Homeಮುಖಪುಟದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು...?

ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ....?

- Advertisement -
- Advertisement -

ಅವರು ವ್ಯವಸ್ಥೆಯ ಕೈ‌ಗೊಂಬೆ ಎಂದು ನಾನೇ ಟೀಕಿಸಿದ್ದೆ. ಕೆಲವೊಮ್ಮೆ ಸಂಸದ ನಳಿನ್ ಮತ್ತು ಶಾಸಕ ವೇದವ್ಯಾಸ ಕಾಮತರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದೆಣಿಸಿದ್ದೂ ತಪ್ಪಲ್ಲ. ಬ್ಯೂರೋಕ್ರಾಟ್ಸ್ ಯಾವತ್ತೂ ಸರ್ವ ಸ್ವತಂತ್ರವಾಗಿರುವುದು ಭಾರತದಂತಹ ದೇಶದಲ್ಲಿ ಸಾಧ್ಯವಿಲ್ಲ. ಇಲ್ಲಿರುವುದು ಬನಾನಾ ರಿಪಬ್ಲಿಕ್.

ಪ್ರಭುತ್ವದ ವಿರುದ್ಧ ಅಧಿಕಾರಿಯೊಬ್ಬ ಮಾತನಾಡುವುದನ್ನು ಬಿಜೆಪಿಯವರೆಂದಲ್ಲ, ಯಾರೂ ಸಹಿಸಿರಲಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳುವ ಗೂಂಡಾಪಡೆಗಳ ವಿರುದ್ಧ ಕಾನೂನಾತ್ಮಕವಾಗಿ ಒಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರನ್ನು ಪನಿಶ್ಮೆಂಟ್ ಟ್ರಾನ್ಸ್‌ಫರ್ ಮಾಡಲಾಗಿದೆ. ಬಹಿರಂಗವಾಗಿ ಪ್ರಭುತ್ವ ಹಾಗಂದಿಲ್ಲವಾದರೂ ಅವರನ್ನು ವರ್ಗಾಯಿಸಲಾದ-ಹುದ್ದೆ ಅದನ್ನು ಶ್ರುತಪಡಿಸುತ್ತದೆ.

ಸಿಂಧೂ ಅವರ ವರ್ಗಾವಣೆ ಕಾನೂನು ಭಂಜಕ ಶಕ್ತಿಗಳ ಕೃತ್ಯಕ್ಕೆ ಬಲ ನೀಡುವಂತಿದೆ. ತನ್ಮೂಲಕ ನೀವು ನಿಮ್ಮ ಕೆಲಸವನ್ನು ಸುಸೂತ್ರವಾಗಿ ಮಾಡುತ್ತಿರಿ, ನಿಮಗಾಗಿ ನಾವು ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡುತ್ತೇವೆ ಎಂಬ ಅಭಯದ ಸಂದೇಶವನ್ನು ಪ್ರಭುತ್ವ ಕಾನೂನು ಭಂಜಕರಿಗೆ ನೀಡಿದೆ. ಇದು ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಹಾಡಹಗಲೆ ಕಗ್ಗೊಲೆಯಾಗುತ್ತಿದೆ ಎಂಬುವುದಕ್ಕೆ ಒಂದು ಪುಟ್ಟ ನಿದರ್ಶನವಷ್ಟೆ.

ಪ್ರಭುತ್ವದ ಕಾನೂನುಭಂಜಕ ಕೆಲಸಗಳಿಗೆ ಸಾಥ್ ನೀಡದ್ದಕ್ಕಾಗಿ “ಕೇರಳ ಮೂಲದ ಗುಜರಾತಿನ ಉನ್ನತ ಪೋಲೀಸ್ ಅಧಿಕಾರಿ ಶ್ರೀಕುಮಾರನ್‌ರನ್ನು ಯಾವ ರೀತಿ ಸತಾಯಿಸಲಾಯಿತು…ಜಸ್ಟಿಸ್ ಲೋಯಾರನ್ನು ಹೇಗೆ ಮುಗಿಸಲಾಯಿತು… ಇಂತಹ ಒಂದಲ್ಲ, ಎರಡಲ್ಲ ನೂರಾರು ಉದಾಹರಣೆಗಳನ್ನು ನಾವು ಬಿಜೆಪಿಯ ಅಂದಾ ದರ್ಬಾರಿನಲ್ಲಿ ಕಂಡಿದ್ದೇವೆ.

