Homeಮುಖಪುಟದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು...?

ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ....?

- Advertisement -
- Advertisement -

ಅವರು ವ್ಯವಸ್ಥೆಯ ಕೈ‌ಗೊಂಬೆ ಎಂದು ನಾನೇ ಟೀಕಿಸಿದ್ದೆ. ಕೆಲವೊಮ್ಮೆ ಸಂಸದ ನಳಿನ್ ಮತ್ತು ಶಾಸಕ ವೇದವ್ಯಾಸ ಕಾಮತರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದೆಣಿಸಿದ್ದೂ ತಪ್ಪಲ್ಲ. ಬ್ಯೂರೋಕ್ರಾಟ್ಸ್ ಯಾವತ್ತೂ ಸರ್ವ ಸ್ವತಂತ್ರವಾಗಿರುವುದು ಭಾರತದಂತಹ ದೇಶದಲ್ಲಿ ಸಾಧ್ಯವಿಲ್ಲ. ಇಲ್ಲಿರುವುದು ಬನಾನಾ ರಿಪಬ್ಲಿಕ್.

ಪ್ರಭುತ್ವದ ವಿರುದ್ಧ ಅಧಿಕಾರಿಯೊಬ್ಬ ಮಾತನಾಡುವುದನ್ನು ಬಿಜೆಪಿಯವರೆಂದಲ್ಲ, ಯಾರೂ ಸಹಿಸಿರಲಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳುವ ಗೂಂಡಾಪಡೆಗಳ ವಿರುದ್ಧ ಕಾನೂನಾತ್ಮಕವಾಗಿ ಒಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರನ್ನು ಪನಿಶ್ಮೆಂಟ್ ಟ್ರಾನ್ಸ್‌ಫರ್ ಮಾಡಲಾಗಿದೆ. ಬಹಿರಂಗವಾಗಿ ಪ್ರಭುತ್ವ ಹಾಗಂದಿಲ್ಲವಾದರೂ ಅವರನ್ನು ವರ್ಗಾಯಿಸಲಾದ-ಹುದ್ದೆ ಅದನ್ನು ಶ್ರುತಪಡಿಸುತ್ತದೆ.

ಸಿಂಧೂ ಅವರ ವರ್ಗಾವಣೆ ಕಾನೂನು ಭಂಜಕ ಶಕ್ತಿಗಳ ಕೃತ್ಯಕ್ಕೆ ಬಲ ನೀಡುವಂತಿದೆ. ತನ್ಮೂಲಕ ನೀವು ನಿಮ್ಮ ಕೆಲಸವನ್ನು ಸುಸೂತ್ರವಾಗಿ ಮಾಡುತ್ತಿರಿ, ನಿಮಗಾಗಿ ನಾವು ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡುತ್ತೇವೆ ಎಂಬ ಅಭಯದ ಸಂದೇಶವನ್ನು ಪ್ರಭುತ್ವ ಕಾನೂನು ಭಂಜಕರಿಗೆ ನೀಡಿದೆ. ಇದು ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಹಾಡಹಗಲೆ ಕಗ್ಗೊಲೆಯಾಗುತ್ತಿದೆ ಎಂಬುವುದಕ್ಕೆ ಒಂದು ಪುಟ್ಟ ನಿದರ್ಶನವಷ್ಟೆ.

ಪ್ರಭುತ್ವದ ಕಾನೂನುಭಂಜಕ ಕೆಲಸಗಳಿಗೆ ಸಾಥ್ ನೀಡದ್ದಕ್ಕಾಗಿ “ಕೇರಳ ಮೂಲದ ಗುಜರಾತಿನ ಉನ್ನತ ಪೋಲೀಸ್ ಅಧಿಕಾರಿ ಶ್ರೀಕುಮಾರನ್‌ರನ್ನು ಯಾವ ರೀತಿ ಸತಾಯಿಸಲಾಯಿತು…ಜಸ್ಟಿಸ್ ಲೋಯಾರನ್ನು ಹೇಗೆ ಮುಗಿಸಲಾಯಿತು… ಇಂತಹ ಒಂದಲ್ಲ, ಎರಡಲ್ಲ ನೂರಾರು ಉದಾಹರಣೆಗಳನ್ನು ನಾವು ಬಿಜೆಪಿಯ ಅಂದಾ ದರ್ಬಾರಿನಲ್ಲಿ ಕಂಡಿದ್ದೇವೆ.

