Homeಮುಖಪುಟದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು...?

ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ....?

- Advertisement -
- Advertisement -

ಅವರು ವ್ಯವಸ್ಥೆಯ ಕೈ‌ಗೊಂಬೆ ಎಂದು ನಾನೇ ಟೀಕಿಸಿದ್ದೆ. ಕೆಲವೊಮ್ಮೆ ಸಂಸದ ನಳಿನ್ ಮತ್ತು ಶಾಸಕ ವೇದವ್ಯಾಸ ಕಾಮತರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದೆಣಿಸಿದ್ದೂ ತಪ್ಪಲ್ಲ. ಬ್ಯೂರೋಕ್ರಾಟ್ಸ್ ಯಾವತ್ತೂ ಸರ್ವ ಸ್ವತಂತ್ರವಾಗಿರುವುದು ಭಾರತದಂತಹ ದೇಶದಲ್ಲಿ ಸಾಧ್ಯವಿಲ್ಲ. ಇಲ್ಲಿರುವುದು ಬನಾನಾ ರಿಪಬ್ಲಿಕ್.

ಪ್ರಭುತ್ವದ ವಿರುದ್ಧ ಅಧಿಕಾರಿಯೊಬ್ಬ ಮಾತನಾಡುವುದನ್ನು ಬಿಜೆಪಿಯವರೆಂದಲ್ಲ, ಯಾರೂ ಸಹಿಸಿರಲಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳುವ ಗೂಂಡಾಪಡೆಗಳ ವಿರುದ್ಧ ಕಾನೂನಾತ್ಮಕವಾಗಿ ಒಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರನ್ನು ಪನಿಶ್ಮೆಂಟ್ ಟ್ರಾನ್ಸ್‌ಫರ್ ಮಾಡಲಾಗಿದೆ. ಬಹಿರಂಗವಾಗಿ ಪ್ರಭುತ್ವ ಹಾಗಂದಿಲ್ಲವಾದರೂ ಅವರನ್ನು ವರ್ಗಾಯಿಸಲಾದ-ಹುದ್ದೆ ಅದನ್ನು ಶ್ರುತಪಡಿಸುತ್ತದೆ.

ಸಿಂಧೂ ಅವರ ವರ್ಗಾವಣೆ ಕಾನೂನು ಭಂಜಕ ಶಕ್ತಿಗಳ ಕೃತ್ಯಕ್ಕೆ ಬಲ ನೀಡುವಂತಿದೆ. ತನ್ಮೂಲಕ ನೀವು ನಿಮ್ಮ ಕೆಲಸವನ್ನು ಸುಸೂತ್ರವಾಗಿ ಮಾಡುತ್ತಿರಿ, ನಿಮಗಾಗಿ ನಾವು ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡುತ್ತೇವೆ ಎಂಬ ಅಭಯದ ಸಂದೇಶವನ್ನು ಪ್ರಭುತ್ವ ಕಾನೂನು ಭಂಜಕರಿಗೆ ನೀಡಿದೆ. ಇದು ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಹಾಡಹಗಲೆ ಕಗ್ಗೊಲೆಯಾಗುತ್ತಿದೆ ಎಂಬುವುದಕ್ಕೆ ಒಂದು ಪುಟ್ಟ ನಿದರ್ಶನವಷ್ಟೆ.

ಪ್ರಭುತ್ವದ ಕಾನೂನುಭಂಜಕ ಕೆಲಸಗಳಿಗೆ ಸಾಥ್ ನೀಡದ್ದಕ್ಕಾಗಿ “ಕೇರಳ ಮೂಲದ ಗುಜರಾತಿನ ಉನ್ನತ ಪೋಲೀಸ್ ಅಧಿಕಾರಿ ಶ್ರೀಕುಮಾರನ್‌ರನ್ನು ಯಾವ ರೀತಿ ಸತಾಯಿಸಲಾಯಿತು…ಜಸ್ಟಿಸ್ ಲೋಯಾರನ್ನು ಹೇಗೆ ಮುಗಿಸಲಾಯಿತು… ಇಂತಹ ಒಂದಲ್ಲ, ಎರಡಲ್ಲ ನೂರಾರು ಉದಾಹರಣೆಗಳನ್ನು ನಾವು ಬಿಜೆಪಿಯ ಅಂದಾ ದರ್ಬಾರಿನಲ್ಲಿ ಕಂಡಿದ್ದೇವೆ.

