Homeಮುಖಪುಟದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು...?

ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ....?

- Advertisement -
- Advertisement -

ಅವರು ವ್ಯವಸ್ಥೆಯ ಕೈ‌ಗೊಂಬೆ ಎಂದು ನಾನೇ ಟೀಕಿಸಿದ್ದೆ. ಕೆಲವೊಮ್ಮೆ ಸಂಸದ ನಳಿನ್ ಮತ್ತು ಶಾಸಕ ವೇದವ್ಯಾಸ ಕಾಮತರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದೆಣಿಸಿದ್ದೂ ತಪ್ಪಲ್ಲ. ಬ್ಯೂರೋಕ್ರಾಟ್ಸ್ ಯಾವತ್ತೂ ಸರ್ವ ಸ್ವತಂತ್ರವಾಗಿರುವುದು ಭಾರತದಂತಹ ದೇಶದಲ್ಲಿ ಸಾಧ್ಯವಿಲ್ಲ. ಇಲ್ಲಿರುವುದು ಬನಾನಾ ರಿಪಬ್ಲಿಕ್.

ಪ್ರಭುತ್ವದ ವಿರುದ್ಧ ಅಧಿಕಾರಿಯೊಬ್ಬ ಮಾತನಾಡುವುದನ್ನು ಬಿಜೆಪಿಯವರೆಂದಲ್ಲ, ಯಾರೂ ಸಹಿಸಿರಲಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳುವ ಗೂಂಡಾಪಡೆಗಳ ವಿರುದ್ಧ ಕಾನೂನಾತ್ಮಕವಾಗಿ ಒಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರನ್ನು ಪನಿಶ್ಮೆಂಟ್ ಟ್ರಾನ್ಸ್‌ಫರ್ ಮಾಡಲಾಗಿದೆ. ಬಹಿರಂಗವಾಗಿ ಪ್ರಭುತ್ವ ಹಾಗಂದಿಲ್ಲವಾದರೂ ಅವರನ್ನು ವರ್ಗಾಯಿಸಲಾದ-ಹುದ್ದೆ ಅದನ್ನು ಶ್ರುತಪಡಿಸುತ್ತದೆ.

ಸಿಂಧೂ ಅವರ ವರ್ಗಾವಣೆ ಕಾನೂನು ಭಂಜಕ ಶಕ್ತಿಗಳ ಕೃತ್ಯಕ್ಕೆ ಬಲ ನೀಡುವಂತಿದೆ. ತನ್ಮೂಲಕ ನೀವು ನಿಮ್ಮ ಕೆಲಸವನ್ನು ಸುಸೂತ್ರವಾಗಿ ಮಾಡುತ್ತಿರಿ, ನಿಮಗಾಗಿ ನಾವು ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡುತ್ತೇವೆ ಎಂಬ ಅಭಯದ ಸಂದೇಶವನ್ನು ಪ್ರಭುತ್ವ ಕಾನೂನು ಭಂಜಕರಿಗೆ ನೀಡಿದೆ. ಇದು ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಹಾಡಹಗಲೆ ಕಗ್ಗೊಲೆಯಾಗುತ್ತಿದೆ ಎಂಬುವುದಕ್ಕೆ ಒಂದು ಪುಟ್ಟ ನಿದರ್ಶನವಷ್ಟೆ.

ಪ್ರಭುತ್ವದ ಕಾನೂನುಭಂಜಕ ಕೆಲಸಗಳಿಗೆ ಸಾಥ್ ನೀಡದ್ದಕ್ಕಾಗಿ “ಕೇರಳ ಮೂಲದ ಗುಜರಾತಿನ ಉನ್ನತ ಪೋಲೀಸ್ ಅಧಿಕಾರಿ ಶ್ರೀಕುಮಾರನ್‌ರನ್ನು ಯಾವ ರೀತಿ ಸತಾಯಿಸಲಾಯಿತು…ಜಸ್ಟಿಸ್ ಲೋಯಾರನ್ನು ಹೇಗೆ ಮುಗಿಸಲಾಯಿತು… ಇಂತಹ ಒಂದಲ್ಲ, ಎರಡಲ್ಲ ನೂರಾರು ಉದಾಹರಣೆಗಳನ್ನು ನಾವು ಬಿಜೆಪಿಯ ಅಂದಾ ದರ್ಬಾರಿನಲ್ಲಿ ಕಂಡಿದ್ದೇವೆ.