ಸಿಂಧೂ ಅವರು ಬಹಳ ದಕ್ಷ ಅಧಿಕಾರಿಯೆಂದು ಇಲ್ಲದ ವಿಶೇಷಣಗಳನ್ನು ಅವರಿಗೆ ನೀಡಲಾರೆ. ಕೊರೋನಾ ಆರಂಭ ಕಾಲದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಮಂಗಳೂರಿಗೆ ಬಂದಿಳಿದ ಮಂಗಳೂರು ಮುಸ್ಲಿಮರಿಗೆ ನೀಡಲಾದ ಮಾನಸಿಕ ಹಿಂಸೆ ಇನ್ನೂ ನಮ್ಮ ಮನಸಿಂದ ಮಾಸಿಲ್ಲ. ಅದಾಗ್ಯೂ ಆ ಬಳಿಕ ಅವರು ಕೋವಿಡ್ ವಿಷಮಕಾಲದಲ್ಲಿ ನಡೆದುಕೊಂಡ ಬಗೆ, ತೆಗೆದುಕೊಂಡ ಕ್ರಮ ಇತ್ಯಾದಿಗಳನ್ನು ಸ್ವಲ್ಪವಾದರೂ ಮೆಚ್ಚದಿರಲಾಗದು. ವ್ಯವಸ್ಥೆಯ ಉಪಟಳದ ಮಧ್ಯೆಯೂ ತನ್ನ ಮಿತಿಯಲ್ಲಿ ಜನಪರವಾಗಿಯೇ ಸಿಂಧೂ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಸಿಂಧೂ ಹೇಳಿದ ಕಹಿ ಸತ್ಯವೊಂದು ವ್ಯವಸ್ಥೆಯ ಕಣ್ಣು ಕೆಂಪಾಗಿಸಿದೆ ಕೂಡಾ. “ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಅಸಲಿ ಸಂಖ್ಯೆ ಕೇವಲ ನಾಲ್ಕು, ಉಳಿದ ಮೂವತ್ತಾರು ಸಾವುಗಳು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದ್ದು” ಎಂದು ಅವರು ಹೇಳಿದ್ದು, ಕೊರೋನಾ ಕಾಲದ ಇತರ ಸಾವಿಗೆಲ್ಲಾ ಕೊರೋನಾ ಲೇಬಲ್ ಹಚ್ಚಲಾಗುತ್ತಿದೆ ಎನ್ನುವ ಪರೋಕ್ಷ ಸಂದೇಶ ನೀಡುವಂತಿತ್ತು. ಇದರಿಂದ ಬೆತ್ತಲಾದವರು ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆ ಮಾಫಿಯಾ.

ಪ್ರಭುತ್ವ ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಹೇಗೆ ಕೈ ಜೋಡಿಸಿದೆ ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ. ಜಿಲ್ಲೆಯ ಕೆಲ  ದರೋಡೆಕೋರ ಖಾಸಗಿ‌‌ ಆಸ್ಪತ್ರೆಗಳಿಗೆ ಕೊರೋನಾ ಬಂದಾಗಿನಿಂದ ಸುಗ್ಗಿ ಕಾಲ. ಹೇಗೆಂದರೆ ಕೊರೋನಾದಲ್ಲಿ ರೋಗಿ ಅತ್ಯಂತ ಕ್ರಿಟಿಕಲ್ ಆದಾಗ ಮಾತ್ರ ಹೆಚ್ಚಿನ ಕೇರ್ ಮತ್ತು ಔಷಧಿಗಳ ಅಗತ್ಯ ಬೀಳುತ್ತದೆ. 98% ಕೋವಿಡ್ ಪಾಸಿಟಿವ್ ರೋಗಿಗಳನ್ನು ಸುಖಾಸುಮ್ಮನೆ ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಬಂಧಿಸಿಟ್ಟು ಒಟ್ಟು ಅಡ್ಮಿಟೆಡ್ ಅವಧಿಯಲ್ಲಿ ಎರಡು ಪ್ಯಾರಾಸಿಟಮೋಲ್, ನಾಲ್ಕು ಝಿಂಕ್, ನಾಲ್ಕು ಕ್ಯಾಲ್ಸಿಯಂ ಗುಳಿಗೆಗಳನ್ನು ನುಂಗಿಸಿ ಐವತ್ತರಿಂದ-ಅರುವತ್ತು ಸಾವಿರ ಬಿಲ್‌‌‌ ಸುಲಿಯಲಾಗಿದೆ.

