Homeಮುಖಪುಟದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು...?

ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ....?

- Advertisement -
- Advertisement -

ಅವರು ವ್ಯವಸ್ಥೆಯ ಕೈ‌ಗೊಂಬೆ ಎಂದು ನಾನೇ ಟೀಕಿಸಿದ್ದೆ. ಕೆಲವೊಮ್ಮೆ ಸಂಸದ ನಳಿನ್ ಮತ್ತು ಶಾಸಕ ವೇದವ್ಯಾಸ ಕಾಮತರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದೆಣಿಸಿದ್ದೂ ತಪ್ಪಲ್ಲ. ಬ್ಯೂರೋಕ್ರಾಟ್ಸ್ ಯಾವತ್ತೂ ಸರ್ವ ಸ್ವತಂತ್ರವಾಗಿರುವುದು ಭಾರತದಂತಹ ದೇಶದಲ್ಲಿ ಸಾಧ್ಯವಿಲ್ಲ. ಇಲ್ಲಿರುವುದು ಬನಾನಾ ರಿಪಬ್ಲಿಕ್.

ಪ್ರಭುತ್ವದ ವಿರುದ್ಧ ಅಧಿಕಾರಿಯೊಬ್ಬ ಮಾತನಾಡುವುದನ್ನು ಬಿಜೆಪಿಯವರೆಂದಲ್ಲ, ಯಾರೂ ಸಹಿಸಿರಲಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳುವ ಗೂಂಡಾಪಡೆಗಳ ವಿರುದ್ಧ ಕಾನೂನಾತ್ಮಕವಾಗಿ ಒಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರನ್ನು ಪನಿಶ್ಮೆಂಟ್ ಟ್ರಾನ್ಸ್‌ಫರ್ ಮಾಡಲಾಗಿದೆ. ಬಹಿರಂಗವಾಗಿ ಪ್ರಭುತ್ವ ಹಾಗಂದಿಲ್ಲವಾದರೂ ಅವರನ್ನು ವರ್ಗಾಯಿಸಲಾದ-ಹುದ್ದೆ ಅದನ್ನು ಶ್ರುತಪಡಿಸುತ್ತದೆ.

ಸಿಂಧೂ ಅವರ ವರ್ಗಾವಣೆ ಕಾನೂನು ಭಂಜಕ ಶಕ್ತಿಗಳ ಕೃತ್ಯಕ್ಕೆ ಬಲ ನೀಡುವಂತಿದೆ. ತನ್ಮೂಲಕ ನೀವು ನಿಮ್ಮ ಕೆಲಸವನ್ನು ಸುಸೂತ್ರವಾಗಿ ಮಾಡುತ್ತಿರಿ, ನಿಮಗಾಗಿ ನಾವು ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡುತ್ತೇವೆ ಎಂಬ ಅಭಯದ ಸಂದೇಶವನ್ನು ಪ್ರಭುತ್ವ ಕಾನೂನು ಭಂಜಕರಿಗೆ ನೀಡಿದೆ. ಇದು ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಹಾಡಹಗಲೆ ಕಗ್ಗೊಲೆಯಾಗುತ್ತಿದೆ ಎಂಬುವುದಕ್ಕೆ ಒಂದು ಪುಟ್ಟ ನಿದರ್ಶನವಷ್ಟೆ.

ಪ್ರಭುತ್ವದ ಕಾನೂನುಭಂಜಕ ಕೆಲಸಗಳಿಗೆ ಸಾಥ್ ನೀಡದ್ದಕ್ಕಾಗಿ “ಕೇರಳ ಮೂಲದ ಗುಜರಾತಿನ ಉನ್ನತ ಪೋಲೀಸ್ ಅಧಿಕಾರಿ ಶ್ರೀಕುಮಾರನ್‌ರನ್ನು ಯಾವ ರೀತಿ ಸತಾಯಿಸಲಾಯಿತು…ಜಸ್ಟಿಸ್ ಲೋಯಾರನ್ನು ಹೇಗೆ ಮುಗಿಸಲಾಯಿತು… ಇಂತಹ ಒಂದಲ್ಲ, ಎರಡಲ್ಲ ನೂರಾರು ಉದಾಹರಣೆಗಳನ್ನು ನಾವು ಬಿಜೆಪಿಯ ಅಂದಾ ದರ್ಬಾರಿನಲ್ಲಿ ಕಂಡಿದ್ದೇವೆ.