ಸಿಂಧೂ ಅವರು ಬಹಳ ದಕ್ಷ ಅಧಿಕಾರಿಯೆಂದು ಇಲ್ಲದ ವಿಶೇಷಣಗಳನ್ನು ಅವರಿಗೆ ನೀಡಲಾರೆ. ಕೊರೋನಾ ಆರಂಭ ಕಾಲದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಮಂಗಳೂರಿಗೆ ಬಂದಿಳಿದ ಮಂಗಳೂರು ಮುಸ್ಲಿಮರಿಗೆ ನೀಡಲಾದ ಮಾನಸಿಕ ಹಿಂಸೆ ಇನ್ನೂ ನಮ್ಮ ಮನಸಿಂದ ಮಾಸಿಲ್ಲ. ಅದಾಗ್ಯೂ ಆ ಬಳಿಕ ಅವರು ಕೋವಿಡ್ ವಿಷಮಕಾಲದಲ್ಲಿ ನಡೆದುಕೊಂಡ ಬಗೆ, ತೆಗೆದುಕೊಂಡ ಕ್ರಮ ಇತ್ಯಾದಿಗಳನ್ನು ಸ್ವಲ್ಪವಾದರೂ ಮೆಚ್ಚದಿರಲಾಗದು. ವ್ಯವಸ್ಥೆಯ ಉಪಟಳದ ಮಧ್ಯೆಯೂ ತನ್ನ ಮಿತಿಯಲ್ಲಿ ಜನಪರವಾಗಿಯೇ ಸಿಂಧೂ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಸಿಂಧೂ ಹೇಳಿದ ಕಹಿ ಸತ್ಯವೊಂದು ವ್ಯವಸ್ಥೆಯ ಕಣ್ಣು ಕೆಂಪಾಗಿಸಿದೆ ಕೂಡಾ. “ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಅಸಲಿ ಸಂಖ್ಯೆ ಕೇವಲ ನಾಲ್ಕು, ಉಳಿದ ಮೂವತ್ತಾರು ಸಾವುಗಳು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿದ್ದು” ಎಂದು ಅವರು ಹೇಳಿದ್ದು, ಕೊರೋನಾ ಕಾಲದ ಇತರ ಸಾವಿಗೆಲ್ಲಾ ಕೊರೋನಾ ಲೇಬಲ್ ಹಚ್ಚಲಾಗುತ್ತಿದೆ ಎನ್ನುವ ಪರೋಕ್ಷ ಸಂದೇಶ ನೀಡುವಂತಿತ್ತು. ಇದರಿಂದ ಬೆತ್ತಲಾದವರು ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆ ಮಾಫಿಯಾ.

ಪ್ರಭುತ್ವ ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಹೇಗೆ ಕೈ ಜೋಡಿಸಿದೆ ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ. ಜಿಲ್ಲೆಯ ಕೆಲ  ದರೋಡೆಕೋರ ಖಾಸಗಿ‌‌ ಆಸ್ಪತ್ರೆಗಳಿಗೆ ಕೊರೋನಾ ಬಂದಾಗಿನಿಂದ ಸುಗ್ಗಿ ಕಾಲ. ಹೇಗೆಂದರೆ ಕೊರೋನಾದಲ್ಲಿ ರೋಗಿ ಅತ್ಯಂತ ಕ್ರಿಟಿಕಲ್ ಆದಾಗ ಮಾತ್ರ ಹೆಚ್ಚಿನ ಕೇರ್ ಮತ್ತು ಔಷಧಿಗಳ ಅಗತ್ಯ ಬೀಳುತ್ತದೆ. 98% ಕೋವಿಡ್ ಪಾಸಿಟಿವ್ ರೋಗಿಗಳನ್ನು ಸುಖಾಸುಮ್ಮನೆ ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಬಂಧಿಸಿಟ್ಟು ಒಟ್ಟು ಅಡ್ಮಿಟೆಡ್ ಅವಧಿಯಲ್ಲಿ ಎರಡು ಪ್ಯಾರಾಸಿಟಮೋಲ್, ನಾಲ್ಕು ಝಿಂಕ್, ನಾಲ್ಕು ಕ್ಯಾಲ್ಸಿಯಂ ಗುಳಿಗೆಗಳನ್ನು ನುಂಗಿಸಿ ಐವತ್ತರಿಂದ-ಅರುವತ್ತು ಸಾವಿರ ಬಿಲ್‌‌‌ ಸುಲಿಯಲಾಗಿದೆ.