ಸಿಂಧೂ ಅವರು ಬಹಳ ದಕ್ಷ ಅಧಿಕಾರಿಯೆಂದು ಇಲ್ಲದ ವಿಶೇಷಣಗಳನ್ನು ಅವರಿಗೆ ನೀಡಲಾರೆ. ಕೊರೋನಾ ಆರಂಭ ಕಾಲದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಮಂಗಳೂರಿಗೆ ಬಂದಿಳಿದ ಮಂಗಳೂರು ಮುಸ್ಲಿಮರಿಗೆ ನೀಡಲಾದ ಮಾನಸಿಕ ಹಿಂಸೆ ಇನ್ನೂ ನಮ್ಮ ಮನಸಿಂದ ಮಾಸಿಲ್ಲ. ಅದಾಗ್ಯೂ ಆ ಬಳಿಕ ಅವರು ಕೋವಿಡ್ ವಿಷಮಕಾಲದಲ್ಲಿ ನಡೆದುಕೊಂಡ ಬಗೆ, ತೆಗೆದುಕೊಂಡ ಕ್ರಮ ಇತ್ಯಾದಿಗಳನ್ನು ಸ್ವಲ್ಪವಾದರೂ ಮೆಚ್ಚದಿರಲಾಗದು. ವ್ಯವಸ್ಥೆಯ ಉಪಟಳದ ಮಧ್ಯೆಯೂ ತನ್ನ ಮಿತಿಯಲ್ಲಿ ಜನಪರವಾಗಿಯೇ ಸಿಂಧೂ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಸಿಂಧೂ ಹೇಳಿದ ಕಹಿ ಸತ್ಯವೊಂದು ವ್ಯವಸ್ಥೆಯ ಕಣ್ಣು ಕೆಂಪಾಗಿಸಿದೆ ಕೂಡಾ. “ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಅಸಲಿ ಸಂಖ್ಯೆ ಕೇವಲ ನಾಲ್ಕು, ಉಳಿದ ಮೂವತ್ತಾರು ಸಾವುಗಳು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದ್ದು” ಎಂದು ಅವರು ಹೇಳಿದ್ದು, ಕೊರೋನಾ ಕಾಲದ ಇತರ ಸಾವಿಗೆಲ್ಲಾ ಕೊರೋನಾ ಲೇಬಲ್ ಹಚ್ಚಲಾಗುತ್ತಿದೆ ಎನ್ನುವ ಪರೋಕ್ಷ ಸಂದೇಶ ನೀಡುವಂತಿತ್ತು. ಇದರಿಂದ ಬೆತ್ತಲಾದವರು ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆ ಮಾಫಿಯಾ.

ಪ್ರಭುತ್ವ ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಹೇಗೆ ಕೈ ಜೋಡಿಸಿದೆ ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ. ಜಿಲ್ಲೆಯ ಕೆಲ  ದರೋಡೆಕೋರ ಖಾಸಗಿ‌‌ ಆಸ್ಪತ್ರೆಗಳಿಗೆ ಕೊರೋನಾ ಬಂದಾಗಿನಿಂದ ಸುಗ್ಗಿ ಕಾಲ. ಹೇಗೆಂದರೆ ಕೊರೋನಾದಲ್ಲಿ ರೋಗಿ ಅತ್ಯಂತ ಕ್ರಿಟಿಕಲ್ ಆದಾಗ ಮಾತ್ರ ಹೆಚ್ಚಿನ ಕೇರ್ ಮತ್ತು ಔಷಧಿಗಳ ಅಗತ್ಯ ಬೀಳುತ್ತದೆ. 98% ಕೋವಿಡ್ ಪಾಸಿಟಿವ್ ರೋಗಿಗಳನ್ನು ಸುಖಾಸುಮ್ಮನೆ ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಬಂಧಿಸಿಟ್ಟು ಒಟ್ಟು ಅಡ್ಮಿಟೆಡ್ ಅವಧಿಯಲ್ಲಿ ಎರಡು ಪ್ಯಾರಾಸಿಟಮೋಲ್, ನಾಲ್ಕು ಝಿಂಕ್, ನಾಲ್ಕು ಕ್ಯಾಲ್ಸಿಯಂ ಗುಳಿಗೆಗಳನ್ನು ನುಂಗಿಸಿ ಐವತ್ತರಿಂದ-ಅರುವತ್ತು ಸಾವಿರ ಬಿಲ್‌‌‌ ಸುಲಿಯಲಾಗಿದೆ.