ಸಿಂಧೂ ಅವರು ಬಹಳ ದಕ್ಷ ಅಧಿಕಾರಿಯೆಂದು ಇಲ್ಲದ ವಿಶೇಷಣಗಳನ್ನು ಅವರಿಗೆ ನೀಡಲಾರೆ. ಕೊರೋನಾ ಆರಂಭ ಕಾಲದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಮಂಗಳೂರಿಗೆ ಬಂದಿಳಿದ ಮಂಗಳೂರು ಮುಸ್ಲಿಮರಿಗೆ ನೀಡಲಾದ ಮಾನಸಿಕ ಹಿಂಸೆ ಇನ್ನೂ ನಮ್ಮ ಮನಸಿಂದ ಮಾಸಿಲ್ಲ. ಅದಾಗ್ಯೂ ಆ ಬಳಿಕ ಅವರು ಕೋವಿಡ್ ವಿಷಮಕಾಲದಲ್ಲಿ ನಡೆದುಕೊಂಡ ಬಗೆ, ತೆಗೆದುಕೊಂಡ ಕ್ರಮ ಇತ್ಯಾದಿಗಳನ್ನು ಸ್ವಲ್ಪವಾದರೂ ಮೆಚ್ಚದಿರಲಾಗದು. ವ್ಯವಸ್ಥೆಯ ಉಪಟಳದ ಮಧ್ಯೆಯೂ ತನ್ನ ಮಿತಿಯಲ್ಲಿ ಜನಪರವಾಗಿಯೇ ಸಿಂಧೂ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಸಿಂಧೂ ಹೇಳಿದ ಕಹಿ ಸತ್ಯವೊಂದು ವ್ಯವಸ್ಥೆಯ ಕಣ್ಣು ಕೆಂಪಾಗಿಸಿದೆ ಕೂಡಾ. “ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಅಸಲಿ ಸಂಖ್ಯೆ ಕೇವಲ ನಾಲ್ಕು, ಉಳಿದ ಮೂವತ್ತಾರು ಸಾವುಗಳು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದ್ದು” ಎಂದು ಅವರು ಹೇಳಿದ್ದು, ಕೊರೋನಾ ಕಾಲದ ಇತರ ಸಾವಿಗೆಲ್ಲಾ ಕೊರೋನಾ ಲೇಬಲ್ ಹಚ್ಚಲಾಗುತ್ತಿದೆ ಎನ್ನುವ ಪರೋಕ್ಷ ಸಂದೇಶ ನೀಡುವಂತಿತ್ತು. ಇದರಿಂದ ಬೆತ್ತಲಾದವರು ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆ ಮಾಫಿಯಾ.

ಪ್ರಭುತ್ವ ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಹೇಗೆ ಕೈ ಜೋಡಿಸಿದೆ ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ. ಜಿಲ್ಲೆಯ ಕೆಲ  ದರೋಡೆಕೋರ ಖಾಸಗಿ‌‌ ಆಸ್ಪತ್ರೆಗಳಿಗೆ ಕೊರೋನಾ ಬಂದಾಗಿನಿಂದ ಸುಗ್ಗಿ ಕಾಲ. ಹೇಗೆಂದರೆ ಕೊರೋನಾದಲ್ಲಿ ರೋಗಿ ಅತ್ಯಂತ ಕ್ರಿಟಿಕಲ್ ಆದಾಗ ಮಾತ್ರ ಹೆಚ್ಚಿನ ಕೇರ್ ಮತ್ತು ಔಷಧಿಗಳ ಅಗತ್ಯ ಬೀಳುತ್ತದೆ. 98% ಕೋವಿಡ್ ಪಾಸಿಟಿವ್ ರೋಗಿಗಳನ್ನು ಸುಖಾಸುಮ್ಮನೆ ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಬಂಧಿಸಿಟ್ಟು ಒಟ್ಟು ಅಡ್ಮಿಟೆಡ್ ಅವಧಿಯಲ್ಲಿ ಎರಡು ಪ್ಯಾರಾಸಿಟಮೋಲ್, ನಾಲ್ಕು ಝಿಂಕ್, ನಾಲ್ಕು ಕ್ಯಾಲ್ಸಿಯಂ ಗುಳಿಗೆಗಳನ್ನು ನುಂಗಿಸಿ ಐವತ್ತರಿಂದ-ಅರುವತ್ತು ಸಾವಿರ ಬಿಲ್‌‌‌ ಸುಲಿಯಲಾಗಿದೆ.