ಸಿಂಧೂ ಅವರು ಬಹಳ ದಕ್ಷ ಅಧಿಕಾರಿಯೆಂದು ಇಲ್ಲದ ವಿಶೇಷಣಗಳನ್ನು ಅವರಿಗೆ ನೀಡಲಾರೆ. ಕೊರೋನಾ ಆರಂಭ ಕಾಲದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಮಂಗಳೂರಿಗೆ ಬಂದಿಳಿದ ಮಂಗಳೂರು ಮುಸ್ಲಿಮರಿಗೆ ನೀಡಲಾದ ಮಾನಸಿಕ ಹಿಂಸೆ ಇನ್ನೂ ನಮ್ಮ ಮನಸಿಂದ ಮಾಸಿಲ್ಲ. ಅದಾಗ್ಯೂ ಆ ಬಳಿಕ ಅವರು ಕೋವಿಡ್ ವಿಷಮಕಾಲದಲ್ಲಿ ನಡೆದುಕೊಂಡ ಬಗೆ, ತೆಗೆದುಕೊಂಡ ಕ್ರಮ ಇತ್ಯಾದಿಗಳನ್ನು ಸ್ವಲ್ಪವಾದರೂ ಮೆಚ್ಚದಿರಲಾಗದು. ವ್ಯವಸ್ಥೆಯ ಉಪಟಳದ ಮಧ್ಯೆಯೂ ತನ್ನ ಮಿತಿಯಲ್ಲಿ ಜನಪರವಾಗಿಯೇ ಸಿಂಧೂ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಸಿಂಧೂ ಹೇಳಿದ ಕಹಿ ಸತ್ಯವೊಂದು ವ್ಯವಸ್ಥೆಯ ಕಣ್ಣು ಕೆಂಪಾಗಿಸಿದೆ ಕೂಡಾ. “ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಅಸಲಿ ಸಂಖ್ಯೆ ಕೇವಲ ನಾಲ್ಕು, ಉಳಿದ ಮೂವತ್ತಾರು ಸಾವುಗಳು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದ್ದು” ಎಂದು ಅವರು ಹೇಳಿದ್ದು, ಕೊರೋನಾ ಕಾಲದ ಇತರ ಸಾವಿಗೆಲ್ಲಾ ಕೊರೋನಾ ಲೇಬಲ್ ಹಚ್ಚಲಾಗುತ್ತಿದೆ ಎನ್ನುವ ಪರೋಕ್ಷ ಸಂದೇಶ ನೀಡುವಂತಿತ್ತು. ಇದರಿಂದ ಬೆತ್ತಲಾದವರು ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆ ಮಾಫಿಯಾ.

ಪ್ರಭುತ್ವ ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಹೇಗೆ ಕೈ ಜೋಡಿಸಿದೆ ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ. ಜಿಲ್ಲೆಯ ಕೆಲ  ದರೋಡೆಕೋರ ಖಾಸಗಿ‌‌ ಆಸ್ಪತ್ರೆಗಳಿಗೆ ಕೊರೋನಾ ಬಂದಾಗಿನಿಂದ ಸುಗ್ಗಿ ಕಾಲ. ಹೇಗೆಂದರೆ ಕೊರೋನಾದಲ್ಲಿ ರೋಗಿ ಅತ್ಯಂತ ಕ್ರಿಟಿಕಲ್ ಆದಾಗ ಮಾತ್ರ ಹೆಚ್ಚಿನ ಕೇರ್ ಮತ್ತು ಔಷಧಿಗಳ ಅಗತ್ಯ ಬೀಳುತ್ತದೆ. 98% ಕೋವಿಡ್ ಪಾಸಿಟಿವ್ ರೋಗಿಗಳನ್ನು ಸುಖಾಸುಮ್ಮನೆ ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಬಂಧಿಸಿಟ್ಟು ಒಟ್ಟು ಅಡ್ಮಿಟೆಡ್ ಅವಧಿಯಲ್ಲಿ ಎರಡು ಪ್ಯಾರಾಸಿಟಮೋಲ್, ನಾಲ್ಕು ಝಿಂಕ್, ನಾಲ್ಕು ಕ್ಯಾಲ್ಸಿಯಂ ಗುಳಿಗೆಗಳನ್ನು ನುಂಗಿಸಿ ಐವತ್ತರಿಂದ-ಅರುವತ್ತು ಸಾವಿರ ಬಿಲ್‌‌‌ ಸುಲಿಯಲಾಗಿದೆ.

