್ರಬಲ ಪೈಪೋಟಿ ಒಡ್ಡಿತ್ತು. ಹೀಗಾಗಿ ಮೊದಲ ಸೆಟ್ 6-6 ಅಂತರದಲ್ಲಿ ಸಮಬಲವಾಗಿತ್ತು. ಆದರೆ, ಟೈಬ್ರೇಕರ್‌ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಲೂಯೀನಾ ಸ್ಟೆಫಾನಿ, ರಪೇಲ್ ಮಾಟೋಸ್ ಜೋಡಿ ಗೆಲುವು ಸಾಧಿಸಿತು. ಇನ್ನು ಎರಡನೇ ಸೆಟ್‌ನಲ್ಲಿ ಸಾನಿಯಾ-ಬೋಪಣ್ಣ ಜೋಡಿ ಗೆಲ್ಲುವ ಉತ್ಸಾಹವನ್ನೂ ತೋರಿಸದೆ ನೀರಸ ಪ್ರದರ್ಶನ ನೀಡುವ ಮೂಲಕ ನಿರಾಸೆ ಅನುಭವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...