ಯಾವಾಗ ಸಿಂಧೂ ಅಸಲಿ ಕೊರೋನಾದಿಂದ ಸಂಭವಿಸಿದ ಸಾವು ಕೇವಲ ನಾಲ್ಕು ಮಾತ್ರ ಎಂದಿದ್ದರೋ ಅಂದಿನಿಂದ ಜನ ಖಾಸಗಿ ಆಸ್ಪತ್ರೆಗಳ ವಿರುದ್ಧ ಹರಿಹಾಯತೊಡಗಿದರು. ಕೆಲ ಪತ್ರಿಕೆಗಳಲ್ಲಿ ಸಿಂಧೂ ಅವರ ಹೇಳಿಕೆಯನ್ನು ಪುಷ್ಟೀಕರಿಸುವಂತಹ ವರದಿಗಳು ಮತ್ತು ಜನಾಭಿಪ್ರಾಯಗಳೂ ಪ್ರಕಟವಾದವು.ಇದು ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಕೈ ಜೋಡಿಸಿದ ಆಳುವ ವರ್ಗಕ್ಕೆ ಚಪ್ಪಲಿಯಲ್ಲಿ ಹೊಡೆದಂತಾಗಿತ್ತು. ಇದಕ್ಕೆಲ್ಲಾ ಒಂದು ಕೊನೆಗಾಣಿಸಲೇಬೇಕಿತ್ತು.

ಇದೀಗ ಆಳುವ ವರ್ಗದ ಕೃಪಾಪೋಷಿತ ಗೂಂಡಾಗಳ ವಿರುದ್ಧ ನೀಡಿದ ಹೇಳಿಕೆಯ ಸಂದರ್ಭದಲ್ಲಿ ವರ್ಗಾವಣೆ ಮಾಡಿ ಪ್ರಭುತ್ವ ಒಂದೇ ಏಟಿಗೆ ಎರಡು ಹಣ್ಣು ಉದುರಿಸಿದೆ. ಒಂದೆಡೆ ಗೂಂಡಾಗಳನ್ನು ಸಂತೈಸಿದಂತೆಯೂ ಆಯಿತು, ಇನ್ನೊಂದೆಡೆ ಖಾಸಗಿ ಆಸ್ಪತ್ರೆ ಮಾಫಿಯಾ ಜೊತೆ ಕೈ ಜೋಡಿಸಿದ ವಿಚಾರದಲ್ಲಾದ ಮುಖಭಂಗಕ್ಕೆ ಪ್ರತೀಕಾರ ತೀರಿಸಿದಂತೆಯೂ ಆಯಿತು.

ಸಿಂಧೂ ಇಂತಹ ನಡೆಗಳನ್ನು ಪ್ರಜ್ಞಾಪೂರ್ವಕವಾಗಿ ಇಟ್ಟರೋ, ಅಲ್ಲವೋ ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಒಟ್ಟಿನಲ್ಲಿ ಅವರ ಇಂತಹ ನಡೆಗಳು ಪ್ರಭುತ್ವಕ್ಕೆ ಮುಜುಗರವುಂಟು ಮಾಡಿದ್ದಂತೂ ಸುಳ್ಳಲ್ಲ.

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ….?

ಇಸ್ಮತ್ ಪಜೀರ್‌, ಯುವ ಬರಹಗಾರರು.


ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...