ಯಾವಾಗ ಸಿಂಧೂ ಅಸಲಿ ಕೊರೋನಾದಿಂದ ಸಂಭವಿಸಿದ ಸಾವು ಕೇವಲ ನಾಲ್ಕು ಮಾತ್ರ ಎಂದಿದ್ದರೋ ಅಂದಿನಿಂದ ಜನ ಖಾಸಗಿ ಆಸ್ಪತ್ರೆಗಳ ವಿರುದ್ಧ ಹರಿಹಾಯತೊಡಗಿದರು. ಕೆಲ ಪತ್ರಿಕೆಗಳಲ್ಲಿ ಸಿಂಧೂ ಅವರ ಹೇಳಿಕೆಯನ್ನು ಪುಷ್ಟೀಕರಿಸುವಂತಹ ವರದಿಗಳು ಮತ್ತು ಜನಾಭಿಪ್ರಾಯಗಳೂ ಪ್ರಕಟವಾದವು.ಇದು ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಕೈ ಜೋಡಿಸಿದ ಆಳುವ ವರ್ಗಕ್ಕೆ ಚಪ್ಪಲಿಯಲ್ಲಿ ಹೊಡೆದಂತಾಗಿತ್ತು. ಇದಕ್ಕೆಲ್ಲಾ ಒಂದು ಕೊನೆಗಾಣಿಸಲೇಬೇಕಿತ್ತು.

ಇದೀಗ ಆಳುವ ವರ್ಗದ ಕೃಪಾಪೋಷಿತ ಗೂಂಡಾಗಳ ವಿರುದ್ಧ ನೀಡಿದ ಹೇಳಿಕೆಯ ಸಂದರ್ಭದಲ್ಲಿ ವರ್ಗಾವಣೆ ಮಾಡಿ ಪ್ರಭುತ್ವ ಒಂದೇ ಏಟಿಗೆ ಎರಡು ಹಣ್ಣು ಉದುರಿಸಿದೆ. ಒಂದೆಡೆ ಗೂಂಡಾಗಳನ್ನು ಸಂತೈಸಿದಂತೆಯೂ ಆಯಿತು, ಇನ್ನೊಂದೆಡೆ ಖಾಸಗಿ ಆಸ್ಪತ್ರೆ ಮಾಫಿಯಾ ಜೊತೆ ಕೈ ಜೋಡಿಸಿದ ವಿಚಾರದಲ್ಲಾದ ಮುಖಭಂಗಕ್ಕೆ ಪ್ರತೀಕಾರ ತೀರಿಸಿದಂತೆಯೂ ಆಯಿತು.

ಸಿಂಧೂ ಇಂತಹ ನಡೆಗಳನ್ನು ಪ್ರಜ್ಞಾಪೂರ್ವಕವಾಗಿ ಇಟ್ಟರೋ, ಅಲ್ಲವೋ ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಒಟ್ಟಿನಲ್ಲಿ ಅವರ ಇಂತಹ ನಡೆಗಳು ಪ್ರಭುತ್ವಕ್ಕೆ ಮುಜುಗರವುಂಟು ಮಾಡಿದ್ದಂತೂ ಸುಳ್ಳಲ್ಲ.

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ….?

ಇಸ್ಮತ್ ಪಜೀರ್‌, ಯುವ ಬರಹಗಾರರು.


ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...