ಯಾವಾಗ ಸಿಂಧೂ ಅಸಲಿ ಕೊರೋನಾದಿಂದ ಸಂಭವಿಸಿದ ಸಾವು ಕೇವಲ ನಾಲ್ಕು ಮಾತ್ರ ಎಂದಿದ್ದರೋ ಅಂದಿನಿಂದ ಜನ ಖಾಸಗಿ ಆಸ್ಪತ್ರೆಗಳ ವಿರುದ್ಧ ಹರಿಹಾಯತೊಡಗಿದರು. ಕೆಲ ಪತ್ರಿಕೆಗಳಲ್ಲಿ ಸಿಂಧೂ ಅವರ ಹೇಳಿಕೆಯನ್ನು ಪುಷ್ಟೀಕರಿಸುವಂತಹ ವರದಿಗಳು ಮತ್ತು ಜನಾಭಿಪ್ರಾಯಗಳೂ ಪ್ರಕಟವಾದವು.ಇದು ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಕೈ ಜೋಡಿಸಿದ ಆಳುವ ವರ್ಗಕ್ಕೆ ಚಪ್ಪಲಿಯಲ್ಲಿ ಹೊಡೆದಂತಾಗಿತ್ತು. ಇದಕ್ಕೆಲ್ಲಾ ಒಂದು ಕೊನೆಗಾಣಿಸಲೇಬೇಕಿತ್ತು.

ಇದೀಗ ಆಳುವ ವರ್ಗದ ಕೃಪಾಪೋಷಿತ ಗೂಂಡಾಗಳ ವಿರುದ್ಧ ನೀಡಿದ ಹೇಳಿಕೆಯ ಸಂದರ್ಭದಲ್ಲಿ ವರ್ಗಾವಣೆ ಮಾಡಿ ಪ್ರಭುತ್ವ ಒಂದೇ ಏಟಿಗೆ ಎರಡು ಹಣ್ಣು ಉದುರಿಸಿದೆ. ಒಂದೆಡೆ ಗೂಂಡಾಗಳನ್ನು ಸಂತೈಸಿದಂತೆಯೂ ಆಯಿತು, ಇನ್ನೊಂದೆಡೆ ಖಾಸಗಿ ಆಸ್ಪತ್ರೆ ಮಾಫಿಯಾ ಜೊತೆ ಕೈ ಜೋಡಿಸಿದ ವಿಚಾರದಲ್ಲಾದ ಮುಖಭಂಗಕ್ಕೆ ಪ್ರತೀಕಾರ ತೀರಿಸಿದಂತೆಯೂ ಆಯಿತು.

ಸಿಂಧೂ ಇಂತಹ ನಡೆಗಳನ್ನು ಪ್ರಜ್ಞಾಪೂರ್ವಕವಾಗಿ ಇಟ್ಟರೋ, ಅಲ್ಲವೋ ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಒಟ್ಟಿನಲ್ಲಿ ಅವರ ಇಂತಹ ನಡೆಗಳು ಪ್ರಭುತ್ವಕ್ಕೆ ಮುಜುಗರವುಂಟು ಮಾಡಿದ್ದಂತೂ ಸುಳ್ಳಲ್ಲ.

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ….?

ಇಸ್ಮತ್ ಪಜೀರ್‌, ಯುವ ಬರಹಗಾರರು.


ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...