ಯಾವಾಗ ಸಿಂಧೂ ಅಸಲಿ ಕೊರೋನಾದಿಂದ ಸಂಭವಿಸಿದ ಸಾವು ಕೇವಲ ನಾಲ್ಕು ಮಾತ್ರ ಎಂದಿದ್ದರೋ ಅಂದಿನಿಂದ ಜನ ಖಾಸಗಿ ಆಸ್ಪತ್ರೆಗಳ ವಿರುದ್ಧ ಹರಿಹಾಯತೊಡಗಿದರು. ಕೆಲ ಪತ್ರಿಕೆಗಳಲ್ಲಿ ಸಿಂಧೂ ಅವರ ಹೇಳಿಕೆಯನ್ನು ಪುಷ್ಟೀಕರಿಸುವಂತಹ ವರದಿಗಳು ಮತ್ತು ಜನಾಭಿಪ್ರಾಯಗಳೂ ಪ್ರಕಟವಾದವು.ಇದು ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಕೈ ಜೋಡಿಸಿದ ಆಳುವ ವರ್ಗಕ್ಕೆ ಚಪ್ಪಲಿಯಲ್ಲಿ ಹೊಡೆದಂತಾಗಿತ್ತು. ಇದಕ್ಕೆಲ್ಲಾ ಒಂದು ಕೊನೆಗಾಣಿಸಲೇಬೇಕಿತ್ತು.

ಇದೀಗ ಆಳುವ ವರ್ಗದ ಕೃಪಾಪೋಷಿತ ಗೂಂಡಾಗಳ ವಿರುದ್ಧ ನೀಡಿದ ಹೇಳಿಕೆಯ ಸಂದರ್ಭದಲ್ಲಿ ವರ್ಗಾವಣೆ ಮಾಡಿ ಪ್ರಭುತ್ವ ಒಂದೇ ಏಟಿಗೆ ಎರಡು ಹಣ್ಣು ಉದುರಿಸಿದೆ. ಒಂದೆಡೆ ಗೂಂಡಾಗಳನ್ನು ಸಂತೈಸಿದಂತೆಯೂ ಆಯಿತು, ಇನ್ನೊಂದೆಡೆ ಖಾಸಗಿ ಆಸ್ಪತ್ರೆ ಮಾಫಿಯಾ ಜೊತೆ ಕೈ ಜೋಡಿಸಿದ ವಿಚಾರದಲ್ಲಾದ ಮುಖಭಂಗಕ್ಕೆ ಪ್ರತೀಕಾರ ತೀರಿಸಿದಂತೆಯೂ ಆಯಿತು.

ಸಿಂಧೂ ಇಂತಹ ನಡೆಗಳನ್ನು ಪ್ರಜ್ಞಾಪೂರ್ವಕವಾಗಿ ಇಟ್ಟರೋ, ಅಲ್ಲವೋ ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಒಟ್ಟಿನಲ್ಲಿ ಅವರ ಇಂತಹ ನಡೆಗಳು ಪ್ರಭುತ್ವಕ್ಕೆ ಮುಜುಗರವುಂಟು ಮಾಡಿದ್ದಂತೂ ಸುಳ್ಳಲ್ಲ.

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ….?

ಇಸ್ಮತ್ ಪಜೀರ್‌, ಯುವ ಬರಹಗಾರರು.


ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...