Homeಕರ್ನಾಟಕದಕ್ಷಿಣ ಕನ್ನಡ: ಬಿಲ್ಲವರಿಗೆ ದೈವಸ್ಥಾನ ಪ್ರವೇಶ ನಿರಾಕರಣೆ

ದಕ್ಷಿಣ ಕನ್ನಡ: ಬಿಲ್ಲವರಿಗೆ ದೈವಸ್ಥಾನ ಪ್ರವೇಶ ನಿರಾಕರಣೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲಮೂಡ್ನೂರು ಗ್ರಾಮದ ದೈವಸ್ಥಾನವೊಂದಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ಬಿಲ್ಲವ ಸಮುದಾಯದ ಯುವಕರನ್ನು ಹೊರಗೆ ಕಳುಹಿಸಿದ ಘಟನೆಯೊಂದು ಕಳೆದ ಶುಕ್ರವಾರ ನಡೆದಿದೆ ಎಂದು ಆರೋಪಿಸಲಾಗಿದೆ ಎಂದು ವಾರ್ತಾಭಾರತಿ ಪತ್ರಿಕೆ ಶನಿವಾರ ವರದಿ ಮಾಡಿದೆ. ದೈವಸ್ಥಾನವು ಹೊಸತಾಗಿ ನಿರ್ಮಾಣಗೊಂಡಿತ್ತು ಎಂದು ಪತ್ರಿಕೆ ಹೇಳಿದೆ.

ಬಿಲ್ಲವ ಸಮುದಾಯದ ಇಬ್ಬರು ಯುವಕರು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರ ಜತೆ ದೈವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ವ್ಯಕ್ತಿ ಅಧ್ಯಕ್ಷರಲ್ಲಿ ದೈವಸ್ಥಾನದ ಒಳಾಂಗಣಕ್ಕೆ ಬಿಲ್ಲವರು ಬರುವಂತಿಲ್ಲ ಎಂದಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ದೈವಸ್ಥಾನದ ಉಸ್ತುವಾರಿಯ ಮಾತಿನಂತೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯುವಕರನ್ನು ಹೊರ ಹೋಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಬಿಲ್ಲವ ಯುವಕರು ಈ ವಿಚಾರವನ್ನು ಸಮುದಾಯದ ಮುಖಂಡರ ಬಳಿ ದೂರಿದ್ದು, ಜೊತೆಗೆ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದರು ಎಂದು ವರದಿಯಾಗಿದೆ. ಈ ಮಧ್ಯೆ ಯುವಕರನ್ನು ದೈವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದ ಅಧ್ಯಕ್ಷರಲ್ಲಿ ವಿಚಾರಿಸಿದಾಗ ಹಾರಿಕೆಯ ಉತ್ತರ ನೀಡಿದ್ದರೆನ್ನಲಾಗಿದೆ ಎಂದು ವಾರ್ತಾಭಾರತಿ ವರದಿ ತಿಳಿಸಿದೆ.

ಸಮುದಾಯದ ಯುವಕರನ್ನು ಅವಮಾನಿಸಿದ ಬಗ್ಗೆ ವಾಟ್ಸ್‌ಆ್ಯಪ್ ಗ್ರೂಪುಗಳಲ್ಲೂ ಚರ್ಚೆ ನಡೆದಿದ್ದು, ಶನಿವಾರ ಸಂಜೆ ಕುಂಡಡ್ಕ, ವಿಟ್ಲ ವ್ಯಾಪ್ತಿಯ ಬಿಲ್ಲವ ಸಂಘಟನೆಗಳು, ವಿಟ್ಲ ಯುವವಾಹಿನಿ ಸದಸ್ಯರು ಖಂಡನಾ ಸಭೆ ನಡೆಸಿದ್ದವು ಎಂದು ವರದಿ ತಿಳಿಸಿದೆ.

ಇದರ ನಂತರ ಘಟನೆಯ ಬಗ್ಗೆ ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯ ಜೊತೆಗೆ ಸಮುದಾಯದ ಮುಖಂಡರು ಮಾತನಾಡಿದ್ದು, ಅದಕ್ಕೆ ಅವರು, “ಇದು ಕ್ಷೇತ್ರದಲ್ಲಿ ನಡೆದುಕೊಂಡು ಬರುತ್ತಿದ್ದ ಕ್ರಮ. ಆದರೆ ಹೊರಗಿನಿಂದ ಬರುವವರನ್ನು ಹೋಗಿ ಎಂದು ಹೇಳಿಲ್ಲ. ಒಂದು ವೇಳೆ ಈ ಘಟನೆಯಿಂದ ನೋವಾಗಿದ್ದರೆ ಕ್ಷಮೆಯಿರಲಿ” ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ದೈವಸ್ಥಾನಕ್ಕೆ ಬಿಲ್ಲವರು ಪ್ರವೇಶಿಸುವುದಕ್ಕೆ ಮುಂದಿನ ದಿನಗಳಲ್ಲಿ ನಿರ್ಬಂಧ ಹೇರಿದರೆ ಪ್ರತಿಭಟನೆ, ಹೋರಾಟ ನಡೆಸಲಾಗುವುದು ಎಂಬ ತೀರ್ಮಾನವನ್ನು ಬಿಲ್ಲವ ಸಮುದಾಯದ ಸಭೆಯಲ್ಲಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...