ಯಾವಾಗ ಸಿಂಧೂ ಅಸಲಿ ಕೊರೋನಾದಿಂದ ಸಂಭವಿಸಿದ ಸಾವು ಕೇವಲ ನಾಲ್ಕು ಮಾತ್ರ ಎಂದಿದ್ದರೋ ಅಂದಿನಿಂದ ಜನ ಖಾಸಗಿ ಆಸ್ಪತ್ರೆಗಳ ವಿರುದ್ಧ ಹರಿಹಾಯತೊಡಗಿದರು. ಕೆಲ ಪತ್ರಿಕೆಗಳಲ್ಲಿ ಸಿಂಧೂ ಅವರ ಹೇಳಿಕೆಯನ್ನು ಪುಷ್ಟೀಕರಿಸುವಂತಹ ವರದಿಗಳು ಮತ್ತು ಜನಾಭಿಪ್ರಾಯಗಳೂ ಪ್ರಕಟವಾದವು.ಇದು ಖಾಸಗಿ ಆಸ್ಪತ್ರೆ ಮಾಫಿಯಾದೊಂದಿಗೆ ಕೈ ಜೋಡಿಸಿದ ಆಳುವ ವರ್ಗಕ್ಕೆ ಚಪ್ಪಲಿಯಲ್ಲಿ ಹೊಡೆದಂತಾಗಿತ್ತು. ಇದಕ್ಕೆಲ್ಲಾ ಒಂದು ಕೊನೆಗಾಣಿಸಲೇಬೇಕಿತ್ತು.

ಇದೀಗ ಆಳುವ ವರ್ಗದ ಕೃಪಾಪೋಷಿತ ಗೂಂಡಾಗಳ ವಿರುದ್ಧ ನೀಡಿದ ಹೇಳಿಕೆಯ ಸಂದರ್ಭದಲ್ಲಿ ವರ್ಗಾವಣೆ ಮಾಡಿ ಪ್ರಭುತ್ವ ಒಂದೇ ಏಟಿಗೆ ಎರಡು ಹಣ್ಣು ಉದುರಿಸಿದೆ. ಒಂದೆಡೆ ಗೂಂಡಾಗಳನ್ನು ಸಂತೈಸಿದಂತೆಯೂ ಆಯಿತು, ಇನ್ನೊಂದೆಡೆ ಖಾಸಗಿ ಆಸ್ಪತ್ರೆ ಮಾಫಿಯಾ ಜೊತೆ ಕೈ ಜೋಡಿಸಿದ ವಿಚಾರದಲ್ಲಾದ ಮುಖಭಂಗಕ್ಕೆ ಪ್ರತೀಕಾರ ತೀರಿಸಿದಂತೆಯೂ ಆಯಿತು.

ಸಿಂಧೂ ಇಂತಹ ನಡೆಗಳನ್ನು ಪ್ರಜ್ಞಾಪೂರ್ವಕವಾಗಿ ಇಟ್ಟರೋ, ಅಲ್ಲವೋ ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಒಟ್ಟಿನಲ್ಲಿ ಅವರ ಇಂತಹ ನಡೆಗಳು ಪ್ರಭುತ್ವಕ್ಕೆ ಮುಜುಗರವುಂಟು ಮಾಡಿದ್ದಂತೂ ಸುಳ್ಳಲ್ಲ.

ಆಧುನಿಕ ಕಾಲದ ರಾಜನಂತಹ ಜಿಲ್ಲಾಧಿಕಾರಿ ಹುದ್ದೆಯನ್ನು ತೊರೆದು ಹೊರಬರಲು ಎಲ್ಲರೂ ಸಸಿಕಾಂಥ್ ಸೆಂಥಿಲ್ ಅಲ್ಲವಲ್ಲಾ….?

ಇಸ್ಮತ್ ಪಜೀರ್‌, ಯುವ ಬರಹಗಾರರು.


ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...